ಬೆಂಗಳೂರು ಅ 30 : ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಂತ್ಯಕ್ರಿಯೆ ನಾಳೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಯಿ ಹೇಳಿದ್ದಾರೆ. ಪುನೀತ್ ಮಗಳು ದೆಹಲಿ ತಲುಪಿದ್ದಾರೆ.ಅವರು ಬೆಂಗಳೂರಿಗೆ ಸಂಜೆ 7 ಗಂಟೆಗೆ ಬರುವ ಸಾಧ್ಯತೆ ಇದೆ. ಹೀಗಾಗಿ ಅಂತ್ಯಕ್ರಿಯೆ ನಾಳೆ ಸಂಜೆ ನಡೆಸಲಾಗುವುದು ಎಂದು ಸಿಎಂ ಹಾಗೂ ರಾಘವೇಂದ್ರ ರಾಜ್ ಕುಮಾರ್ ತಿಳಿಸಿದ್ದಾರೆ. ಅಲ್ಲದೇ ಲಕ್ಷಾಂತರ ಅಭಿಮಾನಿಗಳು ಕೂಡ ಕಂಠೀರವ ಸ್ಟೇಡಿಯಂ ಕಡೆ ಅಂತಿಮ ದರ್ಶನಕ್ಕೆ ಬರುತ್ತಿದ್ದಾರೆ. ಹೀಗಾಗಿ ಅಂತಿಮ ದರ್ಶನಕ್ಕೆ ಇನ್ನು ಒಂದು ದಿನ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ತಿಳಿಸಿದರು.
ಆರೋಗ್ಯ
ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ
ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.