• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಬಿಪಿಎಲ್ ಪಡಿತರಿಗೆ ಮತ್ತೊಂದು ಬಂಪರ್!

Preetham Kumar P by Preetham Kumar P
in ರಾಜ್ಯ
bpl
0
SHARES
0
VIEWS
Share on FacebookShare on Twitter

ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಕ್ಕೆ ಏಪ್ರಿಲ್ ತಿಂಗಳಿನಿಂದ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿಯನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನಿನ್ನೆ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಈ ಘೋಷಣೆ ಮಾಡಿದ್ದಾರೆ. ಪ್ರಸ್ತುತ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಒಬ್ಬರಿಗೆ 5 ಕೆಜಿಯಂತೆ ಆಹಾರಧಾನ್ಯವನ್ನು ಪ್ರತಿ ತಿಂಗಳು ಹಂಚಲಾಗುತ್ತಿದೆ. ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿ ಉಚಿತವಾಗಿ ನೀಡಲು ಆದೇಶಿಸಿದ್ದು, ಎಪ್ರಿಲ್ ತಿಂಗಳಿನಿಂದ ಇದು ಜಾರಿಗೆ ಬರಲಿದೆ ಎಂದಿದ್ದಾರೆ.

ration card

ಸರ್ಕಾರದ ಈ ನಿರ್ಧಾರದಿಂದಾಗಿ 1.14 ಕೋಟಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಪ್ರಯೋಜನ ಸಿಗಲಿದೆ. ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ಪ್ರಸ್ತುತ ಬಿಪಿಎಲ್ ಕುಟುಂಬಗಳಿಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ. ಇನ್ನು ಮುಂದೆ ಹೆಚ್ಚುವರಿಯಾಗಿ ಒಂದು ಕೆಜಿ ನೀಡಲಾಗುವುದು ಎಂದು ತಿಳಿಸಿದರು. ರಾಷ್ಟ್ರದಲ್ಲೇ ಕರ್ನಾಟಕ ಪ್ರಪ್ರಥಮವಾಗಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಮಗ್ರ ವಿವಿ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ.

ವಿದೇಶದಲ್ಲಿರುವ ದೇಶಿ ಸಂಜಾತರ ಜ್ಞಾನವನ್ನು ಸ್ವದೇಶದಲ್ಲಿ ಬಳಸಿಕೊಳ್ಳಲು ಮರಳಿ ತಾಯ್ನಾಡಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲು ಸೂಕ್ತ ನೀತಿ ರಚನೆ ಮತ್ತು ಅನುದಾನ ಬಿಡುಗಡೆ ಮಾಡುವ ಆಶ್ವಾಸನೆಯನ್ನು ನೀಡಿದರು. ತಮ್ಮ 30 ಪುಟಗಳ ಭಾಷಣದಲ್ಲಿ ಯಾವುದೇ ಹೊಸ ಯೋಜನೆಗಳನ್ನಾಗಿ ಅಥವಾ ಕಾರ್ಯಕ್ರಮಗಳನ್ನು ಘೋಷಣೆ ಮಾಡದ ರಾಜ್ಯಪಾಲರು, ರಾಜ್ಯ ಸರ್ಕಾರ ಕೋವಿಡ್ ನಿರ್ವಹಣೆಗಾಗಿ ನಡೆಸಿದ ಹೋರಾಟ ಹಾಗೂ ಜಾರಿಗೆ ತಂದಿರುವ ಕಾರ್ಯಕ್ರಮಗಳ ಅನುಷ್ಠಾನ ಹೊರತುಪಡಿಸಿದರೆ ಸರ್ಕಾರದ ಮುಂದುವರೆದ ಕಾರ್ಯಕ್ರಮಗಳನ್ನು ಮಾತ್ರ ಪ್ರಸ್ತಾಪಿಸಿದ್ದಾರೆ.

ration


ಹಾಲಿನ ಉತ್ಪಾದನೆಯಲ್ಲಿ 11ನೇ ಸ್ಥಾನದಲ್ಲಿರುವ ರಾಜ್ಯವು ಮೊಟ್ಟೆ(Egg Production) ಉತ್ಪಾದನೆಯಲ್ಲಿ 6ನೇ ಸ್ಥಾನದಲ್ಲಿದೆ. ಮಾಂಸ(Meat) ಉತ್ಪಾದನೆಯಲ್ಲಿ 10 ನೇ ಸ್ಥಾನದಲ್ಲಿದೆ. ರಾಜ್ಯದ ಒಟ್ಟು ಜಿಡಿಪಿಗೆ(GDP) ಶೇ.3.53ರಷ್ಟು ಕೊಡುಗೆ ನೀಡುತ್ತಿದೆ. ಸಾರ್ವಜನಿಕ ವ್ಯವಹಾರ ಸೂಚ್ಯಂಕದಲ್ಲಿ (ಬೆಳವಣಿಗೆ, ಸಮಾನತೆ, ಸುಸ್ಥಿರತೆ) 4ನೇ ಸ್ಥಾನದಲ್ಲಿದೆ. 2019-20ರ ಎಸ್‌ಡಿಜಿ ಭಾರತ ಸೂಚ್ಯಂಕದ ಪ್ರಕಾರ 6ನೇ ಸ್ಥಾನದಲ್ಲಿತ್ತು. 2020-21ರ ವರದಿ ಪ್ರಕಾರ ರಾಜ್ಯದ ಶ್ರೇಯಾಂಕ 4ಕ್ಕೆ ಏರಿದೆ. ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಅನುಷ್ಠಾನಗೊಳಿಸುವಲ್ಲಿ 11 ನೇ ಸ್ಥಾನದಲ್ಲಿದ್ದೇವೆ ಎಂದು ರಾಜ್ಯಪಾಲರು ಇದೇ ವೇಳೆ ಮಾಹಿತಿ ನೀಡಿದರು.

bpl


ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ಬಗ್ಗೆ ರಾಜ್ಯಪಾಲರ ವಿವರ
• ಕೋವಿಡ್ ಮೊದಲ ಡೋಸ್ ವಿತರಣೆಯಲ್ಲಿ ಶೇ.100, 2ನೇ ಡೋಸ್ನಲ್ಲಿ ಶೇ.85 ಸಾಧನೆ
• 1500 ಕೋಟಿ ವೆಚ್ಚದಲ್ಲಿ ನೀರಾವರಿ ಕ್ರಾಂತಿ, 55 ಅಣೆಕಟ್ಟುಗಳ ಪುನಶ್ಚೇತನಕ್ಕೆ ತೀರ್ಮಾನ
• ರಾಜ್ಯದ ರೈತರ ಆದಾಯ ಹೆಚ್ಚಿಸಲು ಸಕಲ ಕ್ರಮ. ದ್ವಿತೀಯ ಕೃಷಿ ನಿರ್ದೇಶನಾಲಯ ಸೃಷ್ಟಿ
• ರಾಷ್ಟ್ರದಲ್ಲಿಯೇ ಪ್ರಪ್ರಥಮವಾಗಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದ ಹೆಗ್ಗಳಿಕೆ
• ಹಳ್ಳಿಗಳಲ್ಲೂ ಎಲ್ಲ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಅರ್ಜಿ ಸ್ವೀಕಾರಕ್ಕೆ ಗ್ರಾಮ ಒನ್ ಶುರು

Tags: bplKarnatakarationcardricestate

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.