Covid19: CM ಯಡಿಯೂರಪ್ಪ ಸಂಪೂರ್ಣ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾದರು.

ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಕೋವಿಡ್-19 ನಿಂದ ಸಂಪೂರ್ಣ ಗುಣಮುಖರಾಗಿದ್ದು, ಮಣಿಪಾಲ ಆಸ್ಪತ್ರೆ ವೈದ್ಯರು ಹೂಗುಚ್ಛ ನೀಡಿ ಬೀಳ್ಕೊಟ್ಟರು. ಇದೇ ವೇಳೆ ತಮಗೆ ಚಿಕಿತ್ಸೆ ನೀಡಿದ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳಿಗೆ ಧನ್ಯವಾದ ಸಲ್ಲಿಸಿ ಯಡಿಯೂರಪ್ಪ ಆಸ್ಪತ್ರೆಯಿಂದ ನಿರ್ಗಮಿಸಿದರು.

ಯಡಿಯೂರಪ್ಪ ಅವರಿಗೆ ಆಗಸ್ಟ್‌ 2 ರಂದು ಕೊರೊನಾ ವೈರಸ್‌ ತಗುಲಿರುವುದು ದೃಢಪಟ್ಟಿತ್ತು. ಆದರೆ ಅವರಿಗೆ ಯಾವುದೇ ರೋಗ ಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ಹೀಗಿದ್ದೂ ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯರ ಸಲಹೆಯಂತೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾಗಿದ್ದರೂ ಅಲ್ಲಿಂದಲೇ ತಮ್ಮ ಕರ್ತವ್ಯವನ್ನು ಮುಂದುವರಿಸಿದ್ದರು.

Exit mobile version