• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಯಡಿಯೂರಪ್ಪ ರಾಜಕೀಯ ವಿದಾಯ: ಬಿಜೆಪಿ ಲಿಂಗಾಯತ ಮತಬ್ಯಾಂಕ್‌ ಬೀಳುತ್ತಾ ಭಾರೀ ಏಟು ?

Rashmitha Anish by Rashmitha Anish
in ರಾಜಕೀಯ, ರಾಜ್ಯ
ವಿಧಾನಸಭೆಯಲ್ಲಿ ಇದು ನನ್ನ ಕೊನೆಯ ಭಾಷಣ: ಯಡಿಯೂರಪ್ಪ ರಾಜಕೀಯಕ್ಕೆ ಗುಡ್ ಬೈ
0
SHARES
27
VIEWS
Share on FacebookShare on Twitter

Bangalore: ಕರ್ನಾಟಕದ ರಾಜಕೀಯದಲ್ಲಿ ಲಿಂಗಾಯತ ಮತಬ್ಯಾಂಕ್‌ ಅತ್ಯಂತ ಪ್ರಮುಖ ಪಾತ್ರ ವಹಿಸುವ ಮೂಲಕ, ಅನೇಕ ದಶಕಗಳಿಂದ ರಾಜ್ಯ ರಾಜಕೀಯದಲ್ಲಿ ತನ್ನದೇ (bsy retirement affects bjp) ಆದ ಪ್ರಾಬಲ್ಯ ಹೊಂದಿದೆ.

ರಾಜ್ಯದ ಜನಸಂಖ್ಯೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಲಿಂಗಾಯತ(Lingayath) ಸಮುದಾಯ ರಾಜಕೀಯ ಮತ ಬ್ಯಾಂಕ್‌ದೃಷ್ಟಿಯಿಂದ ರಾಜಕೀಯ ಪಕ್ಷಗಳಿಗೆ ಲಿಂಗಾಯತ ಸಮುದಾಯದ ಬೆಂಬಲ ಅಗತ್ಯ.

ಈ ನಿಟ್ಟಿನಲ್ಲೇ ಕರ್ನಾಟಕದಲ್ಲಿ ಅನೇಕ ವರ್ಷಗಳಿಂದ ರಾಜಕೀಯ ತಂತ್ರಗಾರಿಕೆ ರೂಪುಗೊಳ್ಳುತ್ತಿದೆ.

bsy retirement affects bjp

ಉತ್ತರ ಕರ್ನಾಟಕದ ಬಹುತೇಕ ಕ್ಷೇತ್ರಗಳಲ್ಲಿ ಲಿಂಗಾಯತ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದೆ. ರಾಜ್ಯದಲ್ಲಿ ಅಧಿಕಾರ ಹಿಡಿಯಬೇಕಾದರೆ, ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯದ ಬೆಂಬಲ ಅತ್ಯಗತ್ಯ.

ಹೀಗಾಗಿಯೇ ಕಾಂಗ್ರೆಸ್‌ ಮತ್ತು ಬಿಜೆಪಿ(BJP) ಪಕ್ಷಗಳು ಲಿಂಗಾಯತ ಮತಬ್ಯಾಂಕ್‌ ಸೆಳೆಯಲು ನಿರಂತರ ಪ್ರಯತ್ನ ನಡೆಸುತ್ತಿವೆ.

ರಾಜ್ಯದಲ್ಲಿ ಲಿಂಗಾಯತ ಮತಬ್ಯಾಂಕ್‌ ಕಾಲಘಟ್ಟಕ್ಕೆ ಅನುಗುಣವಾಗಿ ತನ್ನ ನಿಷ್ಠೆಯನ್ನು ಬದಲಿಸಿರುವುದನ್ನು ಕಾಣಬಹುದು.

ಈ ಹಿಂದೆ ಎಸ್.ನಿಜಲಿಂಗಪ್ಪ(S.Nijalingappa) ಅವರು ಮುಖ್ಯಮಂತ್ರಿಯಾಗಿದ್ದಾಗ ಲಿಂಗಾಯತ ಸಮುದಾಯ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲವಾಗಿತ್ತು.

ತದನಂತರ ವಿರೇಂದ್ರ ಪಾಟೀಲ್‌ ಅವರು ಮುಖ್ಯಮಂತ್ರಿಯಾದ ನಂತರ ಲಿಂಗಾಯತ (bsy retirement affects bjp) ಸಮುದಾಯ ಕಾಂಗ್ರೆಸ್‌ ಪಕ್ಷದೊಂದಿಗೆಯೇ ಗುರುತಿಸಿಕೊಂಡಿತು.

ಆದರೆ ಕಾಂಗ್ರೆಸ್‌ ಪಕ್ಷದ ಒಳ ರಾಜಕೀಯದಿಂದ ಅನಿವಾರ್ಯವಾಗಿ ಮುಖ್ಯಮಂತ್ರಿ ಸ್ಥಾನದಿಂದ ವಿರೇಂದ್ರ ಪಾಟೀಲರನ್ನು (Virendra Patil) ಕಾಂಗ್ರೆಸ್‌ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಪರಿಣಾಮ,

ಇಡೀ ಲಿಂಗಾಯತ ಸಮುದಾಯ ಕಾಂಗ್ರೆಸ್‌ ಪಕ್ಷದೊಂದಿಗೆ ಮುನಿಸಿಕೊಂಡಿತು. ವಿರೇಂದ್ರ ಪಾಟೀಲರ ನಂತರ ಇಂದಿನವರೆಗೂ ಲಿಂಗಾಯತ ಸಮುದಾಯ ಕಾಂಗ್ರೆಸ್‌ ಪಕ್ಷದೊಂದಿಗೆ ಅಂತರ ಕಾಯ್ದುಕೊಂಡೆ ಬಂದಿದೆ.

bsy retirement affects bjp

ವಿರೇಂದ್ರ ಪಾಟೀಲರ ನಂತರ ಬಿಜೆಪಿಯ ಬಿ.ಎಸ್.ಯಡಿಯೂರಪ್ಪ (B.S.Yeddyurappa)ನಿಧಾನವಾಗಿ ಲಿಂಗಾಯತ ಸಮುದಾಯದ ಮೇಲೆ ಹಿಡಿತ ಸಾಧಿಸಿದ ಪರಿಣಾಮ, ಲಿಂಗಾಯತ ಸಮುದಾಯ ಬಿಜೆಪಿ ಬೆಂಬಲಕ್ಕೆ ನಿಂತಿತು.

ಅದರ ಪರಿಣಾಮವಾಗಿಯೇ ಕರ್ನಾಟಕದಲ್ಲಿ ಬಿಜೆಪಿ ಪ್ರಬಲ ನೆಲೆ ಕಂಡುಕೊಂಡಿತು.

2006ರ ವೇಳೆಗೆ ಅಧಿಕಾರ ಹಿಡಿಯುವ ಮಟ್ಟಕ್ಕೂ ಬಿಜೆಪಿ (BJP) ಬೆಳೆಯಿತು. ಬಿ.ಎಸ್.ಯಡಿಯೂರಪ್ಪ ಲಿಂಗಾಯತ ನಾಯಕನಾಗಿ ಗುರುತಿಸಿಕೊಂಡ ನಂತರ ಬಿಜೆಪಿಯೇ ಮುಂದಿನ ಒಂದು ದಶಕಗಳ ಕಾಲ, ಪ್ರಬಲ ರಾಜಕೀಯ ಶಕ್ತಿಯಾಗಿ ಬೆಳೆಯಿತು.


ಆದರೆ ಇದೀಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿ.ಎಸ್.ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಅಧಿಕಾರದಿಂದ ದೂರವಿಡಲಾಗಿದೆ.

ಹೀಗಾಗಿಯೇ 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಲಿಂಗಾಯತ ಸಮುದಾಯ ಯಾವ ಪಕ್ಷಕ್ಕೆ ಬೆಂಬಲವಾಗಿ ನಿಲ್ಲಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಸುಮಾರು ಎರಡು ದಶಕಗಳ ಕಾಲ ಬಿ.ಎಸ್.ಯಡಿಯೂರಪ್ಪ ಲಿಂಗಾಯತ ನಾಯಕರಾಗಿ, ಬಿಜೆಪಿ ಪಕ್ಷಕ್ಕೆ ಶಕ್ತಿಯಾಗಿದ್ದರು.

ಆದರೆ ಲಿಂಗಾಯತ ಶಕ್ತಿಯಾಗಿದ್ದ ಯಡಿಯೂರಪ್ಪ ಅವರಿಲ್ಲದ ಬಿಜೆಪಿ ಲಿಂಗಾಯತ ಸಮುದಾಯದ ವಿಶ್ವಾಸ ಗಳಿಸಲಿದೆಯೇ.? ಎಂಬ ಪ್ರಶ್ನೆಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಸಿಗಲಿದೆ.

-ಮಹೇಶ್.ಪಿ.ಎಚ್

Tags: bjpBS YediyurappaKarnatakapolitics

Related News

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಕೀಯ

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ

March 23, 2023
ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ
ರಾಜಕೀಯ

ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ

March 23, 2023
ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ! ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ
Vijaya Time

ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ! ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ

March 23, 2023
ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.