ಮರಕ್ಕೆ ಬಸ್ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

ಕೊಡಗು, ಜು. 19: ಚಾಲಕನ ನಿಯಂತ್ರಣ ತಪ್ಪಿ ಅರಣ್ಯಕ್ಕೆ ನುಗ್ಗಿದ ಐರಾವತ ಬಸ್ ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ಬಸ್ ಬೆಂಗಳೂರಿನಿಂದ ಕೇರಳಕ್ಕೆ ತೆರಳುತಿತ್ತು. ವಿರಾಜಪೇಟೆ ತಾಲೂಕಿನ ಪೆರುಂಬಾಡಿ ಬಳಿ ಬಸ್ ಬ್ರೇಕ್ ವಿಫಲವಾಗಿ ಅಪಘಾತವಾಗಿದೆ. ಅಪಘಾತದಿಂದ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ವೀರಾಜಪೇಟೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತಯೇ ಸ್ಥಳೀಯರು ನೆರವಿಗೆ ಧಾವಿಸಿದರು. ವೀರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version