• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಆನ್‌ಲೈನ್‌ ಟಿಕೆಟ್‌ ಪ್ರಯಾಣಿಕರೇ ಎಚ್ಚರ !ಸಾರಿಗೆ ಇಲಾಖೆಯಿಂದ ಖಾಸಗಿ ವಾಹನಗಳ ಮಾಲೀಕರಿಗೆ ಖಡಕ್ ಎಚ್ಚರಿಕೆ!

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಆನ್‌ಲೈನ್‌ ಟಿಕೆಟ್‌ ಪ್ರಯಾಣಿಕರೇ ಎಚ್ಚರ !ಸಾರಿಗೆ ಇಲಾಖೆಯಿಂದ ಖಾಸಗಿ ವಾಹನಗಳ ಮಾಲೀಕರಿಗೆ ಖಡಕ್ ಎಚ್ಚರಿಕೆ!
0
SHARES
371
VIEWS
Share on FacebookShare on Twitter

Bengaluru : ಗಣೇಶ ಚತುರ್ಥಿ ಸೇರಿ ಸಾಲು ಸಾಲು ಹಬ್ಬಗಳು ಹಾಗೂ ವಾರಾಂತ್ಯದ ದಿನಗಳಲ್ಲಿ ಖಾಸಗಿ ಬಸ್‌ಗಳ ಟಿಕೆಟ್‌ (Bus ticket price increase) ದರವನ್ನು ವಿಪರೀತವಾಗಿ ಏರಿಕೆ

ಮಾಡಿದ್ದೂ ಇದರಿಂದ ಪ್ರಯಾಣಿಕರಿಗೆ ಅನಾನುಕೂಲ ಆಗುತ್ತಿರುವುದರಿಂದ ಪ್ರಯಾಣಿಕರ ಜೇಬಿಗೂ ಕತ್ತರಿ ಬೀಳುತ್ತಿದೆ. ಈ ಹಿನ್ನೆಲೆ ಖಾಸಗಿ ಬಸ್‌ ಮಾಲೀಕರು ಹಾಗೂ ಆನ್‌ಲೈನ್‌ (Online)

ಟಿಕೆಟ್‌ ನೀಡುವ ವಿತರಕರಿಗೆ ಕರ್ನಾಟಕ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದ್ದು, ಟಿಕೆಟ್‌ ದರವನ್ನು ಹೆಚ್ಚಿಸಿ ಪ್ರಯಾಣಿಕರಿಗೆ ಅನಾನುಕೂಲ ಮಾಡಬೇಡಿ ಎಂದು ಸೂಚಿಸಿದ್ದಾರೆ.

Bus ticket price increase

ಗಣೇಶ ಹಬ್ಬಕ್ಕೆ ಖಾಸಗಿ ಬಸ್‌ ಟಿಕೆಟ್‌ ದರ ಭಾರೀ ದುಬಾರಿ ಮಾಡಿದ್ದು, ಸಾರಿಗೆ ಇಲಾಖೆಯಿಂದ ಖಾಸಗಿ ಬಸ್‌ ಮಾಲೀಕರಿಗೆ ಖಡಕ್‌ ವಾರ್ನಿಂಗ್‌ (Warning) ಬಸ್‌ ದರ ಭಾರೀ ಹೆಚ್ಚಳ ಮಾಡಿದರೆ ಕಠಿಣ

ಕ್ರಮದ ಎಚ್ಚರಿಕೆ ಖಾಸಗಿ ಬಸ್‌ ಮಾಲೀಕರು, ಆನ್‌ಲೈನ್‌ ಬುಕ್ಕಿಂಗ್‌ (Bus ticket price increase) ಆಪರೇಟರ್‌ಗಳಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು, ಇತ್ತೀಚಿಗೆ ಮಾಧ್ಯಮಗಳಲ್ಲಿ ವಾರಾಂತ್ಯ, ಹಬ್ಬಗಳಿಗೆಂದು ಖಾಸಗಿ ಪ್ರಯಾಣಿಕರ ವಾಹನಗಳ ಪ್ರಯಾಣ ದರಗಳಲ್ಲಿ

ವಿಪರೀತ ಹೆಚ್ಚಳ ಮಾಡಿ ಪ್ರಯಾಣಿಕರನ್ನು ಸುಲಿಗೆ ಮಾಡುತ್ತಿರುವ ಕುರಿತು ತಿಳಿದು ಬಂದಿದೆ ಮತ್ತು ಇದೇ ವಿಷಯದ ಕುರಿತು ಸಾರಿಗೆ ಇಲಾಖೆಗೆ ಸಾರ್ವಜನಿಕರಿಂದ ಹಲವು ದೂರುಗಳು ಸಹ ಬಂದಿವೆ

ಎಂದು ಹೇಳಿದ್ದಾರೆ.

ಆದ್ದರಿಂದ ಖಾಸಗಿ ಪ್ರಯಾಣಿಕರ ವಾಹನಗಳ ಮಾಲೀಕರು ಮತ್ತು ಆನ್‌ಲೈನ್ ಟಿಕೆಟ್(Ticket) ನೀಡುವ ವಿತರಕರಿಗೆ ವಾರಾಂತ್ಯ ಹಾಗೂ ಸರದಿ ಹಬ್ಬ ಹರಿದಿನಗಳಲ್ಲಿ ಪ್ರಯಾಣ ದರಗಳಲ್ಲಿ ವಿಪರೀತ ಹೆಚ್ಚಳ

ಮಾಡಿ ಪ್ರಯಾಣಿಕರಿಗೆ ಅನಾನುಕೂಲತೆ ಮಾಡಬಾರದು ಎಂದು ಹಾಗೂ ಪ್ರಯಾಣಿಕರ ವಾಹನಗಳಲ್ಲಿ ಇತರೆ ಸರಕುಗಳನ್ನು ಅನಧಿಕೃತವಾಗಿ ಸಾಗಿಸದಿರಲು ತಿಳಿಸಲಾಗಿದೆ. ಇಂತಹ ಪ್ರಕರಣಗಳು

ಕಂಡುಬಂದಲ್ಲಿ ವಾಹನ ಮಾಲೀಕರ ಹಾಗೂ ಆನ್‌ಲೈನ್ ಟಿಕೆಟ್ ನೀಡುವ ವಿತರಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

Bus ticket price increase

ಹಬ್ಬದ ಸಂದರ್ಭದಲ್ಲಿ ಟಿಕೆಟ್‌ ದರ ದಿಢೀರ್‌ ಏರಿಕೆ!
ಯುಗಾದಿ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಸೇರಿ ಇತರೆ ಹಬ್ಬಗಳ ಸಂದರ್ಭದಲ್ಲಿ ಖಾಸಗಿ ಬಸ್‌ಗಳ ಟಿಕೆಟ್‌ ದರ ದಿಢೀರ್‌ ಏರುತ್ತದೆ. ಹಬ್ಬದ ವೇಳೆ ಬೆಂಗಳೂರು ಸೇರಿ ವಿವಿಧ ಪ್ರಮುಖ ನಗರಗಳಿಂದ

ತಮ್ಮ ವಾಸಸ್ಥಳಗಳಿಗೆ ಜನರು ತೆರಳುತ್ತಾರೆ. ಇದನ್ನೇ ಬಳಸಿಕೊಳ್ಳುವ ಖಾಸಗಿ ವಾಹನಗಳ ಮಾಲೀಕರು ನಿಗದಿತ ದರಕ್ಕಿಂತ ದುಪ್ಪಟ್ಟು ದರವನ್ನು ವಿಧಿಸುತ್ತಾರೆ. ಇದರಿಂದ ಜನರು ಅನಿವಾರ್ಯವಾಗಿ ಭಾರೀ

ಬೆಲೆ ನೀಡಿ ಊರಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣ ಆಗುತ್ತಿದೆ.

ಈ ಹಿಂದೆ ಬಿ ಶ್ರೀರಾಮುಲು (B. Sriramulu) ಸಾರಿಗೆ ಸಚಿವರಾಗಿದ್ದಾಗ ಇಂತಹ ಘಟನೆಗಳು ನಡೆದಲ್ಲಿ ರೂಟ್ ಪರ್ಮಿಟ್ ತಕ್ಷಣದಿಂದಲೇ ರದ್ದು ಪಡಿಸಿದ್ದರು. ಯಾವುದೇ ಕಾರಣಕ್ಕೂ ರಾಜೀ ಇಲ್ಲ ಎಂದು

ಖಾಸಗಿ ಬಸ್‌ ಮಾಲೀಕರಿಗೆ ಎಚ್ಚರಿಕೆ ನೀಡಿದ್ದರು. ಆದರೆ ಈ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸದ್ಯ ಗಣೇಶ ಚತುರ್ಥಿಗೆ ಒಂದು ದಿನ ರಜೆ ಹಾಕಿದರೆ ನಾಲ್ಕು ದಿನ ರಜೆ ಸಿಗಲಿದೆ. ಶುಕ್ರವಾರ

ರಾತ್ರಿಯಿಂದ ಖಾಸಗಿ ಬಸ್‌ ಟಿಕೆಟ್‌ ದರ ಏರಿಕೆಯಾಗಿದೆ. ಸಾಮಾನ್ಯ ದಿನಗಳಲ್ಲಿ ಬೆಂಗಳೂರಿನಿಂದ ಗಂಗಾವತಿಗೆ 700 ರಿಂದ 800 ರೂ. ದರ ಇತ್ತು. ಶುಕ್ರವಾರ ಈ ಬಸ್‌ಗಳ ದರ 1600 ರಿಂದ 2000

ರೂಪಾಯಿವರೆಗೂ ಏರಿಕೆಯಾಗಿದೆ.

  • ಮೇಘಾ ಮನೋಹರ ಕಂಪು
Tags: bengaluruBookingbusesonlinrticket

Related News

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ
ಪ್ರಮುಖ ಸುದ್ದಿ

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ

October 2, 2023
ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ
ಪ್ರಮುಖ ಸುದ್ದಿ

ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ

October 2, 2023
ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ
ದೇಶ-ವಿದೇಶ

ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ

October 2, 2023
Apple iPhone15: ಇತ್ತೀಚಿನ ಹೊಸ ಐಫೋನ್‌ಗಳು ಹೆಚ್ಚು ಬಿಸಿಯಾಗುತ್ತಿರುವುದಕ್ಕೆ ಇಲ್ಲಿದೆ ಕಾರಣಗಳು
ದೇಶ-ವಿದೇಶ

Apple iPhone15: ಇತ್ತೀಚಿನ ಹೊಸ ಐಫೋನ್‌ಗಳು ಹೆಚ್ಚು ಬಿಸಿಯಾಗುತ್ತಿರುವುದಕ್ಕೆ ಇಲ್ಲಿದೆ ಕಾರಣಗಳು

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.