Bengaluru: ಬೇಸಿಗೆ ಆರಂಭಕ್ಕೂ ಮುನ್ನ ಬೆಂಗಳೂರಿನ (Bengaluru) ಜನ ಹನಿ ನೀರಿಗೂ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ . ಇದರ ಬೆನ್ನಲ್ಲೇ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು (BWSSB) ಹೊಸ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೊಳವೆಬಾವಿಗಳನ್ನು ಕೊರೆಯವವರು ಅನುಮತಿ ಪಡೆದಿರುವ ಜಾಗದಲ್ಲಿ ಮಾತ್ರ ಕೊಳವೆ ಬಾವಿಗಳನ್ನು (Borewell) ಕೊರೆಯತಕ್ಕದ್ದು. ಒಂದು ವೇಳೆ ಅನುಮತಿ ಪಡೆಯದೇ ಇರುವ ಸ್ಥಳಗಳಲ್ಲಿ ಕೊಳವೆ ಬಾವಿಗಳನ್ನು ಕೊರೆದಲ್ಲಿ ಅಂತಹ ಕೊಳವೆಬಾವಿ ಕೊರೆಯುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಎಚ್ಚರಿಕೆ ನೀಡಿದೆ.
ಇನ್ನು ಮುಂದೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನೆ ಹಾಗೂ ನಿಯಂತ್ರಣ) ಅಧಿನಿಯಮ 2011ರ ಕಂಡಿಕೆ 11 ರನ್ವಯ ಎಲ್ಲಾದರು ಸಂಬಂಧಪಟ್ಟ ಪ್ರಾಧಿಕಾರಿಯಿಂದ ಅನುಮತಿ ಪಡೆಯದೇ ಕೊಳವೆ ಬಾವಿಗಳನ್ನು ಕೊರೆದಲ್ಲಿ ಕೊಳವೆಬಾವಿಯನ್ನು ಕೊರೆಸುವ ಮಾಲೀಕರ ವಿರುದ್ಧ ನಿಯಮ ಉಲ್ಲಂಘನೆ ಮಾಡಿರುವುದ್ದಾಗಿ ದೂರು ಹಾಗೂ ಅಂತವರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರೂಗಿಸಲಾಗುವುದು ಎಂದು ಹೇಳಿದ್ದಾರೆ.
ಈ ಆದೇಶವು ಇದೇ ಮಾ.15 ರಿಂದ ಜಾರಿಗೆ ಬರಲಿದೆ. ಮಾ.15 ರಿಂದ ಬೆಂಗಳೂರು ಜಲಮಂಡಳಿ ಜಾಲತಾಣದಲ್ಲಿ ಕೊಳವೆಬಾವಿ ಕೊರೆಸಲು ಅನುಮತಿ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ತಾವು ಅನುಮತಿ ಕೇಳಿದಲ್ಲಿ ಸಾರ್ವಜನಿಕ ಕೊಳವೆ ಬಾವಿಗಳಿಗೆ ಪ್ರಥಮ ಆಧ್ಯತೆ ನೀಡಲಾಗುವುದು ಹಾಗೂ ಖಾಸಗಿ ಕೊಳವೆಬಾವಿಗಳಿಗೆ ಅಂತರ್ಜಲ ಮಟ್ಟ, ಅವಶ್ಯಕತೆ ಹಾಗೂ ತಜ್ಞರ ವರದಿ ಆಧಾರಿಸಿ ಸಂಬಂಧಪಟ್ಟವರಿಂದ ಸ್ಥಳ ಪರಿಶೀಲಿಸಿ ನಂತರ ನಿಯಮಾನುಸಾರ ಸೂಕ್ತ ಪ್ರಾಧಿಕಾರದಿಂದ ಅನುಮತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಕೊಳವೆ ಬಾವಿ ಕೊರೆಯು ವವರು ಅನುಮತಿ ಪಡೆದಿರುವ ಜಾಗದಲ್ಲಿ ಮಾತ್ರ ಕೊರೆಯಬೇಕು. ಒಂದು ವೇಳೆ ಅನುಮತಿ ಪಡೆಯದ ಸ್ಥಳಗಳಲ್ಲಿ ಕೊಳವೆ ಬಾವಿ ಕೊರೆದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಲಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.