• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಪುತ್ರನಿಗೆ ಸಿಗದ ಮನ್ನಣೆ, ಬಿಎಸ್‍ವೈ ಮುಂದಿನ ನಡೆ ಏನು? ಇಲ್ಲಿದೆ ಅದರ ವಿಶ್ಲೇಷಣೆ!

Mohan Shetty by Mohan Shetty
in ರಾಜಕೀಯ, ರಾಜ್ಯ
BSY
0
SHARES
0
VIEWS
Share on FacebookShare on Twitter

ಮಹತ್ವದ ಬೆಳವಣಿಗೆಯಲ್ಲಿ ರಾಜ್ಯದ ಪ್ರಭಾವಿ ಬಿಜೆಪಿ(BJP) ನಾಯಕ ಎನಿಸಿಕೊಂಡಿದ್ದ ಬಿ.ಎಸ್.ಯಡಿಯೂರಪ್ಪನವರ(BS Yedurappa) ಪುತ್ರ ಬಿ.ವೈ.ವಿಜಯೇಂದ್ರಗೆ(BY Vijayendra) ವಿಧಾನಪರಿಷತ್ ಚುನಾವಣೆಯ(Vidhanparishath Election) ಟಿಕೆಟ್ ಕೈತಪ್ಪಿದೆ.

BJP

ಬಿ.ವೈ.ವಿಜಯೇಂದ್ರಗೆ ಟಿಕೆಟ್ ಪಕ್ಕಾ ಎಂದೇ ಹೇಳುಲಾಗುತ್ತಿತ್ತು. ಆದರೆ ಕೊನೆಯ ಕ್ಷಣದಲ್ಲಿ ಟಿಕೆಟ್ ನಿರಾಕರಿಸಲಾಗಿದೆ.

ಕುಟುಂಬ ರಾಜಕಾರಣಕ್ಕೆ ಪಕ್ಷದಲ್ಲಿ ಅವಕಾಶವಿಲ್ಲ ಎಂದು ಪರೋಕ್ಷವಾಗಿ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರಿಗೆ ಸಂದೇಶ ರವಾನಿಸಿದೆ ಎನ್ನಲಾಗುತ್ತಿದೆ. ಇನ್ನೊಂದೆಡೆ ಬಿಎಸ್‍ವೈ ವಿರೋಧಿ ಗುಂಪು ವಿಜಯೇಂದ್ರಗೆ ಟಿಕೆಟ್ ಸಿಗದಿರಲು ಕಾರಣ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

ಇದನ್ನೂ ಓದಿ : https://vijayatimes.com/house-of-snakes-island/

ಇನ್ನು ಮಗನಿಗೆ ಪರಿಷತ್ ಟಿಕೆಟ್ ಕೈತಪ್ಪಿದ್ದರು ಬಿ.ಎಸ್.ಯಡಿಯೂರಪ್ಪನವರು ಮಾತ್ರ ಯಾವುದೇ ಹೇಳಿಕೆ ನೀಡಿಲ್ಲ. ಇನ್ನು ಶಾಂತಿಯಿಂದ ವರ್ತಿಸುವಂತೆ ವಿಜಯೇಂದ್ರ ತಮ್ಮ ಬೆಂಬಲಿಗರಿಗೆ ಸಂದೇಶ ನೀಡಿದ್ದಾರೆ. ಟಿಕೆಟ್ ಯಾಕೆ ನಿರಾಕರಿಸಲಾಗಿದೆ ಎಂಬ ಕಾರಣ ಬಿಎಸ್‍ವೈಗೆ ತಿಳಿಯದ ಸತ್ಯವೇನಲ್ಲ. ಆದರೆ ಆತುರದ ನಿರ್ಧಾರಕ್ಕೆ ಅವಕಾಶ ನೀಡದೇ, ತಾಳ್ಮೆಯಿಂದ ಪರಿಸ್ಥಿತಿಯನ್ನು ನಿಭಾಯಿಸುವತ್ತ ಬಿಎಸ್‍ವೈ ಚಿತ್ತ ಹರಿಸಿದ್ದಾರೆ. ಹೀಗಾಗಿಯೇ ಮುಂಬರುವ ಅವಕಾಶಗಳನ್ನು ಬಳಸಿಕೊಳ್ಳುವತ್ತ ಗಮನ ಕೇಂದ್ರೀಕರಿಸಿದ್ದಾರೆ. ಹೀಗಾಗಿ ಬಿಎಸ್‍ವೈ ಸದ್ಯ ಮೌನಕ್ಕೆ ಶರಣಾಗಿದ್ದಾರೆ.

BY Vijayendra lost ticket from bjp
ಇನ್ನು ಮೂಲಗಳ ಪ್ರಕಾರ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯೇಂದ್ರಗೆ ಟಿಕೆಟ್ ಗಿಟ್ಟಿಸಿಕೊಳ್ಳಲು ಬಿಎಸ್‍ವೈ ಮುಂದಾಗಿದ್ದಾರೆ. ಟಿಕೆಟ್ ಮಾತ್ರವಲ್ಲದೇ ಬಿಜೆಪಿ ಅಧಿಕಾರಕ್ಕೆ ಬಂದರೆ ಮಗನನ್ನು ಮಂತ್ರಿ ಮಾಡುವ ಕಾರ್ಯತಂತ್ರವನ್ನು ಬಿಎಸ್‍ವೈ ಹೊಂದಿದ್ದಾರೆ ಎನ್ನಲಾಗಿದೆ. ಆದರೆ ಬಿಎಸ್‍ವೈ ವಿರೋಧಿ ಬಣ ವಿಜಯೇಂದ್ರನಿಗೆ ಅವಕಾಶ ಸಿಗದಂತೆ ಮಾಡುವ ಕಾರ್ಯತಂತ್ರ ಹೆಣೆಯುತ್ತಿದೆ. ಆದರೆ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‍ವೈ ವಿರೋಧಿಗಳ ಕಾರ್ಯತಂತ್ರ ಫಲ ನೀಡುವುದಿಲ್ಲ.
ಇದನ್ನೂ ಓದಿ : https://vijayatimes.com/proud-indian-kalpana-chawla/

ಮಧ್ಯ ಕರ್ನಾಟಕ, ಮುಂಬೈ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಬಲ ಲಿಂಗಾಯತ ಮತಬ್ಯಾಂಕ್ ಮೇಲೆ ಹಿಡಿತ ಹೊಂದಿರುವ ಬಿಎಸ್‍ವೈ, ಒಟ್ಟಾರೆ ಉತ್ತರ ಕರ್ನಾಟಕ ಯಾವುದಾದರೂ ಒಂದು ಕ್ಷೇತ್ರದಿಂದ ಮಗನನ್ನು ಸುಲಭವಾಗಿ ಗೆಲ್ಲಿಸಿಕೊಂಡು ಬರಬಲ್ಲರು. ಜಾತಿ ಮತ್ತು ಈಗಾಗಲೇ ವಿಜಯೇಂದ್ರ ರೂಪಿಸಿಕೊಂಡಿರುವ ಸಂಘಟನೆ ಬಲದಿಂದ ಗೆಲುವು ಸುಲಭವಾಗಲಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರವನ್ನು ಗೆಲ್ಲುವುದು ಬಿಎಸ್‍ವೈಗೆ ಕಷ್ಟಕರವಾಗಲಾರದು. ಮುಖ್ಯಮಂತ್ರಿ ಹುದ್ದೆಯಿಂದ ಬಿಎಸ್‍ವೈ ಕೆಳಗಿಳಿದಿದ್ದರು ಅವರ ರಾಜಕೀಯ ಶಕ್ತಿ ಮಾತ್ರ ಕುಂದಿಲ್ಲ.

BY Vijayendra lost ticket

ಒಟ್ಟಾರೆಯಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯೇಂದ್ರಗೆ ಟಿಕೆಟ್ ಸಿಗದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ವಿಜಯೇಂದ್ರ ಕಣಕ್ಕಿಳಿಯುವುದು ಶತಸಿದ್ದ ಎನ್ನುವುದು ಬಿಎಸ್‍ವೈ ಆಪ್ತ ಬಳಗದ ಮಾತು. ತಂದೆಯಿಂದ ಸಾಕಷ್ಟು ರಾಜಕೀಯ ಪಟ್ಟುಗಳನ್ನು ಕಲಿತಿರುವ ವಿಜಯೇಂದ್ರಗೆ ಚುನಾವಣೆಯಲ್ಲಿ ಗೆಲ್ಲುವುದು ಕಷ್ಟಕರವಲ್ಲ. ಆದರೆ ವಿಜಯೇಂದ್ರಗೆ ವಿಧಾನಸಭಾ ಚುನಾವಣೆಯಲ್ಲಿಯೂ ಟಿಕೆಟ್ ನಿರಾಕರಿಸಿದರೆ ಲಿಂಗಾಯತ ಸಮುದಾಯ ಹೇಗೆ ಪ್ರತಿಕ್ರಿಯಿಸಲಿದೆ ಎಂಬ ಭಯ ಬಿಜೆಪಿ ಹೈಕಮಾಂಡ್‍ನ್ನು ಕಾಡುತ್ತಿದೆ.

ಇದನ್ನೂ ಓದಿ : https://vijayatimes.com/jk-police-died-in-terrorist-attack/

ಒಂದು ವೇಳೆ ಲಿಂಗಾಯತ ಸಮುದಾಯ ಬಿಜೆಪಿ ಮೇಲೆ ಮುನಿಸಿಕೊಂಡರೆ ಬಿಜೆಪಿ ತನ್ನ ಅತಿದೊಡ್ಡ ಮತಬ್ಯಾಂಕ್‍ನ್ನು ಕಳೆದುಕೊಂಡು, ಕೇವಲ 50-70 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಮಾತ್ರ ಸಾಧ್ಯವಾಗುತ್ತದೆ.

ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ವಿಜಯೇಂದ್ರನಿಗೆ ಟಿಕೆಟ್ ನಿರಾಕರಿಸುವ ಧೈರ್ಯವನ್ನು ಬಿಜೆಪಿ ಹೈಕಮಾಂಡ್ ಮಾಡಲಾರದು. ಅಂತಹ ಪ್ರಯತ್ನಕ್ಕೆ ಕೈ ಹಾಕಿದರೆ ದೊಡ್ಡ ನಷ್ಟ ಬಿಜೆಪಿಗೆ ಕಟ್ಟಿಟ್ಟ ಬುತ್ತಿ.

Tags: bjpKarnatakapoliticalpolitics

Related News

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023
ಪ್ರಮುಖ ಸುದ್ದಿ

ಕೇಂದ್ರದಿಂದ ಬರುವ ಅಕ್ಕಿಯನ್ನು ತಮ್ಮ ಹೆಸರಿನ ಚೀಲದಲ್ಲಿ ಹಾಕಿ ವಿತರಿಸುವುದರಲ್ಲಿ ಸಿದ್ದುಗೆ 5 ವರ್ಷಗಳ ಅನುಭವವಿದೆ – ಬಿಜೆಪಿ ವ್ಯಂಗ್ಯ

June 3, 2023
ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ
ಪ್ರಮುಖ ಸುದ್ದಿ

ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.