ನವದೆಹಲಿ ಅ 7 : ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಉದಾಸಿ ಕುಟುಂಬಕ್ಕೆ ಈ ಬಾರಿ ಟಿಕೆಟ್ ಕೈತಪ್ಪಿದ್ದು ಆದರೂ ಉದಾಸಿ ಮಾನಸ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಸಿಎಂ ಉದಾಸಿ ಸಫಲರಾಗಿದ್ದಾರೆ.
ರಾಜ್ಯದಲ್ಲಿ ನಡೆಯುವ ಎರಡು ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿಯನ್ನ ಪ್ರಕಟ ಮಾಡಿದ್ದು, ಹಾನಗಲ್ ವಿಧಾನಸಭೆ ಕ್ಷೇತ್ರದಿಂದ ಶಿವರಾದ ಸಜ್ಜನ್ ರನ್ನು ಸಿಂದಗಿ ಕ್ಷೇತ್ರದಿಂದ ರಮೇಶ್ ಭೂಸನೂರು ಅವರನ್ನು ಆಯ್ಕೆ ಮಾಡಿದೆ.
ಶಿವರಾಜ್ ಸಜ್ಜನ್ ಉದಾಸಿ ಅವರ ಮಾನಸಪುತ್ರ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. 2004 ರಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿದ್ದರು. 2013- 2018ರಲ್ಲಿ ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಈ ಎರಡೂ ಕ್ಷೇತ್ರಗಳಿಗೆ ಅ 30ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 2 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.