‘ಇದು ನನ್ನ ಸವಾಲು, ಕಾಂಗ್ರೆಸ್ಸಿಗರೇ ನಿಮ್ಮ ರಾಹುಲ್ ಗಾಂಧಿಯ ಒಂದೇ ಒಂದು ಸಾಧನೆಯನ್ನು ಹೇಳಿ ನೋಡೋಣ’ : ಸಿ.ಟಿ ರವಿ

Chikkamagaluru : ಮುಂಬರುತ್ತಿರುವ ವಿಧಾನಸಭೆ ಚುನಾವಣೆ(Assembly election) 2023 ಗದ್ದಿಗೇರಿದ್ದು, ರಾಜ್ಯ ರಾಜಕೀಯದಲ್ಲಿ ಬಿರುಸಿನ ಹಣಾಹಣಿ ನಡೆಯುತ್ತಿದೆ. ತಮ್ಮ ಸರ್ಕಾರವನ್ನು ಮುಂದುವರೆಸಿಕೊಂಡು ಹೋಗಲು ಶತಾಯಗತಾಯ ಪ್ರಯತ್ನದಲ್ಲಿ ರಾಜ್ಯ ಬಿಜೆಪಿಯಿದ್ದರೇ(State government),

ಬಿಜೆಪಿ(BJP) ಪಕ್ಷದ ನ್ಯೂನತೆಗಳನ್ನು ನಾಮಫಲಕವಾಗಿ ಬಳಸಿಕೊಂಡು ಕಾಂಗ್ರೆಸ್(Congress) ಭಾರತ್ ಜೋಡೋ ಯಾತ್ರೆಯನ್ನು ಯಶಸ್ವಿಯಾಗಿ ಮುಂದುವರೆಸಿಕೊಂಡು ಹೋಗುತ್ತಿದೆ. ಈ ಮಧ್ಯೆ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ನಡುವೆ ನಡೆಯುತ್ತಿರುವ ಜಿದ್ದಿನ ಕದನಕ್ಕೆ ಚಾವಟಿ ಪೆಟ್ಟಿನಂತೆ ಜಾತ್ಯಾತೀತ ಜನತಾದಳ ಪಕ್ಷ ಪಂಚರತ್ನ ಯೋಜನೆ ರೂಪಿಸಿ,

ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಆರಂಭಿಸಿದೆ. ಸದ್ಯ ಇದೆಲ್ಲದರ ನಡುವೆ ಬಿಜೆಪಿ ಮತ್ತು ಕಾಂಗ್ರೆಸ್ಸಿಗರ ನಡುವೆ ನಡೆಯುತ್ತಿರುವ ವಾಗ್ಸಮರ ದಿನದಿಂದ ದಿನಕ್ಕೆ ತಾರಕಕ್ಕೇರಿದೆ. ಕಾಂಗ್ರೆಸ್ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaih) ಅವರ ವಿರುದ್ಧ ಸಿಡಿದೇಳುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ(C.T.Ravi),

ಇದನ್ನೂ ನೋಡಿ : https://fb.watch/heUzx59dXd/ ಕನ್ನಡ ಮಾದ್ಯಮಗಳ ಬಗ್ಗೆ ರಿಷಬ್ ಶೆಟ್ಟಿ ಏನ್ ಹೇಳಿದ್ದಾರೆ ?

ವಿವಾದಾತ್ಮಕ ಹೇಳಿಕೆಗಳನ್ನು ಕೊಡುವಲ್ಲಿ ಸದಾ ಮುಂದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಸಿದ್ದರಾಮಯ್ಯ ಹೆಸರು ಬಳಸದೇ ಸಿದ್ದ್ರಾಮುಲ್ಲಾ ಖಾನ್ ಎಂದು ಕರೆಯುವ ಮೂಲಕ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷವನ್ನು ಕೆರಳಿಸಿದ್ದರು. ಈ ಹೇಳಿಕೆಗೆ ಪ್ರತ್ಯೇಕವಾಗಿ ಕೆಂಡಾಮಂಡಲವಾಗಿದ್ದ ಸಿದ್ದರಾಮಯ್ಯನವರಿಗೆ ಇದೀಗ ಮತ್ತೊಂದು ಟಾಂಗ್ ನೀಡಿದ್ದಾರೆ ಸಿ.ಟಿ ರವಿ.

ಭಾರತ್ ಜೋಡೋ ಯಾತ್ರೆಯಲ್ಲಿ(bharat jodo yatra) ನಿರತರಾಗಿರುವ ರಾಹುಲ್ ಗಾಂಧಿ, ಇದೀಗ ರಾಜಸ್ಥಾನ ರಾಜ್ಯದತ್ತ ಹೆಜ್ಜೆಯಿಟ್ಟು ಮುನ್ನುಗ್ಗುತ್ತಿದೆ. ಈ ವೇಳೆ ರಾಹುಲ್ ಗಾಂಧಿ ಯಶಸ್ಸು, ಸಾಧನೆ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್ ಪಕ್ಷದ ಹೇಳಿಕೆಯನ್ನು ಮುಂದಿಟ್ಟು ಮಾತನಾಡಿದ ಸಿ.ಟಿ ರವಿ,

“ಇದು ನನ್ನ ಸವಾಲು, ಕಾಂಗ್ರೆಸ್ ಪಕ್ಷದ ನಾಯಕರೇ ನಿಮ್ಮ ರಾಹುಲ್ ಗಾಂಧಿಯ(Rahul gandhi) ಯಾವುದಾದರೂ ಒಂದೇ ಒಂದು ಸಾಧನೆಯನ್ನು ಹೇಳಿ ನೋಡೋಣ” ಎಂದು ನೇರವಾಗಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಸವಾಲಾಕ್ಕಿದ್ದಾರೆ.

Exit mobile version