ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲು ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

New Delhi: ಲೋಕಸಭಾ ಚುನಾವಣೆಗೂ ಮೊದಲೇ ಪೌರತ್ವ ತಿದ್ದುಪಡಿ ಕಾಯ್ದೆ (Citizenship Amendment Act) ಕುರಿತು ಕೇಂದ್ರ ಸರ್ಕಾರ ಶೀಘ್ರದಲ್ಲೇ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಿದ್ದು, ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ಈ ಮಾಹಿತಿ ನೀಡಿದ್ದಾರೆ.

ಆನ್‌ಲೈನ್ ಪೋರ್ಟಲ್ (Online Portal) ಕೂಡ ಸಿದ್ಧವಾಗಿದ್ದು, ಇಡೀ ಪ್ರಕ್ರಿಯೆ ಆನ್‌ಲೈನ್‌ನಲ್ಲಿ ನಡೆಯಲಿದೆ. ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವ ಜನರು ಅಗತ್ಯ ದಾಖಲೆಗಳಿಲ್ಲದೆ ಭಾರತಕ್ಕೆ ಬಂದ ವರ್ಷವನ್ನು ನಮೂದಿಸಬೇಕಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಅರ್ಜಿದಾರರಿಂದ ಯಾವುದೇ ದಾಖಲೆಗಳನ್ನು ಕೇಳುವುದಿಲ್ಲ.

ಕೇಂದ್ರ ಗೃಹ ಸಚಿವ ಅಮಿತ್ ಶಾ@Amitshah ಅವರು ಈ ಹಿಂದೆ ಡಿಸೆಂಬರ್ 27, 2023ರಂದು ಸಿಎಎ ಅನುಷ್ಠಾನವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಏಕೆಂದರೆ ಇದು ದೇಶದ ಕಾನೂನು. ಈ ವಿಚಾರದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ #MamathaBanerjee ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು.

ಪಶ್ಚಿಮ ಬಂಗಾಳದಲ್ಲಿ ಕಳೆದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಸಿಎಎ ಜಾರಿಗೊಳಿಸುವ ಭರವಸೆ ಬಿಜೆಪಿಯ (BJP) ಪ್ರಮುಖ ಚುನಾವಣಾ ವಿಷಯವಾಗಿತ್ತು. ಸಿಎಎ ಪ್ರತಿಭಟನೆಯಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಕೇಂದ್ರದ ನರೇಂದ್ರ ಮೋದಿ (Narendra Modi) ಸರ್ಕಾರವು ಸಿಎಎ ಅಡಿಯಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ (ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು) ಭಾರತೀಯ ಪೌರತ್ವವನ್ನು ನೀಡುತ್ತದೆ.

ಈ ಪ್ರಯೋಜನವು ಡಿಸೆಂಬರ್ 31, 2014 ರವರೆಗೆ ಭಾರತಕ್ಕೆ ಬಂದ ವಲಸಿಗರಿಗೆ ಮಾತ್ರ ಲಭ್ಯವಿರುತ್ತದೆ. ಭಾರತೀಯ ಸಂಸತ್ತು ಡಿಸೆಂಬರ್ 2019 ರಲ್ಲಿ ಸಂಬಂಧಿತ ಮಸೂದೆಯನ್ನು ಅಂಗೀಕರಿಸಿತು ಮತ್ತು ನಂತರ ಅದು ರಾಷ್ಟ್ರಪತಿಯ ಒಪ್ಪಿಗೆಯನ್ನು ಸಹ ಪಡೆಯಿತು. ಕಾನೂನನ್ನು ಅಂಗೀಕರಿಸಿದ ತಕ್ಷಣ, ದೇಶದಾದ್ಯಂತ ದೊಡ್ಡ ಪ್ರಮಾಣದ ಪ್ರತಿಭಟನೆಗಳು ಭುಗಿಲೆದ್ದವು.

ಪ್ರತಿಭಟನೆಯ ಸಮಯದಲ್ಲಿ ಅಥವಾ ಪೊಲೀಸ್ ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ಅಂದಿನಿಂದ ಈ ಕಾನೂನಿಗೆ ನಿಯಮಗಳನ್ನು ರೂಪಿಸುವ ಪ್ರಕ್ರಿಯೆಯನ್ನು ಸರ್ಕಾರ ಮುಂದೂಡುತ್ತಲೇ ಬಂದಿದೆ. ನಿಯಮಗಳ ಪ್ರಕಾರ, ರಾಷ್ಟ್ರಪತಿಗಳಿಂದ ಅನುಮೋದನೆ ಪಡೆದ ಆರು ತಿಂಗಳೊಳಗೆ ಯಾವುದೇ ಕಾನೂನಿನ ನಿಯಮಗಳನ್ನು ಸಿದ್ಧಪಡಿಸಬೇಕು. ಇದು ಆಗದಿದ್ದರೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಈ ಸಂಬಂಧ ಪ್ರಕ್ರಿಯೆ ಮುಂದುವರೆಸಲು ಸರ್ಕಾರ ಅನುಮತಿ ನೀಡಬೇಕು.

ಭವ್ಯಶ್ರೀ ಆರ್ ಜೆ

Exit mobile version