• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೆಂಪು ಕೋಟೆ ಬಳಿ ಕಾರು ಸ್ಫೋಟ: ಪುಲ್ವಾಮಾ ವೈದ್ಯನಿಂದ ಕಾರು ಚಾಲನೆ, ಉಗ್ರರ ಕೈವಾಡ ಶಂಕೆ

Teju Srinivas by Teju Srinivas
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಕೆಂಪು ಕೋಟೆ ಬಳಿ ಕಾರು ಸ್ಫೋಟ: ಪುಲ್ವಾಮಾ ವೈದ್ಯನಿಂದ ಕಾರು ಚಾಲನೆ, ಉಗ್ರರ ಕೈವಾಡ ಶಂಕೆ
0
SHARES
159
VIEWS
Share on FacebookShare on Twitter
  • ದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ನಂಬರ್ 1 ರ ಬಳಿ ಕಾರು ಸ್ಪೋಟ
  • ಕೃತ್ಯದ ಹಿಂದೆ ಉಗ್ರರ ಕೈವಾಡ
  • ಪುಲ್ವಾಮಾ ನಿವಾಸಿ ತಾರಿಕ್​​ ಖರೀದಿಸಿದ್ದ ಕಾರು ಸ್ಫೋಟ

New Delhi: ದೆಹಲಿ ನಗರದಲ್ಲಿ ಐತಿಹಾಸಿಕ ಕೆಂಪು ಕೋಟೆಯ (Red Fort) ಸಮೀಪ ಸಂಭವಿಸಿರುವ ಕಾರು ಸ್ಫೋಟ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ.

ಈ ಘಟನೆ ನಂತರ ಪೊಲೀಸರು ವೇಗವಾಗಿ ತನಿಖೆ ಆರಂಭಿಸಿದ್ದು, ವಾಹನದ ಮಾಲೀಕನನ್ನು ಬಂಧಿಸಿದ್ದಾರೆ. (Car blast near Red Fort)

ಸ್ಫೋಟಕ್ಕೂ ಕೆಲ ಗಂಟೆಗಳ ಮುನ್ನ ಕಾರಿನ ಚಲನವಲನಗಳನ್ನು ಸಿಸಿಟಿವಿ ಕ್ಯಾಮೆರಾಗಳು (CCTV Camera) ಸ್ಪಷ್ಟವಾಗಿ ಕ್ಯಾಪ್ಚರ್ ಮಾಡಿವೆ.

ದೆಹಲಿ ನಗರದಲ್ಲಿ ಐತಿಹಾಸಿಕ ಕೆಂಪು ಕೋಟೆಯ ಸಮೀಪ ಸಂಭವಿಸಿರುವ ಕಾರು ಸ್ಫೋಟ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ.

ಪ್ರಾಥಮಿಕ ತನಿಖೆ ಪ್ರಕಾರ, ಕಾರನ್ನು ಚಾಲನೆ ಮಾಡುತ್ತಿದ್ದ ವ್ಯಕ್ತಿ ಜಮ್ಮು-ಕಾಶ್ಮೀರದ (Jammu-Kashmir) ಪುಲ್ವಾಮಾದ ನಿವಾಸಿ ಮತ್ತು ವೈದ್ಯನಾದ ಉಮರ್ ಮೊಹಮ್ಮದ್ ಎಂಬ ಅನುಮಾನ ವ್ಯಕ್ತವಾಗಿದೆ.

ಇದರಿಂದಾಗಿ ದೆಹಲಿ ಮತ್ತು ಹರಿಯಾಣ ಪೊಲೀಸರು ಸಂಯುಕ್ತವಾಗಿ ತನಿಖೆಯನ್ನು ಮುಂದುವರಿಸಿದ್ದಾರೆ. (Car blast near Red Fort)

ಪೊಲೀಸ್ ಮೂಲಗಳ ಪ್ರಕಾರ, ಸ್ಫೋಟಕ್ಕೆ ಬಳಸಿದ್ದು ಅಮೋನಿಯಂ (Ammonium) ನೈಟ್ರೇಟ್ ಮತ್ತು ಡಿಟೊನೇಟರ್ಸ್ (Detonators).

ಇದು ಸಾಮಾನ್ಯವಾಗಿ ಬಾಂಬ್ ಸ್ಫೋಟಗಳಲ್ಲಿ ಬಳಸಲಾಗುತ್ತಿದ್ದು, ಸ್ಫೋಟದ ಸ್ವರೂಪ ಗಂಭೀರವಾಗಿರುವುದನ್ನು ಸೂಚಿಸುತ್ತದೆ.

ಸ್ಫೋಟಗೊಂಡ ವೈಟ್ ಹುಂಡೈ (Hyundai) i20 ಕಾರು ಮಧ್ಯಾಹ್ನ 3:19ಕ್ಕೆ ಕೆಂಪು ಕೋಟೆ ಪಾರ್ಕಿಂಗ್ ಪ್ರದೇಶಕ್ಕೆ ಪ್ರವೇಶಿಸಿದ್ದು, ಮೂರು ಗಂಟೆಗಳ ಕಾಲ ಅಲ್ಲಿ ನಿಂತಿತ್ತು.

ಸಿಸಿಟಿವಿ ದೃಶ್ಯಗಳ ಪ್ರಕಾರ ಸಂಜೆ 6:48ಕ್ಕೆ ಜನಸಂದಣಿ ನಡುವೆ ನಿಧಾನವಾಗಿ ಪಾರ್ಕಿಂಗ್ (Parking) ಪ್ರದೇಶದಿಂದ ಹೊರಬರುತ್ತಿರುವುದು ದಾಖಲಾಗಿದೆ.

ಆದರೆ ಕಾರಿನ ಒಳಗಿನ ವ್ಯಕ್ತಿ ಮುಖ ಮುಚ್ಚಿಕೊಂಡಿರುವ ಕಾರಣ ಪೊಲೀಸರು ಇನ್ನಷ್ಟು ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

100ಕ್ಕೂ ಹೆಚ್ಚು ಸಿಸಿಟಿವಿ ಕ್ಲಿಪ್‌ಗಳನ್ನು ಪೂರಕವಾಗಿ ಪರಿಶೀಲಿಸಲಾಗುತ್ತಿದೆ.

ಇನ್ನು ಕಾರಿನ ಮಾಲೀಕ ಗುರುಗ್ರಾಮ್‌ನ ನಿವಾಸಿಯಾದ ಎಂ.ಡಿ. ಸಲ್ಮಾನ್‌ (M.D. Salman) ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ತನಿಖೆ ಪ್ರಕಾರ, ಅವರು ಕಾರನ್ನು ಓಖ್ಲಾದ ದೇವೇಂದ್ರ ಎಂಬಾತನಿಗೆ ಮಾರಾಟಮಾಡಿದ್ದು, ನಂತರ ಅಂಬಾಲಾದ ವ್ಯಕ್ತಿಯೊಬ್ಬನು ಖರೀದಿಸಿದ್ದು, ಕೊನೆಗೆ ಪುಲ್ವಾಮಾದ ತಾರೀಕ್ ಎಂಬಾತನಿಗೆ ಬಾರುತ್ತಿದ್ದಂತೆ ಮಾಹಿತಿ ಸಿಗುತ್ತಿದೆ.

ಆದರೆ ವಾಹನ ಇನ್ನೂ ಸಲ್ಮಾನ್ ಹೆಸರಲ್ಲೇ ನೋಂದಣಿಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ.

ಸ್ಫೋಟದ ನಂತರ ಚಿಕಿತ್ಸೆಗಾಗಿ ಕರೆದೊಯ್ಯಲಾದ ಗಾಯಾಳುಗಳ ದೇಹದಲ್ಲಿ ಒಂದೂ ಪೆಲೆಟ್ ಅಥವಾ ಶಾರ್ಪ್ನೆಲ್ ಪತ್ತೆಯಾಗಿಲ್ಲ.

ಇದು ಸಾಮಾನ್ಯ ಬಾಂಬ್ ಸ್ಪೋಟಕ್ಕಿಂತ ವಿಭಿನ್ನ ರೀತಿಯ ಸ್ಫೋಟವಾಗಿರಬಹುದೆಂಬ ಶಂಕೆಗೆ ಬಲ ನೀಡುತ್ತಿದೆ.

ಇನ್ನು ಸ್ಫೋಟದಲ್ಲಿ ಒಟ್ಟು 9 ಜನರು ಸಾವಿಗೀಡಾಗಿದ್ದು, 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ಘಟನೆ ನಂತರ ದೆಹಲಿ ಪೊಲೀಸ್ ಇಲಾಖೆ ಹಾಗೂ NIA, NSG ತಂಡಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಆರಂಭಿಸಿವೆ.

ನಗರದಾದ್ಯಂತ ಹೈ ಅಲರ್ಟ್ (High Alert) ಘೋಷಿಸಲ್ಪಟ್ಟಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಗೃಹ ಸಚಿವ ಅಮಿತ್ ಶಾ (Amith Shah) ಉನ್ನತ ಮಟ್ಟದ ಸಭೆ ಕರೆದಿದ್ದು, ಸ್ಫೋಟದ ಹಿನ್ನೆಲೆಯ ಎಫ್‌ಎಸ್‌ಎಲ್, ಎನ್‌ಎಸ್‌ಜಿ ಮತ್ತು ಎನ್‌ಐಎ ಅಧಿಕಾರಿಗಳು ಸಹ ತನಿಖೆಯಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನು ಓದಿ : ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ ಕೇಂದ್ರ ಸರ್ಕಾರ: ಎತ್ತಿನಹೊಳೆ, ಶರಾವತಿ ಪಂಪ್‌ ಸ್ಟೋರೇಜ್‌ ಯೋಜನೆಗೆ ತಡೆ
Tags: car accidentNewdelhiredfort

Related News

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ
Sports

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ

December 15, 2025
ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.