- ಜಿಲೇಬಿ ಮತ್ತು ಶರಬತ್ನಲ್ಲಿ ಕೃತಕ ಬಣ್ಣಗಳ ಬಳಕೆ
- ಬೆಂಗಳೂರಿನಲ್ಲಿ ಜಿಲೇಬಿ ತಿನ್ನೋ ಮುನ್ನ ಹುಷಾರ್ (Carcinogenic in sharbat and jalebi)
- ತಂಪು ತಂಪು ಶರಬತ್ ತಯಾರಿಕೆಯಲ್ಲೂ ಬಳಸಲಾಗ್ತಿದೆ ಕೆಮಿಕಲ್
Bengaluru: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಸುರಕ್ಷಿತ ಆಹಾರ ಮಾರಾಟ ಹೆಚ್ಚಾಗುತ್ತಿದೆ. ಇದಕ್ಕೆ ಸಾಕ್ಷಿ ಆಹಾರ ಇಲಾಖೆ (Sakshi Food Department) ಅಧಿಕಾರಿಗಳು ದಾಳಿ ಮಾಡಿ ಸಂಗ್ರಹಿಸಿದ ಮಾದರಿಯ ಪರೀಕ್ಷಾ ವರದಿ. ಸ್ಯಾಂಪಲ್ ಪರಿಶೀಲನೆ (Sample check) ವೇಳೆ ನಗರದಲ್ಲಿ ಮಾರಾಟವಾಗುವ ವಿವಿಧ ಆಹಾರದಲ್ಲಿ ಕ್ಯಾನ್ಸರ್ ಅಂಶ ಪತ್ತೆಯಾಗಿದ್ದು ಜನ ಆತಂಕಕ್ಕೆ (People are worried) ಒಳಗಾಗಿದ್ದಾರೆ. ನಗರದಲ್ಲಿ ದಾಳಿ ಮುಂದುವರಿಸಿದ ಅಧಿಕಾರಿಗಳಿಗೆ ಸಿಹಿ ತಿಂಡಿಗಳಲ್ಲೂ ಕ್ಯಾನ್ಸರ್ ಅಂಶ (Cancer factor) ಇರುವುದು ತಿಳಿದು ಬಂದಿದೆ.
ಹೌದು…. ಜನರನ್ನು ಆಕರ್ಷಿಸಲು ಬೇಕರಿ ಹಾಗೂ ಹೋಟೆಲ್ಗಳಲ್ಲಿ (bakeries and hotels) ರಾಸಾಯನಿಕ ಬಣ್ಣವನ್ನು ಬಳಸಿ ಸಿಹಿ ತಿಂಡಿಗಳನ್ನು ತಯಾರಿಸಲಾಗುತ್ತದೆ. ಈ ಬಣ್ಣ ಆರೋಗ್ಯಕ್ಕೆ ಹಾನಿಕಾರಕ (Harmful to health) ಎಂದು ಪರಿಶೀಲನೆಯಿಂದ ತಿಳಿದು ಬಂದಿದೆ. ವಿಶೇಷವಾಗಿ ಬೇಕರಿಗಳಲ್ಲಿ ಸಿಗುವ ಬಗೆ ಬಗೆಯ ಬಣ್ಣದ (Colour) ಸಿಹಿ ತಿಂಡಿಗಳಲ್ಲಿ ಬಳಸುವ ರಾಸಾಯನಿಕ ಬಣ್ಣದಲ್ಲಿ ಕ್ಯಾನರ್ ಅಂಶ ಇರುವುದು ಗೊತ್ತಾಗಿದೆ.
ಹತ್ತಕ್ಕೂ ಹೆಚ್ಚು ಸಿಹಿ ತಿಂಡಿಗಳ (Sweat Items) ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ. ಮೈಸೂರು ಪಾಕ್, ಮಿಕ್ಸ್ಚರ್, ಕಾರ್ಜುರಬರ್ಫಿ, ಜಿಲೇಬಿ, ಜಹಂಗೀರ್ನಲ್ಲಿ (Mysore Pak, Mixture, Karjura Barfi, Jalebi, Jahangir) ಕೃತಕ ಬಣ್ಣ ಬಳಕೆ ಮಾಡಿರುವುದು ಗೊತ್ತಾಗಿದೆ. ಅಲ್ಲದೆ ಈ ಸಿಹಿ ತಿಂಡಿಗಳಲ್ಲಿ ಸಕ್ಕರೆ ಪ್ರಮಾಣ (Amount of sugar) ಹೆಚ್ಚಾಗಿರುವುದು ಪರಿಶೀಲನೆಯಿಂದ ತಿಳಿದು ಬಂದಿದೆ. ಇದರ ಬೆನ್ನೆಲ್ಲೆ ಹಲವೆಡೆ ದಾಳಿ ನಡೆಸಿ ಮಾದರಿ ಸಂಗ್ರಹಿಸಿ ಪರಿಶೀಲನೆಗೆ (Review) ಕಳುಹಿಸಲಾಗಿತ್ತು.
ಅದರಲ್ಲೂ ಮುಖ್ಯವಾಗಿ ಬೆಂಗಳೂರಿನ ಹಲವು ಬೇಕರಿಗಳಲ್ಲಿ ಸಿಗುವ ಜಿಲೇಬಿಗಳಲ್ಲಿ (Jelebi) ಬಳಕೆ ಮಾಡುವ ಕಲರ್ ಕ್ಯಾನ್ಸರ್ (Cancer) ಮಾತ್ರವಲ್ಲದೆ, ಹೆಪಟೈಟಿಸ್, ಡಯಾಬಿಟಿಸ್ ್ಗೆ ಕಾರಣವಾಗುತ್ತದೆ ಎಂದು ಆಹಾರ ತಜ್ಞರು ಹೇಳಿದ್ದಾರೆ. ಮಿಕ್ಸ್ಚರ್ ಹಾಗೂ ಜಿಲೇಜಿ ತಯಾರಿಕೆಯಲ್ಲಿ ಬಳಕೆ ಮಾಡುವ ಹಳದಿ ಬಣ್ಣ ಕ್ಯಾನ್ಸರ್ ಕಾರಕ ಎಂದು ತಿಳಿದು ಬಂದಿದೆ.

ಇನ್ನು ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಯ (Each district) ಅಂಕಿತಾಧಿಕಾರಿಗಳ ವ್ಯಾಪ್ತಿಯಲ್ಲಿ ಜಿಲೇಬಿ ಮತ್ತು ಶರಬತ್ನ (Juice) ತಲಾ 5 ಮಾದರಿಗಳನ್ನು ಸಂಗ್ರಹಿಸುವಂತೆ ಆದೇಶಿಸಲಾಗಿದೆ. ಒಟ್ಟಾರೆ, ರಾಜ್ಯಾದ್ಯಂತ 10 ಮಾದರಿಗಳನ್ನು ಅಂದರೆ ಜಿಲೇಬಿ 5, ಶರಬತ್ 5 ಪರೀಕ್ಷೆಗೆ ಒಳಪಡಿಸಲು ಯೋಜನೆ ರೂಪಿಸಲಾಗಿದೆ.
ಈ ಕುರಿತು ಆಹಾರ ಗುಣಮಟ್ಟ ಮತ್ತು ಸುರಕ್ಷತೆ (Quality and safety) ಇಲಾಖೆಯ ಆಯುಕ್ತರು ಮಾತನಾಡಿ, ಗ್ರಾಹಕರ ಆರೋಗ್ಯವೇ ನಮ್ಮ ಆದ್ಯತೆ. ಜಿಲೇಬಿ ಮತ್ತು ಶರಬತ್ನಂತಹ (jalebi and sherbat) ಜನಪ್ರಿಯ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣಗಳು ಮತ್ತು ಸ್ವಚ್ಛತೆಯ ಕೊರತೆಯ ಬಗ್ಗೆ ದೂರುಗಳು ಬಂದಿವೆ. ಇದನ್ನು ಗಂಭೀರವಾಗಿ ಪರಿಗಣಿಸಿ, ರಾಜ್ಯಾದ್ಯಂತ ತೀವ್ರ ಕಾರ್ಯಾಚರಣೆಗೆ (Intensive operation) ಆದೇಶಿಸಲಾಗಿದೆ.
ಇದನ್ನು ಓದಿ : http://ಭಾರತ–ಪಾಕ್ ಗಡಿಯಲ್ಲಿ ಹೆಚ್ಚಿದ ಯುದ್ಧಬೀತಿ : ಪ್ರಧಾನಿ ಭೇಟಿಯಾದ ವಾಯುಸೇನೆ ಮುಖ್ಯಸ್ಥ
ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಯಾವುದೇ ರಿಯಾಯಿತಿಯಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. (Carcinogenic in sharbat and jalebi) ಅಧಿಕಾರಿಗಳಿಗೆ ನೀಡಿರುವ ಸೂಚನೆಯಂತೆ, ಸಂಗ್ರಹಿಸಿದ ಮಾದರಿಗಳನ್ನು ಮೂರು ದಿನಗಳ ಒಳಗೆ ಪ್ರಯೋಗಾಲಯಕ್ಕೆ ರವಾನಿಸಬೇಕು. ಈ ಮಾದರಿಗಳನ್ನು ವೈಜ್ಞಾನಿಕವಾಗಿ ಪರೀಕ್ಷಿಸಿ (Test scientifically) , ಕೃತಕ ಬಣ್ಣಗಳ ಬಳಕೆ, ಕಲಬೆರಕೆ, ಮತ್ತು ಸ್ವಚ್ಛತೆಯ ಮಾನದಂಡಗಳನ್ನು ತಪಾಸಣೆ ಮಾಡಲಾಗುವುದು. ಪರೀಕ್ಷಾ ವರದಿಯ ಆಧಾರದ ಮೇಲೆ ಕಾನೂನು ಕ್ರಮ (Legal action) ಜರುಗಿಸಲು ಇಲಾಖೆ ಸಜ್ಜಾಗಿದೆ.