ಮತ್ತೆ ಮುನ್ನೆಲೆಗೆ ಬಂದ ಕಾವೇರಿ (Cauvery massive protest in Mandya) ವಿವಾದ: ಮಂಡ್ಯದಲ್ಲಿ ರೈತರ ಬೃಹತ್ ಹೋರಾಟ
ಕರ್ನಾಟಕದ ನೀರು ಮೊದಲು ಕರ್ನಾಟಕಕ್ಕೇ ಎಂದು ಮಂಡ್ಯದಲ್ಲಿ ಪ್ರತಿಭಟನೆ; ಸಂಚಾರಕ್ಕೂ ಅಡಚಣೆ
CWRC ನಿರ್ದೇಶನ ಖಂಡಿಸಿ ಕರವೇ ಹಾಗೂ ರೈತ ಸಂಘಟನೆಗಳ ಬೃಹತ್ ಪ್ರತಿಭಟನೆ; ಸರ್ಕಾರಕ್ಕೆ ಎಚ್ಚರಿಕೆ
Mandya : ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವಂತೆ ಕಾವೇರಿ ಜಲ (Cauvery massive protest in Mandya) ನಿಯಂತ್ರಣ ಸಮಿತಿ (CWRC) ನೀಡಿರುವ ನಿರ್ದೇಶನದ ವಿರುದ್ಧ ಮಂಡ್ಯ ಜಿಲ್ಲೆಯಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ.
ಜಿಲ್ಲೆಯ ವಿವಿಧ ಭಾಗಗಳಲ್ಲಿ ರೈತರು, ಕನ್ನಡಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿ, ಯಾವುದೇ ಕಾರಣಕ್ಕೂ ರಾಜ್ಯದಿಂದ ನೀರು ಬಿಡುಗಡೆ ಮಾಡಬಾರದು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕಾವೇರಿ ಕಣಿವೆಯಲ್ಲಿ ಮಳೆಯ ಕೊರತೆ, ಜಲಾಶಯಗಳಲ್ಲಿ ನೀರಿನ ಅಭಾವ ಹಾಗೂ ಬೆಳೆಗಳಿಗೆ ನೀರಿನ ಸಂಕಷ್ಟ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು
ಹರಿಸುವ ನಿರ್ಧಾರ ರೈತರ ಆಕ್ರೋಶಕ್ಕೆ ಕಾರಣವಾಗಿದೆ. “ಮೊದಲು ನಮ್ಮ ರೈತರ ಹಿತಾಸಕ್ತಿ ಕಾಪಾಡಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಮಂಡ್ಯದ ಸಂಜಯ್ ವೃತ್ತದಲ್ಲಿ ಕನ್ನಡ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೈತರು ತಲೆಯ ಮೇಲೆ ಕಲ್ಲು ಹೊತ್ತು, ಖಾಲಿ ಕೊಡ ಹಾಗೂ ಒಣಗಿದ ಕಬ್ಬಿನ ಗಿಡಗಳನ್ನು ಹಿಡಿದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
“ಪ್ರಾಣ ಬಿಟ್ಟೇವು, ನೀರು ಬಿಡಲ್ಲ” ಎಂಬ ಘೋಷಣೆಗಳನ್ನು ಕೂಗುತ್ತ ಪ್ರತಿಭಟನಾಕಾರರು ರಾಜ್ಯ ಸರ್ಕಾರ ಹಾಗೂ CWRC ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದರು.
ಕರವೇ ಜಿಲ್ಲಾಧ್ಯಕ್ಷ ವೇಣು ಡಿ.ಎಸ್. ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ ನೂರಾರು ರೈತರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದು, ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಗಟ್ಟಿಯಾದ ನಿಲುವು ತಾಳಬೇಕೆಂದು ಒತ್ತಾಯಿಸಿದರು.
ಇನ್ನೊಂದೆಡೆ, ಶ್ರೀರಂಗಪಟ್ಟಣದಲ್ಲಿಯೂ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ (Cauvery massive protest in Mandya) ಪ್ರತಿಭಟನೆ ತೀವ್ರಗೊಂಡಿತು. ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ರೈತರು ರಸ್ತೆ ತಡೆ ಪ್ರತಿಭಟನೆ ನಡೆಸಿದರು.
ಇದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಟ್ರಾಫಿಕ್ ಜಾಮ್ ಉಂಟಾಯಿತು. ಪ್ರತಿಭಟನಾಕಾರರು ರಾಜ್ಯದ ಜಲಾಶಯಗಳಲ್ಲಿ ಸಾಕಷ್ಟು ನೀರಿನ
ಸಂಗ್ರಹವಿಲ್ಲದಿರುವಾಗ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದು ಕರ್ನಾಟಕದ ರೈತರಿಗೆ ಅನ್ಯಾಯವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೊದಲು
ರಾಜ್ಯದ ಕುಡಿಯುವ ನೀರು ಹಾಗೂ ಕೃಷಿ ಅಗತ್ಯಗಳನ್ನು ಪೂರೈಸಿದ ಬಳಿಕವೇ ಬೇರೆ ರಾಜ್ಯಗಳಿಗೆ ನೀರು ಹರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆ ನಡುವೆ ಮತ್ತೊಂದು ಗಂಭೀರ ಆರೋಪವೂ ಕೇಳಿಬಂದಿದೆ. CWRC ಅಧಿಕೃತ ಆದೇಶ ಹೊರಬೀಳುವ ಮುನ್ನವೇ ಕಾವೇರಿ ಹಾಗೂ ಕಬಿನಿ ಜಲಾಶಯಗಳಿಂದ ತಮಿಳುನಾಡಿನತ್ತ ನೀರು ಹರಿಯುತ್ತಿದೆ ಎಂಬ ಅನುಮಾನವನ್ನು ಕೆಲ ರೈತ ಸಂಘಟನೆಗಳು ವ್ಯಕ್ತಪಡಿಸಿವೆ.
ಈ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಹಾಗೂ ನೀರು ಬಿಡುಗಡೆ ಕುರಿತ ಎಲ್ಲಾ ಮಾಹಿತಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಬೇಕು ಎಂದು ಆಗ್ರಹಿಸಲಾಗಿದೆ.
ರೈತರ ಹಿತಾಸಕ್ತಿಯನ್ನು ಕಡೆಗಣಿಸಿ ಗುಪ್ತವಾಗಿ ನೀರು ಹರಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಸರ್ಕಾರದ ನಡೆ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈ ವಿಚಾರದಲ್ಲಿ ಪಾರದರ್ಶಕತೆ ಕಾಪಾಡುವಂತೆ ರೈತರು ಒತ್ತಾಯಿಸಿದ್ದಾರೆ.
ಕಾವೇರಿ ನೀರಿನ ಹಂಚಿಕೆ ವಿಚಾರವು ಮತ್ತೆ ಕರ್ನಾಟಕ–ತಮಿಳುನಾಡು ನಡುವಿನ ಸೂಕ್ಷ್ಮ ವಿಷಯವಾಗಿ ಪರಿಣಮಿಸಿದೆ. ಮಳೆಯ ಕೊರತೆ ಹಾಗೂ ಜಲಾಶಯಗಳಲ್ಲಿನ ನೀರಿನ
ಮಟ್ಟ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರೈತರು ಆತಂಕದಲ್ಲಿದ್ದು, ರಾಜ್ಯ ಸರ್ಕಾರ ರೈತರ ಪರವಾಗಿ ದೃಢ ನಿಲುವು ತಾಳಬೇಕೆಂದು ಒತ್ತಾಯಿಸುತ್ತಿದ್ದಾರೆ.
ಮುಂದಿನ ದಿನಗಳಲ್ಲಿ ಸರ್ಕಾರದ ನಿರ್ಧಾರ ಹಾಗೂ ನ್ಯಾಯಾಂಗ ಅಥವಾ ಕಾವೇರಿ ಪ್ರಾಧಿಕಾರದ ಕ್ರಮಗಳು ಈ ವಿವಾದದ ದಿಕ್ಕನ್ನು ನಿರ್ಧರಿಸಲಿವೆ.
ಸದ್ಯ ಮಂಡ್ಯ ಸೇರಿದಂತೆ ಕಾವೇರಿ ಕಣಿವೆಯ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಮುಂದುವರಿದಿದ್ದು, ಪರಿಸ್ಥಿತಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ.
ರೈತರ ಬೇಡಿಕೆಗಳಿಗೆ ಸರ್ಕಾರ ಯಾವ ರೀತಿಯಲ್ಲಿ ಸ್ಪಂದಿಸುತ್ತದೆ ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ.
ಇದನ್ನು ಓದಿ : https://vijayatimes.com/instructions-to-remove-transformer-electric-poles/