ಬ್ಯಾಂಕ್ ವಂಚನೆ ಆರೋಪದ ಹಿನ್ನೆಲೆಯಲ್ಲಿ (CBI shocks Anil Ambani companies) ಬೆಂಗಳೂರು ಸೇರಿ ಹಲವೆಡೆ ಸಿಬಿಐ ದಾಳಿ
ಸಾರ್ವಜನಿಕ ಬ್ಯಾಂಕ್ಗಳಿಗೆ ಸಾವಿರಾರು ಕೋಟಿ ನಷ್ಟ ಆರೋಪ
ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಅನಿಲ್ ಅಂಬಾನಿ ಪ್ರಕರಣ ತನಿಖೆ
ದೇಶದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಅನಿಲ್ ಅಂಬಾನಿ (Anil Ambani ) ನೇತೃತ್ವದ ರಿಲಯನ್ಸ್ ಕಮ್ಯುನಿಕೇಷನ್ಸ್ (CBI shocks Anil Ambani companies) ವಿರುದ್ಧದ ಬಹುಕೋಟಿ ವಂಚನೆ ಪ್ರಕರಣಕ್ಕೆ ಇದೀಗ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ.
ಸಾರ್ವಜನಿಕ ವಲಯದ ಬ್ಯಾಂಕ್ಗಳು ಹಾಗೂ ಎಲ್ಐಸಿಗೆ ಸಾವಿರಾರು ಕೋಟಿ ರೂಪಾಯಿ ನಷ್ಟ ಉಂಟುಮಾಡಿದ ಆರೋಪದ ಹಿನ್ನೆಲೆ ಕೇಂದ್ರೀಯ ತನಿಖಾ ದಳ (CBI) ತನ್ನ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.

ಬೆಂಗಳೂರು, ಮುಂಬೈ ಮತ್ತು ಗುರುಗ್ರಾಮ ಸೇರಿದಂತೆ ದೇಶದ ಹಲವು ನಗರಗಳಲ್ಲಿ ಏಕಕಾಲಕ್ಕೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಹಲವು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ದಾಳಿ ಮುಖ್ಯವಾಗಿ ರಿಲಯನ್ಸ್ ಕಮ್ಯುನಿಕೇಷನ್ಸ್ನ (CBI shocks Anil Ambani companies) ಮಾಜಿ ಸಿಇಒ, ಸಿಎಫ್ಒ ಹಾಗೂ ನಿರ್ದೇಶಕರ ನಿವಾಸಗಳ ಮೇಲೆ ನಡೆದಿರುವುದು ವಿಶೇಷವಾಗಿದೆ.
2015ರಿಂದ 2017ರ ಅವಧಿಯಲ್ಲಿ ಕಂಪನಿಯ ಹಣಕಾಸು ವ್ಯವಹಾರಗಳಲ್ಲಿ ಗಂಭೀರ ಅಕ್ರಮಗಳು ನಡೆದಿರುವ ಸಾಧ್ಯತೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯ ನೀಡಿದ ಶೋಧ ವಾರಂಟ್ ಆಧಾರದ ಮೇಲೆ ಅಧಿಕಾರಿಗಳು ಏಳು ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.
ದಾಳಿಯ ವೇಳೆ ಬ್ಯಾಂಕಿಂಗ್ ದಾಖಲೆಗಳು, ಹಣ ವರ್ಗಾವಣೆ ಮಾಹಿತಿಗಳು ಮತ್ತು ಇತರೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ಈ ಪ್ರಕರಣದಲ್ಲಿ ಒಟ್ಟು 27,337 ಕೋಟಿ ರೂಪಾಯಿ ವಂಚನೆ ನಡೆದಿದೆ ಎಂದು ಅಂದಾಜಿಸಲಾಗಿದೆ. ಸಾರ್ವಜನಿಕ ವಲಯದ ಬ್ಯಾಂಕ್ಗಳು ಹಾಗೂ ಜೀವ ವಿಮಾ ನಿಗಮ (LIC) ನೀಡಿದ ದೂರಿನ ಮೇರೆಗೆ ಈಗಾಗಲೇ ಏಳು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.
ಈ ಹಣಕಾಸು ಹಗರಣ ದೇಶದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಸಾಲ ನೀಡುವ ವ್ಯವಸ್ಥೆಯ ಮೇಲೂ ಪ್ರಶ್ನೆಗಳನ್ನು ಎಬ್ಬಿಸಿದೆ. ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲೇ ಈ ತನಿಖೆ ನಡೆಯುತ್ತಿರುವುದರಿಂದ ಪ್ರಕರಣಕ್ಕೆ ಹೆಚ್ಚಿನ ಗಂಭೀರತೆ ಸಿಕ್ಕಿದೆ. ಕೇಂದ್ರ ತನಿಖಾ ಸಂಸ್ಥೆಗಳು ಈ ಪ್ರಕರಣವನ್ನು ಅತ್ಯಂತ ಸೂಕ್ಷ್ಮವಾಗಿ ಪರಿಶೀಲಿಸುತ್ತಿವೆ.
ಇದಕ್ಕೂ ಮೊದಲು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಕಮ್ಯುನಿಕೇಷನ್ಸ್ನ ಜಂಟಿ ಅಧ್ಯಕ್ಷ ಡಿ. ವಿಶ್ವನಾಥ್ (D.Vishwanth) ಮತ್ತು ಉಪಾಧ್ಯಕ್ಷ ಅನಿಲ್ ಕಲ್ಯಾ
ಅವರನ್ನು ಸಿಬಿಐ ಬಂಧಿಸಿತ್ತು. ಬ್ಯಾಂಕಿಂಗ್ ಹಣದ ದುರುಪಯೋಗ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಇವರ ಪಾತ್ರವಿದೆ ಎಂಬ ಆರೋಪ ಕೇಳಿಬಂದಿದೆ.
ಪ್ರಸ್ತುತ ಇಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದು, ಮುಂದಿನ ವಿಚಾರಣೆ ಮುಂದುವರಿದಿದೆ. ಕಳೆದ ಕೆಲವು ತಿಂಗಳುಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿ ಸಿಬಿಐ ಒಟ್ಟು 31 ಸ್ಥಳಗಳಲ್ಲಿ ತಪಾಸಣೆ ನಡೆಸಿರುವುದು ಪ್ರಕರಣದ ಗಂಭೀರತೆಯನ್ನು ತೋರಿಸುತ್ತದೆ.
ಈ ಬೃಹತ್ ಹಣಕಾಸು ಹಗರಣ ಮತ್ತೆ ದೇಶದ ಕಾರ್ಪೊರೇಟ್ ವ್ಯವಸ್ಥೆ, ಬ್ಯಾಂಕಿಂಗ್ ಭದ್ರತೆ ಮತ್ತು ಸಾಲ ವಿತರಣಾ ಕ್ರಮಗಳ ಬಗ್ಗೆ ಚರ್ಚೆ ಹುಟ್ಟಿಸಿದೆ.
ದೊಡ್ಡ ಕಂಪನಿಗಳಿಗೆ ನೀಡಲಾಗುವ ಸಾಲಗಳ ಮೇಲ್ವಿಚಾರಣೆ ಮತ್ತು ಪಾರದರ್ಶಕತೆ ಹೆಚ್ಚಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.
ಸಿಬಿಐ ತನಿಖೆಯ ಮುಂದಿನ ಹಂತಗಳಲ್ಲಿ ಇನ್ನಷ್ಟು ಪ್ರಮುಖ ಮಾಹಿತಿ ಹೊರಬರುವ ಸಾಧ್ಯತೆ ಇದ್ದು, ಈ ಪ್ರಕರಣ ದೇಶದ ಆರ್ಥಿಕ ಕ್ಷೇತ್ರದಲ್ಲಿ ದೊಡ್ಡ ಪರಿಣಾಮ
ಬೀರುವ ಸಾಧ್ಯತೆಯಿದೆ. ಬ್ಯಾಂಕ್ ವಂಚನೆ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯವೂ ಮತ್ತಷ್ಟು ಜೋರಾಗಿದೆ.
ಇದನ್ನು ಓದಿ : https://vijayatimes.com/neet-ug-re-exam-date/