ಬೆಂಗಳೂರು,ಫೆ.19: ನಗರದಲ್ಲಿ ನೂರಕ್ಕಿಂತ ಹೆಚ್ಚು ಸಾರ್ವಜನಿಕರು ಸೇರುವ ಕಡೆಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿಗಳನ್ನು ಅಳವಡಿಕೆಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಈ ಬಗ್ಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಕರ್ನಾಟಕ ಸಾರ್ವಜನಿಕರ ರಕ್ಷಣೆ ಕಾಯ್ದೆ 2017 ರ ಅನ್ವಯ ಈ ಸೂಚನೆಯನ್ನು ನೀಡಲಾಗಿದ್ದು, ಅಂಗಡಿ ಮಳಿಗೆಗಳು, ಹೊಟೇಲ್, ರೆಸ್ಟೋರೆಂಟ್, ಸೂಪರ್ ಮಾರ್ಕೆಟ್, ಬಿಗ್ ಬಜಾರ್ಗಳಲ್ಲಿ, ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಈ ನಿಯಮವನ್ನು ಅಂಗಡಿ ಮಾಲೀಕರು ಪಾಲಿಸದೆ ನಿರ್ಲಕ್ಷಿಸಿ, ಸಿಸಿಟಿವಿ ಅಳವಡಿಸಿಕೊಳ್ಳದಿದ್ದಲ್ಲಿ ಅಂಥವರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ.