New Delhi: ಉಚಿನ ಯೋಜನೆಗಳನ್ನು ನೀಡುವ ಮೂಲಕ ರಾಜ್ಯಗಳು ಸಾಲದ ಸುಳಿಗೆ ಸಿಲುಕಿ ದಿವಾಳಿಯಾಗುವ ಸಾಧ್ಯತೆಯಿದೆ. ಈಗಾಗಲೇ ಕೇರಳ, ತಮಿಳುನಾಡಿನಂತ (Kerala, Tamilnadu) ರಾಜ್ಯಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ, ಸಾಲ ಮಾಡಿ ಉಚಿತ ವಿದ್ಯುತ್ ನೀಡುವ ರಾಜ್ಯಗಳು ಸಾಲದ ಸುಳಿಗೆ ಸಿಲುಕಲಿವೆ ಎಂದು ಕೇಂದ್ರ ಸರ್ಕಾರ (Central Government) ಎಚ್ಚರಿಕೆ ನೀಡಿದೆ.
ಈ ಕುರಿತು ಮಾತನಾಡಿರುವ ಕೇಂದ್ರ ಇಂಧನ ಸಚಿವ ಆರ್.ಕೆ. ಸಿಂಗ್ ( R K Singh), ಪಂಜಾಬ್ನಂತಹ ರಾಜ್ಯಗಳು ಸಾಲ ಮಾಡಿ, ವಿದ್ಯುತ್ ಖರೀದಿಸಿ ಉಚಿತವಾಗಿ ನೀಡುತ್ತಿವೆ. ರಾಜ್ಯಗಳ ಬಳಿ ಸಾಕಷ್ಟು ಹಣವಿದ್ದರೆ ಇಂತಹ ಉಚಿತ ಯೋಜನೆಗಳನ್ನು ಜಾರಿಗೊಳಿಸುವುದು ಉತ್ತಮ. ಆದರೆ, ಸಾಲ ಮಾಡಿದಂತಹ ಯೋಜನೆಗಳು ಜಾರಿಗೆ ತಂದರೆ ಅದಕ್ಕೆ ರಾಜ್ಯ ಸರ್ಕಾರಗಳು ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
2022 ರಲ್ಲಿ ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದ ನಂತರ ಪ್ರತಿ ಮನೆಗೆ 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡುತ್ತಿದೆ. ಇದರಿಂದ ಈಗಾಗಲೇ 2 ವರ್ಷಗಳಲ್ಲಿ 47,000 ಕೋಟಿ ರೂಪಾಯಿಗಳಷ್ಟು ಸಾಲವನ್ನು ಪಂಜಾಬ್ ಪಡೆದುಕೊಂಡಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಪಂಜಾಬ್ (Punjab) ಆರ್ಥಿಕವಾಗಿ ದಿವಾಳಿಯಾಗುವ ದಿಕ್ಕಿನತ್ತ ಸಾಗುತ್ತಿದೆ. ಸೂಕ್ತ ಆರ್ಥಿಕ ಸಂಪನ್ಮೂಲ ಇಲ್ಲದೇ, ರಾಜ್ಯಗಳು ಈ ರೀತಿಯ ಉಚಿತ ಜನಪ್ರಿಯ ಯೋಜನೆಗಳಿಗೆ ಕೈ ಹಾಕಬಾರದು.
ಈ ರೀತಿಯ ಯೋಜನೆಗಳನ್ನು ಜಾರಿಗೊಳಿಸಲು ಸೂಕ್ತ ಆರ್ಥಿಕ ನೀತಿಯ ಅವಶ್ಯಕತೆ ಇದೆ ಎಂದು ಕರ್ನಾಟಕ (Karntaka) ರಾಜ್ಯ ಸರ್ಕಾರಕ್ಕೂ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ. ಇನ್ನು ಬೇರೆ ಉತ್ಪನ್ನಗಳಂತೆ ವಿದ್ಯುತ್ ಉತ್ಪಾದನೆ ಮಾಡಲು ಕೂಡಾ ಸಾಕಷ್ಟು ಹಣದ ಅವಶ್ಯಕತೆ ಇದೆ. ಹೀಗಾಗಿಯೇ ನಾನು ವಿದ್ಯುತ್ ಉಚಿತವಾಗಿ ಸಿಗೋದಿಲ್ಲ ಎಂದು ರಾಜ್ಯಗಳಿಗೆ ಹೇಳುತ್ತಲೇ ಬಂದಿದ್ದೇನೆ.
ಆದರೂ ಅನೇಕ ರಾಜ್ಯಗಳು ಮತದಾರರನ್ನು ಸೆಳೆಯಲು, ತಮ್ಮ ರಾಜಕೀಯ ಶಕ್ತಿ ಹೆಚಚ್ಚಿಸಿಕೊಳ್ಳಲು ವಿದ್ಯುತ್ತನ್ನು ಉಚಿತವಾಗಿ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ಈಗಾಗಲೇ ಸಾಲದಲ್ಲಿರುವ ಕೆಲವು ರಾಜ್ಯಗಳು ಉಚಿತ ವಿದ್ಯುತ್ನಂತಹ ಯೋಜನೆಗಳಿಗಾಗಿ ಇನ್ನಷ್ಟು ಸಾಲ ಮಾಡುತ್ತಿವೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.