ಚೀನಾದ ಉಂಟಾಗಿರುವ ಕಾಯಿಲೆ ಪ್ರಕರಣ: ಕರ್ನಾಟಕ ಸೇರಿ 5 ರಾಜ್ಯಗಳಿಗೆ ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ

China: ಚೀನಾದ (China) ಮಕ್ಕಳಲ್ಲಿ ಉಸಿರಾಟದ ಕಾಯಿಲೆಗಳು ಉಂಟಾಗಿದ್ದು, ಕರ್ನಾಟಕ (Karnataka) ಸೇರಿ ಐದು ರಾಜ್ಯಗಳಿಗೆ ಎಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದೆ. ರಾಜಸ್ಥಾನ, ಕರ್ನಾಟಕ, ಗುಜರಾತ್, ಉತ್ತರಾಖಂಡ, ಹರಿಯಾಣ ಮತ್ತು ತಮಿಳುನಾಡು (Tamilnadu) ರಾಜ್ಯ ಸರ್ಕಾರಗಳು ಉಸಿರಾಟದ ಸಮಸ್ಯೆಗಳ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಆದೇಶವನ್ನು ನೀಡಿದೆ.

ಇದೀಗ ಭಾರತದಲ್ಲೂ ಕೂಡ ಆತಂಕ ಸೃಷ್ಟಿಯಾಗಿದ್ದು, ಈ ಕಾರಣಕ್ಕೆ ಆರೋಗ್ಯ ಇಲಾಖೆ (Department of Health) ರಾಜ್ಯಗಳಿಗೂ ಈ ಬಗ್ಗೆ ನಿರ್ದೇಶನ ನೀಡಿದೆ. ಒಟ್ಟು ಆರು ರಾಜ್ಯಗಳಿಗೆ ಕೇಂದ್ರ ಸರ್ಕಾರ ಅಲರ್ಟ್​​ (Alert) ಆಗಿರುವಂತೆ ಆದೇಶವನ್ನು ನೀಡಿದೆ. ಎಲ್ಲಾ ಆರೋಗ್ಯ ಮೂಲಸೌಕರ್ಯಗಳನ್ನು ಪರಿಶೀಲನೆ ಮಾಡುವಂತೆ ಹಾಗೂ ಈಗಾಗಲೇ ಎಲ್ಲ ರೀತಿಯ ಪರೀಕ್ಷೆಗೂ ಸಿದ್ದತೆ ಮಾಡಿಕೊಳ್ಳುವಂತೆ ಹೇಳಿದೆ.

ಈ ರಾಜ್ಯದಲ್ಲಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರ ಬಗ್ಗೆ ಹೆಚ್ಚಿನ ಕ್ರಮವಹಿಸುವಂತೆ ನಿರ್ದೇಶನದಲ್ಲಿ ತಿಳಿಸಿದ್ದು, ರಾಜಸ್ಥಾನ, ಕರ್ನಾಟಕ (Karnataka), ಗುಜರಾತ್, ಉತ್ತರಾಖಂಡ, ಹರಿಯಾಣ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳು ಉಸಿರಾಟದ ಸಮಸ್ಯೆಗಳ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಆದೇಶವನ್ನು ನೀಡಿದೆ.

ಇನ್ನು ಈ ಬಗ್ಗೆ ಕರ್ನಾಟಕ ಆರೋಗ್ಯ ಇಲಾಖೆ ಕೂಡ ಹೆಚ್ಚಿನ ಜಾಗೃತೆಯನ್ನು ವಹಿಸಿಕೊಂಡಿದ್ದು, ಜ್ವರದ ಬಗ್ಗೆ ನಾಗರಿಕರು ಜಾಗೃತರಾಗಿರಲು ಕೇಳಿಕೊಂಡಿದೆ. ಈ ಜ್ವರದ ಲಕ್ಷಣಗಳು ಮತ್ತು ಅಪಾಯಕಾರಿ ಅಂಶಗಳ ಬಗ್ಗೆ ಪಟ್ಟಿ ಮಾಡಿದ್ದು, ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮತ್ತು ಮೂಗನ್ನು ಮುಚ್ಚಿಕೊಳ್ಳುವುದು, ಆಗಾಗ್ಗೆ ಕೈಗಳನ್ನು ತೊಳೆಯುವುದು, ಮುಖವನ್ನು ಸ್ಪರ್ಶಿಸುವುದನ್ನು ತಪ್ಪಿಸುವುದು ಮತ್ತು ಕಿಕ್ಕಿರಿದ ಸ್ಥಳಗಳಲ್ಲಿ ಮಾಸ್ಕ್​​​​ (Mask) ಬಳಸಬೇಕು ಎಂದು ಹೇಳಿದೆ.

ಇನ್ನು ರಾಜಸ್ಥಾನ ಆರೋಗ್ಯ ಇಲಾಖೆ ತಿಳಿಸಿರುವಂತೆ ರಾಜ್ಯದಲ್ಲಿ ಅಂತಹ ಯಾವುದೇ ಆತಂಕದ ಸ್ಥಿತಿ ಇಲ್ಲ. ಆದರೆ ವೈದ್ಯಕೀಯ ಸಿಬ್ಬಂದಿ ಜಾಗರೂಕರಾಗಿರಿ ಮತ್ತು ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಯಬೇಕು. ಮಕ್ಕಳ ಘಟಕಗಳು ಮತ್ತು ಔಷಧ ವಿಭಾಗಗಳಲ್ಲಿ ಸಾಕಷ್ಟು ವ್ಯವಸ್ಥೆಗಳನ್ನು ಮಾಡಬೇಕು ಎಂದು ಹೇಳಿದ್ದಾರೆ.

ಗುಜರಾತ್‌ನ (Gujarat) ಆರೋಗ್ಯ ಸಚಿವ ರುಶಿಕೇಶ್ ಪಟೇಲ್ ಅವರು COVID-19 ಸಾಂಕ್ರಾಮಿಕ ಸಮಯದಲ್ಲಿ ರಚಿಸಲಾದ ಆರೋಗ್ಯ ಮೂಲಸೌಕರ್ಯಗಳನ್ನೇ ಈಗ ಚೀನಾದಲ್ಲಿ ಉಂಟಾದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆ ಕ್ರಮವಾಗಿ ಬಲಪಡಿಸಲಾಗುತ್ತಿದೆ ಎಂದು ಹೇಳಿದರು. ತಮ್ಮ ಸಿದ್ಧತೆಯನ್ನು ಪರಿಶೀಲಿಸುವಂತೆ ರಾಜ್ಯ ಸರ್ಕಾರವು ಸರ್ಕಾರಿ ಅಧಿಕಾರಿಗಳಿಗೆ ಸೂಚಿಸಿದೆ

ಭವ್ಯಶ್ರೀ ಆರ್ ಜೆ

Exit mobile version