ಚಾಮರಾಜನಗರ ಆಸ್ಪತ್ರೆ ದುರಂತ : ಘಟನೆಯ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಚಾಮರಾಜನಗರ, ಮೇ. 03: ಆಮ್ಲಜನಕ ಕೊರತೆಯಿಂದ ಸಂಭವಿಸಿದ 23 ಕೊರೊನಾ ಸೋಂಕಿತರ ಸಾವಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶ ನೀಡಿದೆ. ಈ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆದೇಶ ಹೊರಡಿಸಿದ್ದು ಮೂರು ದಿನಗಳ ಒಳಗಾಗಿ ತನಿಖಾ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.

ಐಎಎಸ್‌ ಅಧಿಕಾರಿ ಶಿವಯೋಗಿ ಕಳಸದ (ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವ್ಯವಸ್ಥಾಪಕ ನಿರ್ದೇಶಕರ) ಅವರನ್ನು ವಿಚಾರಣಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಘಟನೆಯ ಕುರಿತಾಗಿ ತನಿಖಾ ವರದಿಯನ್ನು ಮೂರು ದಿನಗಳ ಒಳಗಾಗಿ ಸರ್ಕಾರಕ್ಕೆ ಸಲ್ಲಿಸುವಂತೆ ಆದೇಶಿಸಲಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ತುತ್ತಾದ 23 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. ಈ ಘಟನೆಗೆ ಕಳವಳವನ್ನು ವ್ಯಕ್ತಪಡಿಸಿದ ಸರ್ಕಾರ ಸಾವಿಗೆ ಕಾರಣರಾದವರನ್ನು ಪತ್ತೆ ಹಚ್ಚಿ ಸರ್ಕಾರ ವರದಿ ನೀಡುವಂತೆ ಸೂಚನೆ ನೀಡಿದೆ. ಸಿಎಂ ಬಿಎಸ್ ಯಡಿಯೂರಪ್ಪ ಆರೋಗ್ಯ ಸಚಿವ ಡಾ. ಸುಧಾಕರ್‌ ಅವರ ಜೊತೆಗೆ ಮಾತನಾಡಿ ಘಟನಾ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ.

Exit mobile version