ಚಾಮರಾಜನಗರ ಸೆ 1 : ಬಡವರಿಗೆ ಮೂಲ ಸೌಕರ್ಯಗಳಾದ ಪಡಿತರ ಮತ್ತು ಪಿಂಚಣಿ ನೀಡುವುದಿಲ್ಲ ಎಂದು ಚಾಮರಾಜನಗರ ಜಿಲ್ಲಾಧಿಕಾರಿಗಳು ಹೆದರಿಸಿರುವುದು ಅಕ್ರಮ ಹಾಗೂ ಈ ರೀತಿ ಮಾಡುವುದು ಹಾಗೂ ಅಸಂವಿಧಾನಿಕ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯೆಕ್ತ ಪಡಿಸಿದ್ದಾರೆ.
ಈ ಬಗ್ಗೆ ಟ್ವಿಟರ್ನಲ್ಲಿ ಆಕ್ರೋಶವ್ಯಕ್ತಪಡಿಸಿರುವ ಅವರು ಬಿಜೆಪಿ ಸರ್ಕಾರ ಹಾಗೂ ಚಾಮರಾಜನಗರ ಜಿಲ್ಲಾಡಳಿತಕ್ಕೆ ನಾಚಿಕೆಯಾಗಬೇಕು. ಆಕ್ಸಿಜನ್ ಪೂರೈಸಲು ಅಸಮರ್ಥರಾಗಿ 36 ಅಮಾಯಕರ ಜೀವ ತೆಗೆದಿದ್ದಾರೆ. ಲಸಿಕೆ ಪಡೆಯದವರಿಗೆ ಶಿಕ್ಷಿಸಲು ಮುಂದಾಗಿರುವವರು ಮೊದಲು ಆಕ್ಸಿಜನ್, ಲಸಿಕೆ, ಪರೀಕ್ಷೆ ಹಾಗೂ ಮೃತರಿಗೆ ಸೂಕ್ತ ಪರಿಹಾರ ನೀಡದಿದ್ದಕ್ಕೆ ಕ್ಷಮೆ ಕೇಳಲಿ ಎಂದು ಅವರು ಟ್ವಿಟರ್ನಲ್ಲಿ ಹರಿಹಾಯ್ದಿದ್ದಾರೆ
ಕೆಲವು ದಿನಗಳ ಹಿಂದೆ ಚಾಮರಾಜನಗರ ಜಿಲ್ಲಾಧಿಕಾರಿ ವ್ಯಾಕ್ಸಿನೇಷನ್ ಪ್ರಮಾಣ ಪತ್ರ ತೋರಿಸಿದರೆ ಮಾತ್ರ ಪಡಿತರ ವಿತರಣೆ ಮಾಡುವಂತೆ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚನೆ ನೀಡಿದ್ದರು ಇದರ ಜೊತೆಗೆ ವ್ಯಾಕ್ಷಿನ್ ಪ್ರಮಾಣಪತ್ರ ಇದ್ದರೆ ಮಾತ್ರ ಮಾಶಾಸನ ಪಾವತಿ ಮಾಡುವಂತೆ ಎಲ್ಲ ಬ್ಯಾಂಕ್ಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದರು. ಇವರ ಈ ಹೇಳಿಕೆಗೆ ಡಿಕೆ ಶಿವಕುಮಾರ್ ಆಕ್ರೋಶ ವ್ಯೆಕ್ತಪಡಿಸಿದ್ದಾರೆ.