ಚಂಪಾಷಷ್ಠಿ ಹಿನ್ನೆಲೆ: ಕುಕ್ಕೆ ಕ್ಷೇತ್ರಕ್ಕೆ ಅಂತರ್‌ ರಾಜ್ಯ, ಜಿಲ್ಲಾ ಭಕ್ತರಿಗೆ ನಿರ್ಬಂಧ

ದಕ್ಷಿಣ ಕನ್ನಡ, ಡಿ. 15: ನಾಡಿನ ಪ್ರಸಿದ್ದ ದೇವಾಲಯ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ರಥೋತ್ಸವದ ಹಿನ್ನೆಲೆ ಡಿ.17ರಿಂದ ಡಿ.20ರವರೆಗೆ ನಾಲ್ಕು ದಿನ ಎಲ್ಲಾ ಅಂತರ್‌ ರಾಜ್ಯ ಹಾಗೂ ಅಂತರ್‌ ಜಿಲ್ಲಾ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.

ಕೊರೊನಾ ಹಿನ್ನಲೆ ಈ ನಿರ್ದಾರ ಕೈಗೊಳ್ಳಲಾಗಿದ್ದು ಅಂತರ್ ರಾಜ್ಯ ಮತ್ತು ಅಂತರ್ ಜಿಲ್ಲಾ ಪ್ರಯಾಣಿಕರು ಹಾಗೂ ಭಕ್ತಾಧಿಗಳಿಗೆ ನಿರ್ಬಂಧ ಹೇರಿ ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ. ಆದರೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದಲ್ಲಿ ರಥೋತ್ಸವ ಸೇವೆಗಳಿಗೆ ಮುಂಗಡ ನೋಂದಾಯಿಸಿಕೊಂಡಿರುವ ಭಕ್ತಾದಿಗಳಿಗೆ ದೇವಸ್ಥಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಆದೇಶ ಪಾಲಿಸದಿದ್ದರೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ 2020 ಕಲಂ 5(3), 6(1) (2) ರನ್ವಯ ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಲಾಗಿದೆ.

Exit mobile version