Amravati: ಅಮಾನತುಗೊಂಡಿರುವ ಬಿಜೆಪಿ ನಾಯಕಿ (BJP Spokesperson) ನೂಪುರ್ ಶರ್ಮಾ (Nupur Sharma) ಅವರನ್ನು ಬೆಂಬಲಿಸಿ ಸಾಮಾಜಿಕ,
ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ 54 ವರ್ಷದ ಕೆಮಿಸ್ಟ್ ಅನ್ನು ಮಹಾರಾಷ್ಟ್ರದ ಅಮರಾವತಿಯಲ್ಲಿ (Chemist murdered in maharashtra) ಹತ್ಯೆ ಮಾಡಲಾಗಿದೆ.

ಜೂನ್ 21 ರಂದು ಅಮರಾವತಿಯಲ್ಲಿ ಕೆಮಿಸ್ಟ್ ಉಮೇಶ್ ಪ್ರಹ್ಲಾದರಾವ್(Umesh Prahladrao Kolhe) ಅವರನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿದೆ ಎಂದು ಹೇಳಲಾಗುತ್ತಿದೆ.
ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಆಗಿದ್ದ ಕನ್ಹಯ್ಯಾ ಲಾಲ್ ಅವರನ್ನು ಇಬ್ಬರು ದುಷ್ಕರ್ಮಿಗಳು ಕೊಂದರು.
ಉಮೇಶ್ ಪ್ರಹ್ಲಾದರಾವ್ ಕೋಲ್ಹೆ(Chemist murdered) ಅವರ ಹತ್ಯೆಯ ಬಗ್ಗೆ ಸ್ಥಳೀಯ ಬಿಜೆಪಿ ನಾಯಕರು ಪೊಲೀಸರಿಗೆ ಪತ್ರವನ್ನು ಸಲ್ಲಿಸಿದರು, ಸೇಡು ತೀರಿಸಿಕೊಳ್ಳಲು ಮತ್ತು ಅನ್ಯರಿಗೆ ಎಚ್ಚರಿಕೆ ನೀಡಲು ಅವರನ್ನು ಕೊಲ್ಲಲಾಗಿದೆ ಎಂದು ಆರೋಪಿಸಿದ್ದಾರೆ.
ಈ ವಿಷಯವನ್ನು ದೃಢಪಡಿಸಿದ ಪೊಲೀಸರು, ಬಿಜೆಪಿ ನಾಯಕರಿಂದ ಹತ್ಯೆ ಕುರಿತಂತೆ ಒಂದಿಷ್ಟು ಪತ್ರಗಳನ್ನು ಸ್ವೀಕರಿಸಿದ್ದೇವೆ ಮತ್ತು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್(FIR) ದಾಖಲಾಗಿದ್ದು, ಆರು ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲ್ಹೆ ಅವರು ಅಮರಾವತಿ ನಗರದ(Chemist murdered in maharashtra) ಮೆಡಿಕಲ್ ಸ್ಟೋರ್ ನಡೆಸುತ್ತಿದ್ದರು. ನೂಪುರ್ ಶರ್ಮಾ ಅವರ ಹೇಳಿಕೆಗಳನ್ನು ಕೆಲವು ವಾಟ್ಸಾಪ್ ಗ್ರೂಪ್ಗಳಲ್ಲಿ ಪೋಸ್ಟ್ ಹಂಚಿಕೊಂಡಿದ್ದರು ಎಂದು ಹೇಳಲಾಗಿದೆ.
https://vijayatimes.com/high-alert-around-coastal-side/
ತಮ್ಮ ಗ್ರಾಹಕರು ಸೇರಿದಂತೆ ಕೆಲವು ಮುಸ್ಲಿಮರು ಸಹ ಸದಸ್ಯರಾಗಿರುವ ವಾಟ್ಸಾಪ್ ಗುಂಪಿನಲ್ಲಿ ಪೋಸ್ಟ್ ಅನ್ನು ತಪ್ಪಾಗಿ ಹಂಚಿಕೊಂಡಿದ್ದಾರೆ ಎಂದು ಸಿಟಿ ಕೊತ್ವಾಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಪಿಟಿಐಗೆ ಮಾಹಿತಿ ನೀಡಿದ್ದಾರೆ.
NIA ತಂಡವು ಅಮರಾವತಿಯನ್ನು ತಲುಪಿದ್ದು, ತನಿಖೆಯನ್ನು ವಹಿಸಿಕೊಳ್ಳಲಿದೆ.
ತಂಡವು ವಿಷಯವನ್ನು ಪರಿಶೀಲಿಸುತ್ತಿದೆ ಮತ್ತು ಮಹಾರಾಷ್ಟ್ರ ಪೊಲೀಸರಿಂದ ಹೆಚ್ಚುವರಿ ವಿವರಗಳನ್ನು ಪಡೆಯುತ್ತಿದೆ.
ಅಮರಾವತಿಯಲ್ಲಿ ಉಮೇಶ್ ಕೋಲ್ಹೆ ಬರ್ಬರ ಹತ್ಯೆಗೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಎಂಎಚ್ಎ ಎನ್ಐಎಗೆ ಹಸ್ತಾಂತರಿಸಿದೆ.