ಚಿನ್ನಸ್ವಾಮಿ ಸ್ಷೇಡಿಯಂ ಸ್ಪೋಟದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು  ನ 26 : 2010 ಐಪಿಎಲ್​ ಪಂದ್ಯಾವಳಿ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಬಾಂಬ್​ ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಪ್ಪೊಪ್ಪಿಕೊಂಡಿದ್ದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಬೆಂಗಳೂರಿನ ವಿಶೇಷ ಕೋರ್ಟ್ ನ್ಯಾಯಾಧೀಶ ಕಸನಪ್ಪ ನಾಯ್ಕ್ ಈ ತೀರ್ಪು ನೀಡಿದ್ದಾರೆ. ಈ ಹಿಂದೆ ಆರೋಪಿಗಳಿಗೆ 8 ವರ್ಷ ಜೈಲು, 4 ಲಕ್ಷ ದಂಡ ವಿಧಿಸಲಾಗಿತ್ತು. ಬಳಿಕ ಹೈಕೋರ್ಟ್ ಶಿಕ್ಷೆ ಮರುಪರಿಶೀಲನೆಗೆ ಸೂಚಿಸಿತ್ತು. ಅದರಂತೆ ಮರುಪರಿಶೀಲನೆ ನಡೆಸಿದ ಬೆಂಗಳೂರಿನ ವಿಶೇಷ ನ್ಯಾಯಾಲಯ, ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ವಿಶೇಷ ಅಭಿಯೋಜಕರಾಗಿ ರವೀಂದ್ರ ವಾದ ಮಂಡಿಸಿದ್ದರು.

Exit mobile version