ತುಮಕೂರು, ಅ. 17: ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗದ ಹಂಗರಹಳ್ಳಿಯ ಶ್ರೀ ವಿದ್ಯಾ ಚೌಡೇಶ್ವರಿ ಮಹಾಸಂಸ್ಥಾನ ಶ್ರೀಮಠದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಶಿವಕುಮಾರ್ ಅವರು ಇಂದು ಪೂಜೆ ನೆರವೇರಿಸಿದರು.
ಕುಣಿಗಲ್ ಶಾಸಕ ಡಾ. ರಂಗನಾಥ್, ಅವರ ಪತ್ನಿ ಡಾ. ಸುಮಾ ರಂಗನಾಥ್ ಹಾಗೂ ಶ್ರೀಮಠದ ಶ್ರೀ ಬಾಲಮಂಜುನಾಥ ಸ್ವಾಮೀಜಿಗಳು ಈ ಪೂಜಾ ಕೈಂಕರ್ಯದಲ್ಲಿ ಪಾಲ್ಗೊಂಡಿದ್ದರು.