ಜುಲೈ 20 ಪ್ರತಿಭಟನೆ ಕೇವಲ (CJP warns massive protest in Delhi) ಆರಂಭ; ಸರ್ಕಾರಕ್ಕೆ CJP ಕಠಿಣ ಎಚ್ಚರಿಕೆ
ಪೊಲೀಸ್ ತನಿಖೆ, ಬಿಗಿ ಭದ್ರತೆ ನಡುವೆಯೂ ವಿದ್ಯಾರ್ಥಿಗಳ ಹೋರಾಟ ಮುಂದುವರಿಯಲಿದೆ ಎಂದು CJP ಸ್ಪಷ್ಟನೆ
NEET ಅಕ್ರಮ ಪ್ರಕರಣದಲ್ಲಿ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ವಿದ್ಯಾರ್ಥಿಗಳ ಘೋಷಣೆ
New delhi : ಜುಲೈ 20ರಂದು ನಡೆದ ಪ್ರತಿಭಟನೆ ಕೇವಲ ಆರಂಭ ಮಾತ್ರವಾಗಿದ್ದು, ಕೇಂದ್ರ ಸರ್ಕಾರ (CJP warns massive protest in Delhi) ವಿದ್ಯಾರ್ಥಿಗಳ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಲಕ್ಷಾಂತರ ಯುವಕರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಐತಿಹಾಸಿಕ ಹೋರಾಟ ನಡೆಸಲಿದ್ದಾರೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಎಚ್ಚರಿಕೆ ನೀಡಿದೆ.
ಪಕ್ಷದ ರಾಷ್ಟ್ರೀಯ ವಕ್ತಾರ ಅಶುತೋಷ್ ರಾಂಕಾ ಈ ಕುರಿತು ಪ್ರತಿಕ್ರಿಯಿಸಿ, ವಿದ್ಯಾರ್ಥಿಗಳ ಧ್ವನಿಯನ್ನು ನಿರ್ಲಕ್ಷಿಸುವ ಬದಲು ಸರ್ಕಾರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯಬೇಕು ಎಂದು ಆಗ್ರಹಿಸಿದರು.

ಜುಲೈ 20ರಂದು ನಡೆದ “ಸಂಸದ್ ಚಲೋ” ಪ್ರತಿಭಟನೆ ದೇಶಾದ್ಯಂತ ಗಮನ ಸೆಳೆದಿದ್ದು, ಮುಂದಿನ ಹೋರಾಟ ಇನ್ನಷ್ಟು ವ್ಯಾಪಕವಾಗಲಿದೆ ಎಂದು ಅವರು ಹೇಳಿದರು.
NEET-UG ಪರೀಕ್ಷೆಯಲ್ಲಿನ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪಗಳನ್ನು ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆ ಜಾರಿಯಾಗಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ
ಬೇಡಿಕೆಯಾಗಿದೆ. ತನಿಖಾ ಸಂಸ್ಥೆಗಳು ವಿವಿಧ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದರೂ ನ್ಯಾಯ ಸಿಗುವವರೆಗೆ ಹೋರಾಟವನ್ನು ಕೈಬಿಡುವುದಿಲ್ಲ ಎಂದು ವಿದ್ಯಾರ್ಥಿ
ಸಂಘಟನೆಗಳು ಸ್ಪಷ್ಟಪಡಿಸಿವೆ. ಸರ್ಕಾರದ ವಿರುದ್ಧ ದೇಶದ ಯುವಜನತೆ ಒಗ್ಗಟ್ಟಿನಿಂದ ಧ್ವನಿ ಎತ್ತುತ್ತಿದೆ ಎಂದು CJP ನಾಯಕರು ತಿಳಿಸಿದ್ದಾರೆ.
ಈ ಬೆಳವಣಿಗೆಯ ನಡುವೆಯೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತೆಯನ್ನು (CJP warns massive protest in Delhi) ಮತ್ತಷ್ಟು ಬಿಗಿಗೊಳಿಸಲಾಗಿದೆ. ಸಂಸತ್ ಭವನ,
ಜಂತರ್ ಮಂತರ್ (Jantar Mantar) , ರಫಿ ಮಾರ್ಗ್ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆ ಹಾಗೂ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಬ್ಯಾರಿಕೇಡ್ಗಳನ್ನು ಅಳವಡಿಸಿ, ಪ್ರತಿಭಟನೆ ನಡೆಯುವ ಸ್ಥಳಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ.
ಜುಲೈ 20ರ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಸಂಬಂಧ ಈಗಾಗಲೇ ಹಲವು ಎಫ್ಐಆರ್ಗಳು ದಾಖಲಾಗಿದ್ದು, ಘಟನೆಯ ಹಿಂದೆ ಯಾವುದೇ ಸಂಘಟಿತ ಸಂಚು ಇದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪ್ರತಿಭಟನೆಯ ವೇಳೆ ರ್ಯಾಪಿಡ್ ಆಕ್ಷನ್ ಫೋರ್ಸ್ (RAF) ಯೋಧನ ಮೇಲೆ ಹಲ್ಲೆ ನಡೆಸಿದ ಆರೋಪವೂ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ
ವಿಡಿಯೊ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಗುರುತಿಸುವ ಕಾರ್ಯ ಮುಂದುವರಿದಿದೆ.
ಇದೇ ವೇಳೆ ಕಾಂಗ್ರೆಸ್, ಸಮಾಜವಾದಿ ಪಕ್ಷ ಸೇರಿದಂತೆ ಹಲವು ಪ್ರತಿಪಕ್ಷಗಳು ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮವನ್ನು ಖಂಡಿಸಿ ವಿವಿಧ ರಾಜ್ಯಗಳಲ್ಲಿ ಪ್ರತಿಭಟನೆ ನಡೆಸಿವೆ.
ಸಂಸತ್ ಕಲಾಪದ ವೇಳೆ ಪ್ರತಿಪಕ್ಷ ಸಂಸದರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸುವ ಸಾಧ್ಯತೆಯಿದೆ.
ಇನ್ನೊಂದೆಡೆ, ನೀಟ್ ಪರೀಕ್ಷೆಯ ಅಕ್ರಮಗಳ ಕುರಿತು ಸಂಸತ್ನಲ್ಲಿ ಚರ್ಚೆ ನಡೆಸುವಂತೆ ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ. ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ,
ಪರೀಕ್ಷಾ ಪ್ರಕ್ರಿಯೆಯಲ್ಲಿ ಸುಧಾರಣೆ ಹಾಗೂ ವಿದ್ಯಾರ್ಥಿಗಳ ಭವಿಷ್ಯ ರಕ್ಷಣೆಗಾಗಿ ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಡ ಹೆಚ್ಚುತ್ತಿದೆ.
ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ (Sonam Wangchuk) ಅವರನ್ನು ದೆಹಲಿ ಹೈಕೋರ್ಟ್ ನಿರ್ದೇಶನದ ಮೇರೆಗೆ ಆಸ್ಪತ್ರೆಗೆ
ದಾಖಲಿಸಲಾಗಿದ್ದು, ಹಲವು ರಾಜಕೀಯ ನಾಯಕರು ಅವರ ಆರೋಗ್ಯ ವಿಚಾರಿಸಿದ್ದಾರೆ. ದೇಶದಲ್ಲಿ ಶಿಕ್ಷಣ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳ ಹಕ್ಕುಗಳ ಕುರಿತು ನಡೆಯುತ್ತಿರುವ ಚರ್ಚೆ
ಮತ್ತಷ್ಟು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ರಾಜಕೀಯ ಹಾಗೂ ಸಾಮಾಜಿಕ ಬೆಳವಣಿಗೆಗಳು ಹೆಚ್ಚಿನ ಮಹತ್ವ ಪಡೆಯುವ ಸಾಧ್ಯತೆ ಇದೆ.
ಇದನ್ನು ಓದಿ : https://vijayatimes.com/order-to-fill-vacant-posts-taluk-hospitals/