ಬೆಂಗಳೂರು, ನ. 28: ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್ ಸಂತೋಷ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಡಾಲರ್ಸ್ ಕಾಲೊನಿಯ ನಿವಾಸದಲ್ಲಿ ಶುಕ್ರವಾರ ಸಂಜೆ ಸಂತೋಷ್ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣವೇ ಅವರ ಕುಟುಂಬದವರನ್ನು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂಲಗಳ ಪ್ರಕಾರ, ಸಂತೋಷ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಸಂತೋಷ್ ಆತ್ಮಹತ್ಯೆ ಯತ್ನಿಸಿ, ಆಸ್ಪತ್ರೆಗೆ ದಾಖಲಾದ ವಿಷಯ ತಿಳಿದು, ಸಿಎಂ ಯಡಿಯೂರಪ್ಪ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು. ಈ ವೇಳೆ ಮಾತನಾಡಿದ ಅವರು, ಶುಕ್ರವಾರ ಬೆಳಗ್ಗೆ ಸಂತೋಷ್ ಅವರನ್ನು ಭೇಟಿ ಮಾಡಿದ್ದು, ಇಬ್ಬರೂ ಕೂಡಾ ವಾಯುವಿಹಾರ ಮಾಡಿದ್ದೆವು. ಆದರೆ ಅವರು ಆತ್ಮಹತ್ಯೆಗೆ ಯತ್ನಿಸಲು ಕಾರಣವೇನೆಂದು ತಿಳಿದಿಲ್ಲ. ಅವರು ಕೂಡಲೇ ಚೇತರಿಸಿಕೊಳ್ಳಲಿ ಎಂದರು.