ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರ ಸ್ವರೂಪದಲ್ಲಿ ಏರಿಕೆಯಾಗುತ್ತಿದೆ. ಇದರ ನಡುವೆ ಒಂದು ವಾರದ ಸಂಪೂರ್ಣ ಲಾಕ್ಡೌನ್ ನಾಳೆಗೆ ಮುಕ್ತಾಯವಾಗಲಿದ್ದು, ಈ ಕುರಿತು ಮಂಗಳವಾರ ಸಂಜೆ 4 ಗಂಟೆಗೆ ಮುಖ್ಯಮಂತ್ರಿ
ಬಿಎಸ್ ಯಡಿಯೂರಪ್ಪ ರಾಜ್ಯ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿಗೊಳಿಸುವುದಿಲ್ಲ ಎಂದು ಈಗಾಗಲೇ ಬಿಎಸ್ವೈ ಸ್ಪಷ್ಟಪಡಿಸಿದ್ದಾರೆ. ಆದರೆ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚುತ್ತಲೇ ಸಾಗುತ್ತಿದೆ. ಈ ಆತಂಕವನ್ನು ತಡೆಗಟ್ಟಲು ಕೈಗೊಳ್ಳಬೇಕಾಗಿರುವ ಮುಂದಿನ ಕ್ರಮಗಳ ಕುರಿತಾಗಿ ಮಂಗಳವಾರ ಬೆಳಗ್ಗೆ ಸಿಎಂ ನೇತೃತ್ವದಲ್ಲಿ ಟಾಸ್ಕ್ಫೋರ್ಸ್ ಸಭೆ ನಡೆದಿದೆ. ಸಭೆಯಲ್ಲಿ ಮುಂದಿನ ನಿರ್ಧಾರಗಳ ಕುರಿತಾಗಿ ಮಹತ್ವದ ಚರ್ಚೆಗಳು ನಡೆದಿವೆ.
ಈ ಸಭೆಯ ನಿರ್ಧಾರ ಹಾಗು ಮುಂದಿನ ನಿರ್ಧಾರಗಳ ಕುರಿತು ಸಂಜೆ ಐದು ಗಂಟೆಗೆ ಬಿಎಸ್ ಯಡಿಯೂರಪ್ಪ ರಾಜ್ಯದ ಜನರನ್ನು ಉದ್ದೇಶಿಸಿ ಯೂಟ್ಯೂಬ್ ಮತ್ತು ಫೇಸ್ ಬುಕ್ ಲೈವ್ ಭಾಷಣ ಮಾಡಲಿದ್ದಾರೆ ಎಂದು ಸಿಎಂ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.