Bihar: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ವಿಧಾನಸಭೆಯಲ್ಲಿ ಭಾಣಷ ಮಾಡುವಾಗ (CM Nitish Kumar Viral Statement) ಜನಸಂಖ್ಯೆ ನಿಯಂತ್ರಣ ಕುರಿತು ಅಶ್ಲೀಲ
ಹೇಳಿಕೆ ನೀಡಿದ್ದು, ವಿವಾದಕ್ಕೆ ಸಿಲುಕಿದ್ದಾರೆ. ಮಹಿಳಾ ಶಾಸಕರು ಮುಜುಗರ ಅನುಭವಿಸುವಂತಾಯಿತು. ಈ ಕುರಿತು ನಿತೀಶ್ ಕುಮಾರ್ (Nitish Kumar) ಕ್ಷಮೆಯಾಚಿಸಿದ್ದಾರೆ.
ಲೈಂಗಿಕ ಸಂಭೋಗದ ಸಮಯದಲ್ಲಿ ವಿದ್ಯಾವಂತ ಮಹಿಳೆ ತನ್ನ ಪತಿಯನ್ನು ಹೇಗೆ ತಡೆಯಬಹುದು ಎಂಬ ವಿವರಣೆ ನೀಡಿದ್ದರು. ಮಹಿಳೆಯರ ಬಗ್ಗೆ ನಿತೀಶ್ ಕುಮಾರ್ ಹೇಳಿಕೆಗೆ ರಾಷ್ಟ್ರೀಯ ಮಹಿಳಾ
ಆಯೋಗ (ಎನ್ಸಿಡಬ್ಲ್ಯೂ) ಆಕ್ರೋಶ ವ್ಯಕ್ತಪಡಿಸಿದೆ. ನಿತೀಶ್ ಕುಮಾರ್ ಕೂಡಲೇ ಕ್ಷಮೆಯಾಚಿಸಬೇಕು ಎಂದು ಎನ್ಸಿಡಬ್ಲ್ಯೂ (NCW) ಮುಖ್ಯಸ್ಥೆ ರೇಖಾ ಶರ್ಮಾ (Rekha Sharma) ಒತ್ತಾಯಿಸಿದ್ದಾರೆ.
ನಿತೀಶ್ ಕುಮಾರ್ ಅವರು ವಿಧಾನಸಭೆಯಲ್ಲಿ ಆಡಿರುವ ಅಸಭ್ಯ ಮಾತುಗಳಿಂದ ಪ್ರತಿಯೊಬ್ಬ ಮಹಿಳೆಯ ಘನತೆ ಹಾಗೂ ಗೌರವಕ್ಕೆ ಧಕ್ಕೆಯುಂಟಾಗಿದ್ದು, ಅವರ ಭಾಷಣದಲ್ಲಿ ಬಳಸಲಾದ ಭಾಷೆಯು
ಸಮಾಜಕ್ಕೆ ಕಪ್ಪುಚುಕ್ಕೆಯಾಗಿದೆ. ನಾವು ಅಂತಹ ನಡವಳಿಕೆ ವಿರುದ್ಧ ಬಲವಾಗಿ ನಿಲ್ಲುತ್ತೇವೆ (CM Nitish Kumar Viral Statement) ಎಂದು ರೇಖಾ ತಿಳಿಸಿದ್ದಾರೆ.
ಸರ್ಕಾರ ನಡೆಸಿದ ಇತ್ತೀಚಿನ ಜಾತಿ ಗಣತಿಯ ಡೇಟಾವನ್ನು (Data) ಅವರು ಪ್ರಸ್ತುತಪಡಿಸುತ್ತಿದ್ದರು. ಸೋಷಿಯಲ್ ಮೀಡಿಯಾ (Social Media) ಬಳಕೆದಾರರು ಸಿಎಂ ನಿತೀಶ್ ಕುಮಾರ್ ಮಹಿಳೆಯರ
ಬಗ್ಗೆ ಮಾಡಿದ ಕಮೆಂಟ್ಗಳನ್ನು ತಪ್ಪು ಎಂದು ಬಿಜೆಪಿ (BJP) ಹೇಳಿದ್ದು, ಬಿಹಾರ ಮುಖ್ಯಮಂತ್ರಿಯನ್ನು ಟೀಕಿಸಿರುವ ಬಿಜೆಪಿಯ ಬಿಹಾರ ಘಟಕವು ಅವರನ್ನು ಭಾರತದ ರಾಜಕೀಯ ಇತಿಹಾಸದಲ್ಲಿ
ಅತ್ಯಂತ ಅಸಭ್ಯ ರಾಜಕಾರಣಿ ಎಂದು ಕರೆಯಲಾಗಿದೆ.
ಮುಖ್ಯಮಂತ್ರಿ ಇನ್ನು ಮುಂದೆ ಸುಸಂಸ್ಕೃತ ಸಮಾಜವನ್ನು ಪ್ರತಿನಿಧಿಸಲು ಯೋಗ್ಯರಲ್ಲ ಎಂದು ಹೇಳಿದರು. ನಿತೀಶ್ ಕುಮಾರ್ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರ ಎಂದು ಸಚಿವ ಗಿರಿರಾಜ್
ಸಿಂಗ್ (Giriraj Singh) ಹೇಳಿದ್ದಾರೆ. ಸಿಎಂ ಹೇಳಿಕೆ ಲೈಂಗಿಕ ಶಿಕ್ಷಣಕ್ಕೆ ಸಂಬಂಧಿಸಿದ್ದು. ಲೈಂಗಿಕ ಶಿಕ್ಷಣದ ವಿಷಯ ಚರ್ಚೆಯಾದಾಗಲೆಲ್ಲಾ ಜನರು ಹಿಂಜರಿಯುತ್ತಾರೆ.
ಇದನ್ನು ಈಗ ಶಾಲೆಗಳಲ್ಲಿ ಕಲಿಸಲಾಗುತ್ತದೆ. ಶಾಲೆಗಳಲ್ಲಿ ವಿಜ್ಞಾನ ಮತ್ತು ಜೀವಶಾಸ್ತ್ರವನ್ನು ಕಲಿಸಲಾಗುತ್ತದೆ. ಮಕ್ಕಳು ಅದನ್ನು ಕಲಿಯುತ್ತಾರೆ. ಜನಸಂಖ್ಯೆಯ ಹೆಚ್ಚಳವನ್ನು ತಡೆಯಲು ಪ್ರಾಯೋಗಿಕವಾಗಿ
ಏನು ಮಾಡಬೇಕು ಎಂಬುದನ್ನು ಹೇಳಿದ್ದಾರೆ ಎಂದು ತೇಜಸ್ವಿ ಯಾದವ್ ಸಮರ್ಥಿಸಿಕೊಂಡಿದ್ದಾರೆ.
ಇದನ್ನು ಓದಿ: ವಿಶ್ವಕಪ್ನಿಂದ ಬಾಂಗ್ಲಾದೇಶ ನಾಯಕ ಶಕೀಬ್ ಅಲ್ ಹಸನ್ ಹೊರಗೆ
- ಭವ್ಯಶ್ರೀ ಆರ್ ಜೆ