Bengaluru: ಪೆಟ್ರೋಲ್ ಮತ್ತು ಡೀಸೆಲ್ (Petrol-Diesel) ಬೆಲೆಗಳು ಏರಿಕೆಯಾದ ನಂತರ ರಾಜ್ಯದ ಸಾರಿಗೆ ಬಸ್ ಟಿಕೆಟ್ ದರದಲ್ಲೂ ಏರಿಕೆಯಾಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಟಿಕೆಟ್ ದರ ಹೆಚ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ ಸದ್ಯ ಟಿಕೆಟ್ ದರವನ್ನು ಹೆಚ್ಚಿಸುವುದಿಲ್ಲ ಎಂದಿದ್ದಾರೆ. ಈ ಮೂಲಕ ಆತಂಕದಲ್ಲಿದ್ದ ಬಸ್ ಪ್ರಯಾಣಿಕರು ಸದ್ಯ ನಿರಾಳವಾಗಿದ್ದಾರೆ.
![Petrol-Diesel](https://sp-ao.shortpixel.ai/client/to_webp,q_glossy,ret_img,w_1024,h_680/https://vijayatimes.com/wp-content/uploads/2024/05/petrol-4-1024x680.webp)
ಬೆಂಗಳೂರಿನಲ್ಲಿ (Bengaluru) ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಶೇಕಡಾ 40ರಷ್ಚು ಟಿಕೆಟ್ ದರವನ್ನು ಹೆಚ್ಚಿಸದಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಸದ್ಯಕ್ಕೆ ಯಾವುದೇ ಸಾರಿಗೆ ನಿಗಮದ ಟಿಕೆಟ್ (Ticket) ದರದಲ್ಲಿ ಏರಿಕೆ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯು ಟಿಕೆಟ್ ದರ ಹೆಚ್ಚಳ ಮಾಡಬೇಕೆಂದು ರಾಜ್ಯ ಸರ್ಕಾರದ ಮುಂದೆ ಪ್ರಸ್ತಾಪವಿಟ್ಟಿತ್ತು. ಡೀಸೆಲ್ ಮತ್ತು ವಾಹನ ಬಿಡಿಭಾಗಗಳ ವೆಚ್ಚ ಸೇರಿದಂತೆ ಎಲ್ಲವುದ ಬೆಲೆ ಹೆಚ್ಚಳವಾಗಿದೆ. ಆದರೆ ಬಸ್ ಟಿಕೆಟ್ ದರ 4 ವರ್ಷದಿಂದಲೂ ಪರಿಷ್ಕರಣೆ ಆಗಿಲ್ಲ. ಹೀಗಾಗಿಯೇ ರಾಜ್ಯದ ಸಾರಿಗೆ ಸಂಸ್ಥೆಯು ನಷ್ಟದಲ್ಲಿದೆ. ನಷ್ಟ ಸರಿದುಗಿಸಲು ಟಿಕೆಟ್ ದರ ಪರಿಷ್ಕರಣೆ ಅನಿವಾರ್ಯ ಎಂದು ತನ್ನ ಹೇಳಿತ್ತು.
ಶಕ್ತಿ ಯೋಜನೆ ಎಫೆಕ್ಟ್ : ಕಾಂಗ್ರೆಸ್ (Congress) ಸರ್ಕಾರದ ಶಕ್ತಿ ಯೋಜನೆಯಡಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಇದರಿಂದಾಗಿಯೂ ಸಾರಿಗೆ ಸಂಸ್ಥೆಗಳು ನಿರೀಕ್ಷಿತ ಆದಾಯ ಗಳಿಸದೇ, ನಷ್ಟದಲ್ಲಿವೆ. ಈ ಮಧ್ಯೆ ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆ 3 ರೂಪಾಯಿ ಮತ್ತು ಡೀಸೆಲ್ ಬೆಲೆಯಲ್ಲಿ 3.50 ರೂಪಾಯಿ ಏರಿಕೆ ಮಾಡಿದ್ದು, ಸಾರಿಗೆ ಸಂಸ್ಥೆಗಳನ್ನು ಮತ್ತಷ್ಟು ಸಂಕಷ್ಟಕ್ಕೆ ತದ್ದೊಡ್ಡಿದೆ.