ಮುಸಲ್ಮಾನರಿಗೆ ಮೀಸಲಾತಿಯನ್ನು ಕಳೆದ 30 ವರ್ಷಗಳಿಂದ ನೀಡಲಾಗುತ್ತಿದೆ. ದಲಿತರಿಗೆ, ಹಿಂದುಳಿದವರಿಗೆ (CM Siddaramaiah News) ನೀಡಲಾದ ಮೀಸಲಾತಿಯನ್ನು ರದ್ದುಪಡಿಸಿ
ಮುಸಲ್ಮಾನರಿಗೆ ಕಾಂಗ್ರೆಸ್ ನೀಡಲಿದೆ ಎಂದು ಪ್ರಧಾನಿ ಮೋದಿ ಅವರು ನಿರಂತರವಾಗಿ ಸುಳ್ಳು ಹೇಳುತ್ತಾ ಓಡಾಡುತ್ತಿದ್ದಾರೆ. ಈ ಸುಳ್ಳನ್ನು ನಂಬಬಾರದು ಎಂದು ಮನವಿ ಮಾಡುತ್ತೇನೆ ಎಂದು
ಸಿದ್ದರಾಮಯ್ಯ (Siddaramaiah) (CM Siddaramaiah News) ಹೇಳಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು, ನರೇಂದ್ರ ಮೋದಿ (Narendra Modi) ಯವರ ಬಳಿ ಹಣ ಜಾಸ್ತಿ ಇದ್ದರೆ, ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 30 ಲಕ್ಷ ಹುದ್ದೆಗಳನ್ನು ತುಂಬಲು ಏನು
ಅಡ್ಡಿಯಾಗಿತ್ತು? ಅದನ್ನು ತುಂಬಿದ್ದರೆ ಸುಮಾರು 50% ಹಿಂದುಳಿದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಕೆಲಸ ದೊರಕುತ್ತಿತ್ತು. ಇನ್ನುಳಿದ 50% ಇತರರಿಗೆ ದೊರಕುತ್ತಿತ್ತು.
ಈ ಖಾಲಿ ಹುದ್ದೆಗಳನ್ನು ಏಕೆ ತುಂಬಿಲ್ಲ?ರಾಜ್ಯ ಸರ್ಕಾರದ ಬಳಿ ಸಂಬಳ ಕೊಡಲು ದುಡ್ಡಿಲ್ಲದೇ ಹೋಗಿದ್ದರೆ 8 ತಿಂಗಳಲ್ಲಿ 5 ಗ್ಯಾರಂಟಿಗಳನ್ನು (Guarantee) ಜಾರಿ ಮಾಡಲು ಸಾಧ್ಯವಾಗುತ್ತಿತ್ತೇ? ವೇತನ
ದೊರಕಿಲ್ಲ ಎಂದು ಸರ್ಕಾರಿ ನೌಕರರು ಹೇಳಿದ್ದಾರೆಯೇ? ಮೋದಿ ಅವರು ದೇಶದ ಪ್ರಧಾನಿಯಾಗಿ ಬರೀ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಇವರ ಸುಳ್ಳುಗಳನ್ನು ದೇಶದ ಜನ ಇನ್ನೂ ಎಷ್ಟು ವರ್ಷ ನಂಬಬೇಕು?
ಎಂದು ಪ್ರಶ್ನಿಸಿದ್ದಾರೆ.
ಇನ್ನೊಂದು ಪೋಸ್ಟ್ನಲ್ಲಿ, ನರೇಂದ್ರ ಮೋದಿಯವರ ರಾಜಕೀಯ ಅಂತ್ಯ ಕಾಲವಿದು. 2014 ರಲ್ಲಿ ಅನೇಕ ಭರವಸೆಗಳನ್ನು ನೀಡಿದರು. ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂಪಾಯಿ ಹಾಕುವುದಾಗಿ
ಹೇಳಿದರು, ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುಸಾಗಿ ಹೇಳಿ ನಾಮ ಹಾಕಿದರು. ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ, ಅಗತ್ಯ ವಸ್ತುಗಳ ಬೆಲೆ ಇಳಿಸುವುದಾಗಿ, ರೂಪಾಯಿ ಬೆಲೆ ಹೆಚ್ಚು ಮಾಡುವುದಾಗಿ
ಮಾತು ಕೊಟ್ಟಿದ್ದರು. ಮೋದಿಯವರ ಭಾಷಣದಲ್ಲಿದ್ದ ಅಚ್ಚೇ ದಿನ್ ಭಾರತಕ್ಕೆ ಬರಲೇ ಇಲ್ಲ. ಒಂದೇ ಒಂದು ಭರವಸೆಯೂ ಈಡೇರಲಿಲ್ಲ.ಪ್ರಧಾನಿ ಮೋದಿ ಅವರ ಆಡಳಿತದ ಹತ್ತು ವರ್ಷಗಳಲ್ಲಿ ಜನರ ಭಾವನೆಗಳನ್ನು
ಕೆರಳಿಸಿ ಜಾತಿ, ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ ನಡೆದಿದೆ ಎಂದು ಟೀಕಿಸಿದ್ದಾರೆ.
ಭಾರತೀಯರನ್ನು ಹಿಂದೂ, ಮುಸಲ್ಮಾನರು, ಕ್ರಿಶ್ಚಿಯನ್ನರ (Muslim, Cristian) ಹೆಸರಿನಲ್ಲಿ ವಿಭಜಿಸಿ ಬೆಂಕಿ ಹಚ್ಚುವ ಬಿಜೆಪಿ ಕೃತ್ಯದ ವಿರುದ್ಧ, ಸಮಾಜವನ್ನು ಮಾನವೀಯವಾಗಿ ಬೆಸೆಯುವ ಕೆಲಸಕ್ಕೆ ರಾಹುಲ್
ಗಾಂಧಿ ಅವರು ಮುಂದಾದರು. ದೇಶದ ಐಕ್ಯತೆ ಮರು ಸ್ಥಾಪಿಸಲು, ಸಾರ್ವಭೌತ್ವವನ್ನು ಕಾಪಾಡಲು ರಾಹುಲ್ ಗಾಂಧಿ (Rahul Gandhi) ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ, ಮಣಿಪುರದಿಂದ
ಮುಂಬೈವರೆಗೆ ಪಾದಯಾತ್ರೆ ಮಾಡಿದರು. ಭಾರತ್ ಜೋಡೋ ಹೆಸರಿನಲ್ಲಿ ದೇಶದ ಜನರನ್ನು ಪ್ರೀತಿ – ವಿಶ್ವಾಸದಿಂದ ಒಗ್ಗೂಡಿಸುವ ಪ್ರಯತ್ನ ಮಾಡಿದರು.
ಮೀಸಲಾತಿ ಪರವಾಗಿರುವ ಏಕೈಕ ಪಕ್ಷವೆಂದರೆ ಕಾಂಗ್ರೆಸ್ (Congress) ಪಕ್ಷ. ಬಿಜೆಪಿಯವರು ಎಲ್ಲ ಕಾಲದಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಮೀಸಲಾತಿಯ ವಿರೋಧವಾಗಿ ಕೆಲಸ ಮಾಡಿದ್ದಾರೆ.
ಗ್ರಾಮ ಪಂಚಾಯತಿ, ನಗರಸಭೆ ಸೇರಿದಂತೆ ವಿವಿಧ ಸ್ತರಗಳಲ್ಲಿ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿ ನೀಡುವುದನ್ನು ಬಿಜೆಪಿ ಅವರು ವಿರೋಧಿಸಿದ್ದರು. ಬಿಜೆಪಿಯ (BJP) ರಾಮ ಜೋಯಿಸ್ ಅವರು
ಈ ಮೀಸಲಾತಿ ನೀಡಿಕೆಯನ್ನು ಸಂವಿಧಾನ ಬಾಹಿರ ಎಂದು ನ್ಯಾಯಾಲಯದಲ್ಕೇ ವಾದಿಸಿದ್ದರು ಎಂದಿದ್ದಾರೆ.
ಇದನ್ನು ಓದಿ; ನಮ್ಮನ್ನು ಕೆಣಕಿದ್ದೀರಿ ಅಷ್ಟು ಸುಲಭಕ್ಕೆ ಬಿಡುವ ಮಾತಿಲ್ಲ ಎಂದು ಖಡಕ್ ವಾರ್ನಿಂಗ್ ನೀಡಿದ ಕುಮಾರಸ್ವಾಮಿ