• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸಿಎಂ ಯೋಗಿಯನ್ನು ಭೇಟಿ ಮಾಡಿದ ನಟ ಅಕ್ಷಯ್ ಕುಮಾರ್

Sharadhi by Sharadhi
in ದೇಶ-ವಿದೇಶ, ರಾಜಕೀಯ
ಸಿಎಂ ಯೋಗಿಯನ್ನು ಭೇಟಿ ಮಾಡಿದ ನಟ ಅಕ್ಷಯ್ ಕುಮಾರ್
0
SHARES
0
VIEWS
Share on FacebookShare on Twitter

ಲಖನೌ, ಡಿ. 2: ಬಾಲಿವುಡ್‌ನ ಖ್ಯಾತ ನಟ ಅಕ್ಷಯ್‌ಕುಮಾರ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ​ ನಿನ್ನೆ ಭೇಟಿಯಾಗಿದ್ದಾರೆ. ಅಧಿಕೃತ ಕಾರ್ಯದ ನಿಮಿತ್ತ ಮುಂಬೈಗೆ ಬಂದಿರುವ ಯೋಗಿ ಅದಿತ್ಯನಾಥ್, ಮುಂಬೈನ ಖಾಸಗಿ ಹೋಟೆಲ್‌ವೊಂದರಲ್ಲಿ ಉಳಿದುಕೊಂಡಿದ್ದಾರೆ. ಅಲ್ಲಿಗೆ ಅಕ್ಷಯ್​ಕುಮಾರ್​ ತೆರಳಿ ಮಾತುಕತೆ ನಡೆಸಿದ್ದಾರೆ.

ಯೋಗಿ ಆದಿತ್ಯನಾಥ ಅವರು ಬಾಲಿವುಡ್ಡನ್ನು ಮುಂಬೈಯಿಂದ ಉತ್ತರಪ್ರದೇಶಕ್ಕೆ ಶಿಫ್ಟ್​ ಮಾಡುವ  ಯೋಜನೆ ನಡೆಸಿರುವುದಾಗಿ ಕಾಂಗ್ರೆಸ್​ ಆರೋಪಿಸುತ್ತಿರುವ ಬೆನ್ನಲ್ಲೇ ಇದೀಗ ಈ ಭೇಟಿ ಭಾರಿ ಚರ್ಚೆಗೆ ಗುರಿಯಾಗಿದೆ.

 ಮುಂಬೈಯಲ್ಲಿ ಯೋಗಿ ಮತ್ತು ಅಕ್ಷಯ್​ ಅವರು ಒಟ್ಟಿಗೆ ಕುಳಿತು ಚರ್ಚೆ ಮಾಡುತ್ತಿರುವ ಫೋಟೋಗಳನ್ನು ಟ್ವಿಟರ್‌ನಲ್ಲಿ ಖುದ್ದು ಯೋಗಿಯವರೇ ಹಂಚಿಕೊಂಡಿದ್ದಾರೆ. ಮುಂಬೈನಲ್ಲಿ ಭಾರತದ ಜನಪ್ರಿಯ ನಟ ಅಕ್ಷಯ್ ಕುಮಾರ್ ಅವರನ್ನು ಭೇಟಿಯಾದೆ. ಅವರೊಂದಿಗೆ ಚಿತ್ರರಂಗದ ವಿವಿಧ ಆಯಾಮಾಗಳ ಕುರಿತಾಗಿ ಒಂದು ಅತ್ಯುತ್ತಮ ಚರ್ಚೆಯನ್ನು ನಡೆಸಿದೆ. ಕೆಲಸದ ಬಗೆಗಿನ ಅವರ ತಿಳಿವಳಿಕೆ, ಸಮರ್ಪಣಭಾವ ಮತ್ತು ರಚನಾತ್ಮಕತೆ ಇಂದಿನ ಯುವಜನತೆಗೆ ಸ್ಫೂರ್ತಿದಾಯಕವಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಹಲವಾರು ರೀತಿಯಲ್ಲಿ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದು.ಈ ಭೇಟಿಯ ಕುರಿತು ವಿಭಿನ್ನ ಚರ್ಚೆಗಳ ಆರಂಭವಾಗಿವೆ. ಚಿತ್ರರಂಗದ ಅನೇಕ ವಿಚಾರಗಳ ಕುರಿತು ಯೋಗಿ ಆದಿತ್ಯನಾಥ್‌ ಜೊತೆ ಅಕ್ಷಯ್ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇಂದು ಕೂಡ ಆದಿತ್ಯನಾಥ ಅವರು ಮುಂಬೈನಲ್ಲೇ ಇದ್ದು, ಮತ್ತೊಂದಿಷ್ಟು ಬಾಲಿವುಡ್‌ ಸೆಲೆಬ್ರಿಟಿಗಳನ್ನು ಭೇಟಿಯಾಗುವ ಸಾಧ್ಯತೆಗಳಿವೆ.

ನೋಯ್ಡಾ-ಗ್ರೇಟರ್ ನೋಯ್ಡಾ ಹಾಗೂ ಗೌತಮ್ ಬುದ್ಧ ನಗರ ಜಿಲ್ಲೆಗೆ ಹೊಂದಿಕೊಂಡಂತೆ ದೇಶದ ಅತ್ಯಂತ ದೊಡ್ಡದಾದ, ಸುಂದರವಾದ ಫಿಲ್ಮ್ ಸಿಟಿಯನ್ನು ಉತ್ತರ ಪ್ರದೇಶದಲ್ಲಿ ನಿರ್ಮಾಣ ಮಾಡುವ ಚರ್ಚೆ ಎಲ್ಲೆಡೆ ಹರಿದಾಡಿತ್ತು.

‘ಉತ್ತರ ಪ್ರದೇಶವು ಏಳು ರಾಜ್ಯಗಳಿಗೆ ಹೊಂದಿಕೊಂಡ ದೇಶದ ಏಕೈಕ ರಾಜ್ಯವಾಗಿದೆ. ಇಡೀ ದೇಶಕ್ಕೆ ಇದೊಂದು ಸಾಂಸ್ಕೃತಿಕ ಕೇಂದ್ರವಾಗಿದೆ. ಜಗತ್ತಿನ ಪುರಾತನ ನಗರ ವಾರಣಾಸಿ, ಶ್ರೀರಾಮ ಜನಿಸಿದ ಅಯೋಧ್ಯ ಇರುವುದು ಕೂಡ ಇದೇ ರಾಜ್ಯದಲ್ಲಿ. ಈ ಹೊಸ ಫಿಲ್ಮ್‌ ಸಿಟಿಯ ನಿರ್ಮಾಣಕ್ಕಾಗಿ ಐತಿಹಾಸಿಕ ನಗರ ಹಸ್ತಿನಾಪುರದಲ್ಲಿ ಜಾಗ ಗುರುತಿಸಲಾಗಿದೆ. ಈ ರಾಷ್ಟ್ರಕ್ಕೆ ಹಸ್ತಿನಾಪುರದ ಕೊಡುಗೆ ಅಮೋಘವಾದದ್ದು. ಗಂಗಾ-ಯುಮುನಾ ನದಿಗಳ ಸಮೀಪ ಫಿಲ್ಮ್‌ ಸಿಟಿ ಸುಂದರವಾದ ಫಿಲ್ಮ್ ಸಿಟಿ ನಿರ್ಮಾಣವಾಗಲಿದೆ’ ಎಂದಿದ್ದರು. ಇದೀಗ ಅದರ ಪ್ರಕ್ರಿಯೆ ಶುರುವಾಗಿದೆ. ಈ ವಿಚಾರವಾಗಿ ಅಕ್ಷಯ್ ಕುಮಾರ್ ಜೊತೆ ಚರ್ಚೆ ನಡೆಸಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಫಿಲ್ಮ್ ಸಿಟಿ ಯೋಜನೆಗೆ ಯನ್ನು ಸಾಕಾರಗೊಳಿಸಲು ಬಾಲಿವುಡ್ ಖ್ಯಾತ ನಾಮರು ಮತ್ತು ಉದ್ಯಮಿಗಳನ್ನು ಭೇಟಿಯಾಗುತ್ತಿದ್ದಾರೆ. ಈಗಾಗಲೇ ಫಿಲ್ಮ್ ಸಿಟಿ ಯೋಜನೆ ಪ್ರಾರಂಭ ಮಾಡಿರುವ ಸಿಎಂ, ಈ ವಿಚಾರವಾಗಿ ಅನೇಕರ ಜತೆ ಚರ್ಚೆಗೆ ಸಬೆ ಕರೆದಿದ್ದಾರೆಂದೂ ಮಾಹಿತಿ ಕೇಳಿ ಬರುತ್ತಿದೆ.

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023
ರಾಷ್ಟ್ರಪತಿಯಿಂದ ಹೊಸ ಸಂಸತ್ ಭವನ ಉದ್ಘಾಟನೆಗೆ ಕೋರಿಕೆ: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ
ದೇಶ-ವಿದೇಶ

ರಾಷ್ಟ್ರಪತಿಯಿಂದ ಹೊಸ ಸಂಸತ್ ಭವನ ಉದ್ಘಾಟನೆಗೆ ಕೋರಿಕೆ: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.