• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನಕ್ಸಲರಿಂದ ಅಪಹರಣವಾದ ಕಮಾಂಡೊ ರಾಕೇಶ್ವರ್ ಸಿಂಗ್ ಚಿತ್ರ ಬಿಡುಗಡೆ; ಮಾತುಕತೆಗೆ ಮಧ್ಯವರ್ತಿ ನೇಮಕಕ್ಕೆ ಒತ್ತಾಯ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ಮನರಂಜನೆ
ನಕ್ಸಲರಿಂದ ಅಪಹರಣವಾದ ಕಮಾಂಡೊ ರಾಕೇಶ್ವರ್ ಸಿಂಗ್ ಚಿತ್ರ ಬಿಡುಗಡೆ; ಮಾತುಕತೆಗೆ ಮಧ್ಯವರ್ತಿ ನೇಮಕಕ್ಕೆ ಒತ್ತಾಯ
0
SHARES
0
VIEWS
Share on FacebookShare on Twitter

ರಾಯಪುರ, ಏ. 07: ಸಿಆರ್​ಪಿಎಫ್ ಮತ್ತು ಭದ್ರತಾ ಸಿಬ್ಬಂದಿ ಮೇಲೆ ನಕ್ಸಲರು ನಡೆಸಿದ ದಾಳಿಯಲ್ಲಿ ಸೆರೆಸಿಕ್ಕಿರಬಹುದು ಎನ್ನಲಾದ ಕೇಂದ್ರೀಯ ಸಶಸ್ತ್ರ ಮೀಸಲು ಪಡೆಯ (Central Reserve Police Force – CRPF) ಕೋಬ್ರಾ ತುಕಡಿಯ ಯೋಧ ರಾಕೇಶ್ವರ್​ ಸಿಂಗ್ ಅವರ ಚಿತ್ರವನ್ನು ನಕ್ಸಲರು ಬಿಡುಗಡೆ ಮಾಡಿದ್ದಾರೆ. ಮಾವೋವಾದಿ ನಾಯಕನ ವಾಟ್ಸಾಪ್​ ಸಂಖ್ಯೆಯಿಂದ ಅಪಹೃತ ಯೋಧನ ಚಿತ್ರ ಬಿಡುಗಡೆಯಾಗಿದೆ ಎಂದು ಸುಕ್ಮ ಮತ್ತು ಬಿಜಾಪುರದ ಸ್ಥಳೀಯ ಪತ್ರಕರ್ತರು ಮಾಹಿತಿ ನೀಡಿದ್ದಾರೆ. ಅಪಹೃತ ಯೋಧನ ಬಿಡುಗಡೆಗಾಗಿ ಮಾತುಕತೆ ನಡೆಸಬಲ್ಲ ಮಧ್ಯವರ್ತಿಗಳನ್ನು ಗುರುತಿಸುವಂತೆ ಪತ್ರಿಕಾ ಹೇಳಿಕೆಯ ಮೂಲಕ ನಕ್ಸಲರು ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ.

ಕಳೆದ ಶನಿವಾರ ಸಿಆರ್​ಪಿಎಫ್​ನ ಕೋಬ್ರಾ ಘಟಕ, ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯಪಡೆಯ ಸಿಬ್ಬಂದಿಯ ಮೇಲೆ ನಕ್ಸಲರು ಹೊಂಚುದಾಳಿ ನಡೆಸಿದ್ದರು. ಈ ವೇಳೆ ಸುಮಾರು ಐದು ತಾಸು ಗುಂಡಿನ ಚಕಮಕಿ ನಡೆದಿತ್ತು. ಭದ್ರತಾಪಡೆಗಳಿಗೆ ಸೇರಿದ 22 ಮಂದಿ ಹುತಾತ್ಮರಾಗಿದ್ದರು. ಈ ವೇಳೆ ಸುಮಾರು 20 ಮಾವೋವಾದಿಗಳನ್ನು ಕೊಲ್ಲಲಾಗಿದೆ ಎಂದು ಭದ್ರತಾ ಪಡೆಗಳ ಸಿಬ್ಬಂದಿ ಹೇಳಿದ್ದರು. ಆದರೆ ಈ ಹೇಳಿಕೆಯನ್ನು ನಿರಾಕರಿಸಿದ್ದ ನಕ್ಸಲರು ತಮ್ಮ ಪಾಳಯದಲ್ಲಿ ಕೇವಲ ನಾಲ್ವರು ಸತ್ತಿದ್ದಾರೆ ಎಂದು ಹೇಳಿದ್ದರು.

ಶೂಟ್​ಔಟ್​ ವೇಳೆ ಸಿಆರ್​ಪಿಎಫ್​ ತುಕಡಿಯಲ್ಲಿದ್ದ ಜಮ್ಮು ಮೂಲದ ರಾಕೇಶ್ವರ್ ಸಿಂಗ್ ಮಾನ್ಹಸ್ ನಾಪತ್ತೆಯಾಗಿದ್ದರು. ಅವರನ್ನು ನಕ್ಸಲರು ಅಪಹರಿಸಿರಬಹುದು ಎಂದು ಶಂಕಿಸಲಾಗಿತ್ತು. ನಾಪತ್ತೆಯಾಗಿದ್ದ ಯೋಧನ ಚಿತ್ರವು ಇಂದು ಮುಂಜಾನೆ 11.27ಕ್ಕೆ ಸ್ಥಳೀಯ ಪತ್ರಕರ್ತರಿಗೆ ಸಿಕ್ಕಿದೆ. ಮಾವೋವಾದಿಗಳ ನಾಯಕ ವಿಕಲ್ಪ ಈ ಫೋಟೊ ಕಳಿಸಿದ್ದಾರೆ ಎಂದು ಸುಕ್ಮದ ಪತ್ರಕರ್ತ ರಾಜಾ ರಾಥೋಡ್ ತಿಳಿಸಿದ್ದಾರೆ.

ನಕ್ಸಲರು ಮಂಗಳವಾರ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿ, ‘ಅಪಹೃತ ಸಿಆರ್​ಪಿಎಫ್ ಯೋಧನ ಬಿಡುಗಡೆಗಾಗಿ ಮಾತುಕತೆಗಾಗಿ ಮಧ್ಯವರ್ತಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಿ’ ಎಂದು ಹೇಳಿದೆ.

Related News

adipurush 2023
ಮನರಂಜನೆ

ಭಾರತವೊಂದರಲ್ಲೇ 6,200ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಆದಿಪುರುಷ್ ಬಿಡುಗಡೆ: ಕರ್ನಾಟಕದಲ್ಲಿ ಯಾರು ವಿತರಣೆ?

June 10, 2023
‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !
Vijaya Time

ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !

June 10, 2023
ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಕೇಸ್‌ಗೆ ಬಿಗ್ ಟ್ವಿಸ್ಟ್ : ಶ್ರುತಿ ಹರಿಹರನ್‌ಗೆ ನೋಟಿಸ್​ ಜಾರಿ ಮಾಡಿದ ಖಾಕಿ
ಮನರಂಜನೆ

ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಕೇಸ್‌ಗೆ ಬಿಗ್ ಟ್ವಿಸ್ಟ್ : ಶ್ರುತಿ ಹರಿಹರನ್‌ಗೆ ನೋಟಿಸ್​ ಜಾರಿ ಮಾಡಿದ ಖಾಕಿ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.