ಬೆಂಗಳೂರು, ಮೇ. 07: ಕೋವಿಡ್ ಎರಡನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಮೇ 10ರಿಂದ ಅನ್ವಯವಾಗುವಂತೆ ರಾಜ್ಯದಾದ್ಯಂತ ಲಾಕ್ಡೌನ್ ಘೋಷಿಸಲು ಉದ್ದೇಶಿಸಲಾಗಿದೆ.
ಈ ಕುರಿತು ಮುಖ್ಯಮಂತ್ರಿ ಅವರ ಅಧಿಕೃತ ಹೇಳಿಕೆಯಷ್ಟೇ ಬಾಕಿಯಿದೆ. ಬೆಳಗ್ಗೆಯಿಂದಲೂ ಸಿಎಂ ಜೊತೆ ಸಂಪುಟದ ಸಚಿವರು ಚರ್ಚೆ ನಡೆಸಿದ್ದು ಅಂತಿಮವಾಗಿ ಹದಿನಾಲ್ಕು ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ ಮಾಡುವ ಬಗ್ಗೆ ಒಲವು ವ್ಯಕ್ತಪಡಿಸಿದೆ ಎಂದು ತಿಳಿದುಬಂದಿದೆ.
ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಚಿವ ಕೆ. ಸುಧಾಕರ್ ಅವರು ಕೋವಿಡ್ ಸರಪಳಿ ಮುರಿಯಲು ಲಾಕ್ಡೌನ್ ಅನಿವಾರ್ಯ ಎಂದು ಹೇಳಿದ್ದರು.