ನೂರಾರು ಕೋಟಿ ಧ್ವನಿಗಳಿರುವಾಗ, ಬಿಜೆಪಿಯಿಂದ ಎಷ್ಟು ಧ್ವನಿಗಳನ್ನು ಅಡಗಿಸಲು ಸಾಧ್ಯ? : ಅಭಿಷೇಕ್‌ ಸಿಂಘ್ವಿ

Congress

ನೂರಾರು ಕೋಟಿ ಧ್ವನಿಗಳಿರುವ ದೇಶದಲ್ಲಿ ಬಿಜೆಪಿಯಿಂದ(BJP) ಎಷ್ಟು ಧ್ವನಿಗಳನ್ನು ಅಡಗಿಸಲು ಸಾಧ್ಯ? ಸಂವಿಧಾನದ(Constitution) ಮೇಲೆ ನಿರ್ಮಿಸಿರುವ ದೇಶದಲ್ಲಿ ಅಧಿಕಾರದಲ್ಲಿ ಮುಂದುವರಿಯಲು ಬಿಜೆಪಿ ಎಷ್ಟು ಸಂಸ್ಥೆಗಳನ್ನು ನಾಶಪಡಿಸಲಿದೆ? ಬಿಜೆಪಿ ಎಷ್ಟು ದಿನಗಳ ಕಾಲ ಇಂತಹ ವಿಭಜನೆಯ ಅಭಿಯಾನಗಳ ಹಿಂದೆ ಅವಿತುಕೊಳ್ಳಲಿದೆ? ಎಂದು ಕಾಂಗ್ರೆಸ್‌ ಪಕ್ಷದ(Congress Party) ರಾಷ್ಟ್ರೀಯ ವಕ್ತಾರ(National Spokesperson) ಮತ್ತು ರಾಜ್ಯಸಭಾ ಸದಸ್ಯ(Rajyasabha Member) ಅಭಿಷೇಕ್‌ ಸಿಂಘ್ವಿ(Abhishek Singui) ಕೇಂದ್ರ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಕರ್ನಾಟಕದ ಹೈಕೋರ್ಟ್‌(Highcourt) ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿರುವ ಪ್ರಕರಣದ ಕುರಿತು ನವದೆಹಲಿಯಲ್ಲಿ(NewDelhi) ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿಗಳು ತಮಗೆ ವರ್ಗಾವಣೆ ಬೆದರಿಕೆ, ಒತ್ತಡ ಇರುವುದಾಗಿ ಹೇಳಿದ್ದಾರೆ. 2014ರ ನಂತರ ನ್ಯಾಯಾಂಗ ವ್ಯವಸ್ಥೆಯ ಮೇಲೆ ಕಾಣದ ಶಕ್ತಿಗಳು ಈ ರೀತಿ ಒತ್ತಡ ಹೇರುತ್ತಿರುವುದು ಇದೇ ಮೊದಲಲ್ಲ. ನ್ಯಾಯಮೂರ್ತಿಗಳ ಈ ಗಂಭೀರ ಆರೋಪದ ಬಗ್ಗೆ ತನಿಖೆ ನಡೆಸಲು ವಿಶೇಷ ಸಮಿತಿ ರಚಿಸುವಂತೆ ಕೋರುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನು ದೇಶದ ನ್ಯಾಯಾಂಗ ವ್ಯವಸ್ಥೆ ಹಾಗೂ ನ್ಯಾಯಾಧೀಶರ ಮೇಲೆ ನಡೆಯುತ್ತಿರುವ ದಾಳಿ ಕೇವಲ ಆಕಸ್ಮಿಕವಲ್ಲ. ಬಿಜೆಪಿ ನಾಯಕರು, ಬೆಂಬಲಿಗರು ನ್ಯಾಯಾಂಗವನ್ನು ಟ್ರೋಲ್(Troll) ಮಾಡುವ ಸಂದೇಶಗಳನ್ನು ಹರಿಬಿಡುತ್ತಿದ್ದಾರೆ. ನ್ಯಾಯಾಂಗದ ನೈತಿಕಸ್ಥೈರ್ಯ ಕುಗ್ಗಿಸುವುದು, ಒತ್ತಡ ಹೇರುವುದು, ಬೆದರಿಸುವುದು ಇದರ ಉದ್ದೇಶ ಎಂದು ಆರೋಪಿಸಿದ್ದಾರೆ. ಇನ್ನು ನ್ಯಾಯಾಮೂರ್ತಿಗಳಿಗೆ ಬೆದರಿಕೆ ಹಾಕಿರುವುದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದರು.

ಕರ್ನಾಟಕದಲ್ಲಿ ಎರಡು ದಿನಗಳ ಹಿಂದೆಯಷ್ಟೇ ಆಡಳಿತಾರೂಢ ಪಕ್ಷದ ನಾಯಕರು ನ್ಯಾಯಾಲಯದ ಕಾರ್ಯನಿರ್ವಹಣೆಯಲ್ಲಿ ಮಧ್ಯಪ್ರವೇಶಿಸಿ ತಮ್ಮ ಮೇಲೆ ಒತ್ತಡ ಹೇರುತ್ತಿರುವ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಇಂತಹ ಅಪರೂಪದ ನ್ಯಾಯಮೂರ್ತಿಗಳನ್ನು ನಾವೆಲ್ಲರೂ ಒಗ್ಗೂಡಿ ಬೆಂಬಲಿಸಬೇಕಾಗಿದೆ ಎಂದಿದ್ದರು.

Exit mobile version