• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

Politics ; ಬೊಮ್ಮಾಯಿ ಅವರೇ, ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಬೇರೆನಿದೆ? : ಕಾಂಗ್ರೆಸ್‌

Mohan Shetty by Mohan Shetty
in ರಾಜಕೀಯ, ರಾಜ್ಯ
cm
0
SHARES
0
VIEWS
Share on FacebookShare on Twitter

Karnataka : ಉದ್ಯೋಗ ನೀಡಲಾಗದ 40% ಸರ್ಕಾರ ಮಂಜುರಾದ ಕೆಲವೇ ಕೆಲವು ನೇಮಕಾತಿಯಲ್ಲೂ ಅಕ್ರಮ ನಡೆಸಿದೆ. FDA, SDA, PSI, KPTCL, ಸಹಾಯಕ ಪ್ರಾಧ್ಯಾಪಕರು ಸೇರಿದಂತೆ ಎಲ್ಲಾದರಲ್ಲೂ ಅಕ್ರಮ ನಡೆಸಿದ ಸರ್ಕಾರಕ್ಕೆ ಬಡ ಅಭ್ಯರ್ಥಿಗಳು ಪೆನ್ನುಗಳ ಲಂಚ ನೀಡಲು ತಯಾರಾಗಿದ್ದಾರೆ.

Congress allegation on Basavaraj Bommai

ಬಸವರಾಜ ಬೊಮ್ಮಾಯಿ(Basavaraj Bommai) ಅವರೇ, ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಬೇರೆನಿದೆ? ಎಂದು ಕಾಂಗ್ರೆಸ್‌(Congress) ವಾಗ್ದಾಳಿ ನಡೆಸಿದೆ.

ಈ ಕುರಿತು ಸರಣಿ ಟ್ವೀಟ್‌(Tweet) ಮಾಡಿರುವ ರಾಜ್ಯ ಕಾಂಗ್ರೆಸ್‌, 40% ಸರ್ಕಾರಕ್ಕೆ ಲಂಚ ಕೊಡಲು ರೊಕ್ಕವಿಲ್ಲ ನಮ್ಮ ಪಾಲಿನ ರೊಟ್ಟಿಯಾದರೂ ಕೊಡುತ್ತೇವೆ ಕೆಲಸ ಕೊಡಿ ಎಂಬುದು ಅಭ್ಯರ್ಥಿಗಳ ವೇದನೆ, ನಿವೇದನೆ ಎಲ್ಲವೂ.

ಅವರೇ, ಈ ರೊಟ್ಟಿಯ ಲಂಚದಲ್ಲಿ ಯುವಕರ ಬದುಕಿನ ಕನಸಿದೆ, ಭವಿಷ್ಯದ ಆತಂಕವಿದೆ, ಶ್ರಮವಿದೆ, ಪ್ರಾಮಾಣಿಕತೆಯಿದೆ. ಬಸವರಾಜ ಬೊಮ್ಮಾಯಿ ಇದನ್ನು ಪಡೆದಾದರೂ ಉದ್ಯೋಗ ನೀಡಿ.

ಲಂಚ ಪಡೆದು PSI ಪರಿಕ್ಷಾರ್ಥಿಗಳಿಗೆ ಬ್ಲೂಟೂತ್ ನೀಡಿದ 40% ಸರ್ಕಾರಕ್ಕೆ ಲಂಚ ಕೊಡಲಾಗದ ಅಭ್ಯರ್ಥಿಗಳು ಬ್ಲೂಟೂತ್ ಅನ್ನೇ ಲಂಚವಾಗಿ ಕೊಡ್ತಿದಾರೆ ಎಂದು ಲೇವಡಿ ಮಾಡಿದೆ.

ಇದನ್ನೂ ಓದಿ : https://vijayatimes.com/hindu-temple-being-targeted/

ಪವರ್ ಲೆಸ್ ಸಿಎಂಗೆ, ಅಭ್ಯರ್ಥಿಗಳು ಪವರ್ ಬ್ಯಾಂಕ್ ನೀಡಲು ತಯಾರಿದ್ದಾರೆ. ಅದನ್ನು ಪಡೆದಾದರೂ ಉದ್ಯೋಗ ನೀಡುವ ಪವರ್ ತೋರಿಸುವಿರಾ ಬಸವರಾಜ ಬೊಮ್ಮಾಯಿ ಅವರೇ? ನಿಮ್ಮ ‘ಜನಸ್ಪಂದನೆ’ ತೋರುವಿರಾ? ಲಕ್ಷಾಂತರ ಸರ್ಕಾರಿ ಹುದ್ದೆಗಳು ಖಾಲಿ ಇವೆ.

ಉದ್ಯೋಗಾಕಾಂಕ್ಷಿಗಳು ನೋಟಿಫಿಕೇಶನ್ಗಾಗಿ ಕಾಯುತ್ತಿದ್ದಾರೆ. ಮಂಜೂರಾದ ಕೆಲವೇ ಹುದ್ದೆಗಳು ಮಾರಾಟವಾಗುತ್ತಿವೆ. ಪೆನ್, ಪುಸ್ತಕಗಳೇ ಅಭ್ಯರ್ಥಿಗಳ ಆಸ್ತಿ. ಲಂಚವಿಲ್ಲದೆ ಕೆಲಸ ಮಾಡದ 40% ಸರ್ಕಾರಕ್ಕೆ ಅವುಗಳೇ ಲಂಚವಾಗಿ ನೀಡುತ್ತಿದ್ದಾರೆ. ಈ ಲಂಚ ಪಡೆದಾದರೂ ಕೆಲಸ ಕೊಡಿ ಬಸವರಾಜ ಬೊಮ್ಮಾಯಿ ಅವರೇ.

DKS

ಈ ಯುವಕರು ತಮ್ಮ ಕುಟುಂಬಸ್ಥರಿಗೆ ನೌಕರಿ ಪಡೆಯುವ ಭರವಸೆ ಕೊಟ್ಟು ಓದಿದ್ದಾರೆ, ಪೋಷಕರು ತಮ್ಮ ಮಗ ಉದ್ಯೋಗಸ್ಥನಾಗಿ ಮನೆಗೆ ಬೆಳಕಾಗುತ್ತಾನೆ ಎಂದು ಆಸೆ ಕಂಗಳಲ್ಲಿ ನೋಡ್ತಿದಾರೆ. ಭ್ರಷ್ಟ ಸರ್ಕಾರದಿಂದ ಈ ಯುವಕರು ಮನೆಯಲ್ಲಿ ಮುಖ ತೋರಿಸಲಾಗದ ಸ್ಥಿತಿಯಲ್ಲಿದ್ದಾರೆ.

ಇದನ್ನೂ ಓದಿ : https://vijayatimes.com/chemical-food/

ಬಸವರಾಜ ಬೊಮ್ಮಾಯಿ ಅವರೇ, ತಾವು ಇವರ ಗೋಳು ಕೇಳುವುದು ಯಾವಾಗ? ಎಂದು ಪ್ರಶ್ನಿಸಿದೆ. 40% ಸರ್ಕಾರದಲ್ಲಿ ಲಂಚವೇ ಸತ್ಯ, ಲಂಚಕ್ಕೇ ಪ್ರಾಶಸ್ತ್ಯ, ಲಂಚವೇ ದೇವರು, ಲಂಚವೇ ಸರ್ವಸ್ವ, ಲಂಚವೇ ಸರ್ವವ್ಯಾಪಿ, ನಿದ್ದೆ, ಊಟ ಬಿಟ್ಟು, ಸರ್ಕಾರಿ ನೌಕರಿಗಾಗಿ ಭವಿಷ್ಯ ಪಣಕ್ಕಿಟ್ಟು ಓದಿ ಪರೀಕ್ಷೆ ಬರೆದು ಉದ್ಯೋಗಾಕಾಂಕ್ಷಿಗಳು ಕಾಯ್ತಾ ಇದ್ದಾರೆ.

BJP
ಬೊಮ್ಮಾಯಿ ಅವರೇ. ಕೇಳಿಸಿಕೊಳ್ಳಿ, ಉದ್ಯೋಗಾಕಾಂಕ್ಷಿಗಳ ಬಳಿ ಪುಸ್ತಕ, ಪೆನ್ನು, ಭವಿಷ್ಯದ ಕನಸು ಬಿಟ್ಟರೆ ಬೇರೇನೂ ಇಲ್ಲ. ಸರ್ಕಾರಕ್ಕೆ ಲಂಚದ ಆಸೆ, ಕಮಿಷನ್ ಲಾಲಸೆ ಬಿಟ್ಟರೆ ಬೇರೇನೂ ಇಲ್ಲ. 40% ಸರ್ಕಾರ ನಡೆಸಿದ PSI ಅಕ್ರಮದಿಂದಾಗಿ ಪ್ರಾಮಾಣಿಕ ಅಭ್ಯರ್ಥಿಗಳ ವಯಸ್ಸು ಮೀರುತ್ತಿದೆ, ಬದುಕು ಛಿದ್ರವಾಗಿದೆ. ಇವರ ಆತಂತ್ರದ ಬದುಕಿಗೆ ಪರಿಹಾರವೇನು ಬೊಮ್ಮಾಯಿ ಅವರೇ? ಎಂದು ಪ್ರಶ್ನಿಸಿದೆ.

• ಮಹೇಶ್.ಪಿ.ಎಚ್

Tags: bjpCongressKarnatakapoliticalpolitics

Related News

ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ
ಪ್ರಮುಖ ಸುದ್ದಿ

ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ

October 2, 2023
ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ
ಪ್ರಮುಖ ಸುದ್ದಿ

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ

October 2, 2023
ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ
ಪ್ರಮುಖ ಸುದ್ದಿ

ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ

October 2, 2023
ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ
ದೇಶ-ವಿದೇಶ

ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.