ಭಾರತದ ಹಳ್ಳಿ, ಹಳ್ಳಿಗಳಲ್ಲಿ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ ; ಕ್ರೆಡಿಟ್ ವಾರ್ಗಿಳಿದ ಕಾಂಗ್ರೆಸ್..!

ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ (Congress Credit War) ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ. ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್

ಅಧಿನಾಯಕರಾಗಿದ್ದರು. ನಾಥುರಾಮ್ ಗೂಡ್ಸೆ (Nathuram Godse) ಹಾರಿಸಿದ ಗುಂಡಿಗೆ ಎದೆ ಸೀಳಿ ಹುತಾತ್ಮರಾದಾಗ ಮಹಾತ್ಮ ಗಾಂಧೀಜಿ ಅವರು ಹೇಳಿದ ಕೊನೇ ಮಾತು ಹೇ ರಾಮ್!

(Hey Ram) ಆಗ ಬಿಜೆಪಿ ಹುಟ್ಟೇ ಇರಲಿಲ್ಲ. 1985-86 ರಲ್ಲಿ ಅಯೋಧ್ಯೆಯಲ್ಲಿ (Ayodhya) ಮೊದಲ ಬಾರಿಗೆ ಬೀಗ ತೆಗೆಸಿ ರಾಮನ ಪೂಜೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದೇ ರಾಜೀವ್ ಗಾಂಧಿ. 1989 ರಲ್ಲಿ

ರಾಮ ಮಂದಿರ ಶಿಲಾನ್ಯಾಸಕ್ಕೆ ವಿಶ್ವ ಹಿಂದೂ ಪರಿಷತ್ ಗೆ (Vishwa Hindu Parishad) ಅವಕಾಶ ಕಲ್ಪಿಸಿದವರು (Congress Credit War) ರಾಜೀವ್ ಗಾಂಧಿ.

ಇದನ್ನು ಓದಿ: https://x.com/INCKarnataka/status/1744315758333788321?s=20

ರಾಜೀವ್ ಗಾಂಧಿ (Rajiv Gandhi) ಅವರು ಮೊದಲ ಹೆಜ್ಜೆ ಇಡದೇ ಹೋಗಿದ್ದರೆ ಬಿಜೆಪಿಯವರಿಗೆ ಇದರ ಆಲೋಚನೆಯೇ ಬರುತ್ತಿರಲಿಲ್ಲ. ದೂರದರ್ಶನದಲ್ಲಿ ರಾಮಾಯಣದ (Ramayana)

ಸೀರಿಯಲ್ ಪ್ರಸಾರ ಮಾಡಿ ಮನೆ, ಮನೆಯೂ ರಾಮಲಲ್ಲಾನನ್ನು ಕಣ್ತುಂಬಿಕೊಳ್ಳುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರ ಎಂದು ರಾಜ್ಯ ಕಾಂಗ್ರೆಸ್ ಕ್ರೆಡಿಟ್ ವಾರ್ಗೆ ಇಳಿದಿದೆ.

ಈ ಕುರಿತು ಟ್ವೀಟ್ (Twitter) ಮಾಡಿರುವ ರಾಜ್ಯ ಕಾಂಗ್ರೆಸ್, ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ. ಆದರೆ ರಾಮನ ಹೆಸರೇಳಿಕೊಂಡೇ ರಾಜಕೀಯ

ಆಶ್ರಯ ಹುಡುಕುವ ಬಿಜೆಪಿಗೆ ಸನ್ಮತಿ ದೇ ಭಗವಾನ್ ಎಂದು ಹೇಳಬೇಕಾಗಿ ಬಂದಿರೋದು ದುರಂತ. ಶ್ರೀರಾಮಚಂದ್ರ ಯಾರೊಬ್ಬರ ಸ್ವತ್ತೂ ಅಲ್ಲ. ಆದರೆ ರಾಮನ ಹೆಸರಲ್ಲಿ ರಾಜಕೀಯ ಬೇಳೆ

ಬೇಯಿಸಿಕೊಳ್ಳುತ್ತಿರುವ ಬಿಜೆಪಿಯವರು ಶ್ರೀರಾಮ (Shree Ram) ತಮ್ಮೊಬ್ಬರ ಸ್ವತ್ತು ಎಂಬ ಭ್ರಮೆಯಲ್ಲಿದ್ದಾರೆ. ಈ ಬಗ್ಗೆ ನಮ್ಮ ಅನುಕಂಪವಿದೆ ಎಂದು ಲೇವಡಿ ಮಾಡಿದೆ.

ಇನ್ನೊಂದು ಟ್ವೀಟ್ನಲ್ಲಿ, ಬಿಜೆಪಿಯವರು (BJP) ರಾಮ ಭಕ್ತರ ವೇಷದಲ್ಲಿರುವ ಸಮಾಜ ಕಂಟಕರು. ಜನವಿರೋಧಿ ಬಿಜೆಪಿಯು ಕಾಂಗ್ರೆಸ್ ಪಕ್ಷವನ್ನು ರಾಮವಿರೋಧಿ ಎಂದು ಬಿಂಬಿಸುವ ದುಷ್ಟ ಯತ್ನದಲ್ಲಿದೆ.

ಜನವರಿ 22 ರಂದು ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಅದೇಶಿಸಿರುವುದು ಬಿಜೆಪಿಗೆ ಸಂತಸ ತರುವ ಬದಲು ಸಂಕಟ ತಂದಿರುವುದು ಅವರ ಧರ್ಮವಿಕೃತಿಗೆ ಸಾಕ್ಷಿ. ಅವರಿಗೆ ಭಕ್ತಿ, ಪೂಜೆ,

ಪುನಸ್ಕಾರ, ಸಂಸ್ಕಾರ ಬೇಕಿಲ್ಲ. ಅವರಿಗೆ ಬೇಕಿರುವುದು ಅದರ ಹೆಸರಿನಲ್ಲಿ ರಾಜಕೀಯ. ಅವರದು ಧರ್ಮದ ದಾರಿ ತಪ್ಪಿಸುವ ಹುನ್ನಾರ ಎಂದು ಟೀಕಿಸಿದೆ.

Exit mobile version