• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅಂಬೇಡ್ಕರ್ ಅಂತ್ಯಸಂಸ್ಕಾರ ಮಾಡಲು ಕಾಂಗ್ರೆಸ್ ಜಾಗ ಕೊಡಲಿಲ್ಲ: ನಳಿನ್ ಕುಮಾರ್‌ ಕಟೀಲ್ ಟೀಕೆ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಅಂಬೇಡ್ಕರ್ ಅಂತ್ಯಸಂಸ್ಕಾರ ಮಾಡಲು ಕಾಂಗ್ರೆಸ್ ಜಾಗ ಕೊಡಲಿಲ್ಲ: ನಳಿನ್ ಕುಮಾರ್‌ ಕಟೀಲ್ ಟೀಕೆ
0
SHARES
0
VIEWS
Share on FacebookShare on Twitter

ಚಿತ್ರದುರ್ಗ, ಜು. 24: ದಲಿತ ಸಿಎಂ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿರಂ ಸಿದ್ದರಾಮಯ್ಯ ನಡುವಿನ ಜಟಾಪಟಿ ಮುಂದುವರಿದಿದೆ.

ದಲಿತ ಸಿಎಂ ವಿಚಾರವಾಗಿ ಚಿತ್ರದುರ್ಗದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್ ನಲ್ಲಿ ಇದುವರೆಗೆ ನಾಲ್ಕು ದಲಿತರು ಮುಖ‍್ಯಮಂತ್ರಿಯಾಗಿದ್ದಾರೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಬಿಜೆಪಿ ರಾಜ್ಯದಲ್ಲಿ ದಲಿತರನ್ನು ಮುಖ‍್ಯಮಂತ್ರಿ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಸವಾಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದರು.

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅತೀ ಹೆಚ್ಚು ಅವಮಾನ ಮಾಡಿದ್ದೇ ಕಾಂಗ್ರೆಸ್. ಮೊದಲ ಸಚಿವ ಸಂಪುಟದಲ್ಲಿಯೇ ಅಂಬೇಡ್ಕರ್ ನೋವಿನಿಂದ ಹೊರ ಬರುವಂತೆ ಮಾಡಿದರು. ಲೋಕಸಭೆ ಚುನಾವಣೆಗೆ ಅಂಬೇಡ್ಕರ್ ನಿಂತಾಗ ಕಾಂಗ್ರೆಸ್ ಅವರನ್ನು ಸೋಲಿಸಿತು ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಅಂಬೇಡ್ಕರ್ ಅಂತ್ಯಸಂಸ್ಕಾರ ಮಾಡಲು ಕಾಂಗ್ರೆಸ್ ಜಾಗ ಕೊಡಲಿಲ್ಲ. ಅವರಿಗೆ ಭಾರತರತ್ನವನ್ನು ಕೊಡಲಿಲ್ಲ. ಜಗಜೀವನ್ ರಾಮ್ ಅವರಿಗೆ ಪ್ರಧಾನಿಯಾಗುವ ಅವಕಾಶ ಇದ್ದರೂ ಕಾಂಗ್ರೆಸ್ ನೀಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಿದ್ಧರಾಮಣ್ಣ ಅವರ ಇತಿಹಾಸ ಹೇಳಬೇಕೆಂದರೆ ಅವರು  ಕಾಂಗ್ರೆಸ್ ಗೆ ಬಂದು ಸಿಎಂ ಆದವರು. ಡಾ.ಜಿ.ಪರಮೇಶ್ವರ್ ಅವರನ್ನು ಉಪ ಮುಖ‍್ಯಮಂತ್ರಿ ಸಹ ಮಾಡಲಿಲ್ಲ. ಬದಲಾಗಿ ಅವರನ್ನೇ ಚುನಾವಣೆಯಲ್ಲಿ ಸೋಲಿಸಿದರು. ಇಷ್ಟು ಮಾತ್ರವಲ್ಲದೆ ಮಲ್ಲಿಕಾರ್ಜುನ ಖರ್ಗೆ, ಬಿ.ಎನ್.ಚಂದ್ರಪ್ಪ, ಧ್ರುವನಾರಾಯಣ, ಸೇರಿದಂತೆ ದಲಿತ ಮುಖಂಡರನ್ನು ಸೋಲಿಸಿದರು. ಇಂದಿಗೂ ಖರ್ಗೆ, ಪರಮೇಶ್ವರ್ ಮುಂದಕ್ಕೆ ಬರಲು ಬಿಡುತ್ತಿಲ್ಲ ಎಂದು ಆರೋಪಿಸಿದರು.

ದೇಶದಲ್ಲಿ ಬಿಜೆಪಿ ಕಡಿಮೆ ಅವಧಿಯ ಅಧಿಕಾರ ನಡೆಸಿದೆ. ಸಣ್ಣ ಅವಧಿಯಲ್ಲಿಯೇ ದಲಿತರು, ಅಲ್ಪಸಂಖ್ಯಾತರಿಗೆ ನಮ್ಮ ಪಕ್ಷ ವಿವಿಧ ಉನ್ನತ ಹುದ್ದೆಗಳನ್ನು ನೀಡಿದೆ. ಮುಸ್ಲಿಂ ಸಮುದಾಯದ ಅಬ್ದುಲ್ ಕಲಾಂ ಅವರನ್ನು ನಾವು ರಾಷ್ಟ್ರಪತಿ ಮಾಡಿದೆವು. ದಲಿತರಾದ ರಾಮನಾಥ ಕೋವಿಂದ್ ರನ್ನು ರಾಷ್ಟ್ರಪತಿ ಮಾಡಿದ್ದೇವೆ. ಗೋವಿಂದ ಕಾರಜೋಳ ಅವರನ್ನು ಡಿಸಿಎಂ ಮಾಡಿದ್ದೇವೆ. ಆನೇಕಲ್ ವಿಧಾನಸಭೆಯಲ್ಲಿ ಸೋಲು ಅನುಭವಿಸಿದ ಎ.ನಾರಾಯಣಸ್ವಾಮಿ ಅವರನ್ನು ಚಿತ್ರದುರ್ಗದಲ್ಲಿ ಸಂಸದರನ್ನಾಗಿ ಮಾಡಿ ಕೇಂದ್ರ ಮಂತ್ರಿ ಮಾಡಿದ್ದೇವೆ ಎಂದು ಹೇಳಿದರು.

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.