ಕೊರೊನಾ ಸಂಕಷ್ಟದ ನಡುವೆ ಕಾಂಗ್ರೆಸ್ ನಾಯಕರು ಬಿಜೆಪಿ ವರ್ಚಸ್ಸು ಕಡಿಮೆ ಮಾಡುವ ಪ್ರಯತ್ನದಲ್ಲಿದ್ದಾರೆ: ನಳಿನ್ ಕುಮಾರ್ ಕಟೀಲ್

ಬೆಂಗಳೂರು, ಮೇ. 20: ದೇಶ ಕೊರೊನಾ ಸಂಕಷ್ಟದಲ್ಲಿರುವಾಗ ಕಾಂಗ್ರೆಸ್ ನಾಯಕರು ಬಿಜೆಪಿ ವರ್ಚಸ್ಸು ಕಡಿಮೆ ಮಾಡುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.

ಕೋವಿಡ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ದೇಶದ ಘನತೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕುಗ್ಗಿಸುವ ಕೆಲಸ ಮಾಡುತ್ತಿರುವುದು ಸಾಕ್ಷಿ ಸಮೇತ ಬಹಿರಂಗಗೊಂಡಿದೆ.
ಕೋವಿಡ್ 2ನೇ ಅಲೆಯಲ್ಲಿ ಸಂಭವಿಸುತ್ತಿರುವ ಪ್ರಾಣಹಾನಿಗೆ ಕಾಂಗ್ರೆಸ್ ಪಕ್ಷ ನೇರ ಹೊಣೆಯಾಗಿದೆ ಎಂದು ಆರೋಪಿಸಿದ್ದಾರೆ.

ಕೋವಿಡ್ ಸಾಂಕ್ರಾಮಿಕ ಬಿಕ್ಕಟ್ಟಿನ ನಡುವೆ ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ದೇಶದ ವಿರುದ್ಧ ಪಿತೂರಿ‌ ನಡೆಸುತ್ತಿದೆ. ಟೂಲ್ ಕಿಟ್ ತಂತ್ರಗಾರಿಕೆಯ ಮೂಲಕ ಕಾಂಗ್ರೆಸ್ ರಾಷ್ಟ್ರ ದ್ರೋಹದ ಕೆಲಸ ಮಾಡುತ್ತಿದೆ. ಶವ ಸುಡುವ, ನದಿಯಲ್ಲಿ ಶವಗಳು ತೇಲುವ, ಆಕ್ಸಿಜನ್ ಅಭಾವ ಇರುವ ದೃಶ್ಯಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ವಿಘ್ನ ಸಂತೋಷ‌ ಪಡುತ್ತಿರುವುದು ಖಂಡನಾರ್ಹ ಎಂದು ಕಾಂಗ್ರೆಸ್ಸಿಗರ ವಿರುದ್ಧ ಕಿಡಿಕಾರಿದ್ದಾರೆ.

Exit mobile version