ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ನಿಧನ! ; ಸಂತಾಪ ಸೂಚಿಸಿದ ರಾಜಕೀಯ ನಾಯಕರು

Mysoru : ಕರ್ನಾಟಕ ಕಾಂಗ್ರೆಸ್ (congress) ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ (R. Dhruvanarayan) ಅವರು ಶನಿವಾರ ಹೃದಯಾಫಾತದಿಂದ (Congress leaders tweeted) ನಿಧನರಾಗಿದ್ದಾರೆ.

ಮೈಸೂರಿನ ತಮ್ಮ ನಿವಾಸದಲ್ಲಿ ಅವರಿಗೆ ಹೃದಯಾಘಾತವಾಗಿದೆ. ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಅವರು ಶನಿವಾರ ವಿಧಿವಶರಾಗಿದ್ದಾರೆ.

ಆರ್. ಧ್ರುವನಾರಾಯಣ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಅವರ ಕಾರಿನ ಚಾಲಕ ಅವರನ್ನು ಬೆಳಿಗ್ಗೆ 6:40ರ ಸಮಯಕ್ಕೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆದರೆ ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದರು ಎಂದು ಡಿಆರ್‌ಎಂಎಸ್ ಆಸ್ಪತ್ರೆಯ ಡಾ. ಮಂಜುನಾಥ್ ಮಾಹಿತಿ ನೀಡಿದ್ದಾರೆ.

ಇನ್ನು ಆರ್.ಧ್ರುವನಾರಾಯಣ್ ಅವರ ನಿಧನದ ಬಗ್ಗೆ ಕಾಂಗ್ರೆಸ್‌ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದು, ಧ್ರುವನಾರಾಯಣ್ (Congress leaders tweeted) ಅವರ ನಿಧನದಿಂದ ಪಕ್ಷಕ್ಕೆ ಅಪಾರ ನಷ್ಟವಾಗಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ (Rahul Gandhi) ತಿಳಿಸಿದರು.

ಟ್ವಿಟರ್‌ನಲ್ಲಿ ಟ್ವೀಟ್ (Tweet) ಮಾಡಿದ ರಾಹುಲ್ ಗಾಂಧಿ, ಮಾಜಿ ಸಂಸದ ಶ್ರೀ ಆರ್ ಧ್ರುವನಾರಾಯಣ್ ಅವರ ಹಠಾತ್ ನಿಧನದಿಂದ ದುಃಖವಾಗಿದೆ.

ಇದನ್ನೂ ಓದಿ : https://vijayatimes.com/high-court-important-order/

ಕಠಿಣ ಪರಿಶ್ರಮದ ವ್ಯಕ್ತಿ ಮತ್ತು ವಿನಮ್ರ ತಳಮಟ್ಟದ ನಾಯಕ, ಅವರು NSUI ಮತ್ತು ಯೂತ್ ಕಾಂಗ್ರೆಸ್ ಶ್ರೇಣಿಗಳ ಮೂಲಕ ಏರಿದ ಸಾಮಾಜಿಕ ನ್ಯಾಯದ ಚಾಂಪಿಯನ್ ಆಗಿದ್ದರು.

ಅವರ ನಿಧನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ನಷ್ಟವನ್ನು ಉಂಟು ಮಾಡಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಟ್ವೀಟ್‌ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಂಸದ, ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಅವರು ಹೃದಯಾಘಾತದಿಂದ ನಿಧನರಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದ್ದು,

ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ತಮ್ಮ ಅಧಿಕೃತ ಟ್ವೀಟ್‌ ಖಾತೆಯಲ್ಲಿ ಬರೆದು ಸಂತಾಪ ಸೂಚಿಸಿದೆ.

ಇದನ್ನೂ ಓದಿ : https://vijayatimes.com/dhruvanarayana-passed-away/


ಕಾಂಗ್ರೆಸ್‌ ಪಕ್ಷದ ನಾಯಕ, ಮಾಜಿ ಸಂಸದ ಮತ್ತು ನನ್ನ ಆತ್ಮೀಯ ಸ್ನೇಹಿತ ಶ್ರೀ ಆರ್. ಧ್ರುವನಾರಾಯಣ್ ಅವರ ದುರದೃಷ್ಟಕರ ಮತ್ತು ಅಕಾಲಿಕ ನಿಧನದಿಂದ ನಾನು ಆಘಾತಕ್ಕೊಳಗಾಗಿದ್ದೇನೆ.

ಅವರ ಕುಟುಂಬ ಸದಸ್ಯರಿಗೆ ಮತ್ತು ಹಿತೈಷಿಗಳಿಗೆ ನನ್ನ ಆಳವಾದ ಸಂತಾಪಗಳು ಎಂದು ಮಾಜಿ ಮುಖ್ಯಮಂತ್ರಿಗಳು, ಕಾಂಗ್ರೆಸ್‌ ಹಿರಿಯ ನಾಯಕ ಸಿದ್ದರಾಮಯ್ಯ (Siddaramaiah) ಅವರು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

Exit mobile version