Bengaluru : ಬೆಂಗಳೂರಿನ ಸಚಿವರೆಲ್ಲಾ ಕಾಣೆಯಾಗಿದ್ದಾರೆ : ಕಾಂಗ್ರೆಸ್‌

Politics

Bengaluru : ಬೆಂಗಳೂರನ್ನು ಪ್ರತಿನಿಧಿಸುವ ಸಚಿವ ಎಸ್.ಟಿ. ಸೋಮಶೇಕರ್‌ (ST Somashekar) ಮಳೆ ಅವಾಂತರದಿಂದ ನಲುಗಿದ ಯಾವುದೇ ಏರಿಯಾಗಳಲ್ಲಿ ಇದುವರೆಗೂ ಕಾಣಿಸಿಕೊಂಡಿಲ್ಲ.

ಜನತೆ ಹುಡುಕುತ್ತಿದ್ದಾರೆ. ಜನರ ಮನೆಯಲ್ಲಿ ಮಳೆ ನೀರು ನುಗ್ಗಿದರೆ, ಇವರ ಮನದಲ್ಲಿ ಸನ್ಮಾನದ ಆಸೆ ನುಗ್ಗಿದೆ.

ಸಚಿವರೇ ಜನರತ್ತ ನೋಡುವುದು ಯಾವಾಗ? ಎಂದು ಕಾಂಗ್ರೆಸ್‌ (Congress) ವ್ಯಂಗ್ಯವಾಡಿದೆ. ಬೆಂಗಳೂರಿನ ಸಚಿವರೆಲ್ಲಾ ಕಾಣಿಯಾಗಿದ್ದಾರೆ.

ಎಂದು ಟ್ವೀಟರ್‌ನಲ್ಲಿ ಪೋಸ್ಟರ್‌ (Poster) ಅಭಿಯಾನ ಆರಂಭಿಸಿರುವ ಕಾಂಗ್ರೆಸ್‌ (Congress) ಸಚಿವರ ಮತ್ತು ಸಂಸದರ ಕಾರ್ಯ ವೈಖರಿಯನ್ನು ಟೀಕಿಸಿದೆ.

ಸಂಸದ ತೇಜಸ್ವಿ ಸೂರ್ಯ (Tejaswi Surya) ಅವರನ್ನು ಸಂಸದರನ್ನಾಗಿಸಿದ್ದು, ಆಡುವ ಮಕ್ಕಳನ್ನು ಶಾಲೆಗೆ ಸೇರಿಸಿದಂತಾಗಿದೆ. ಹಿಂದೆ ಕೋವಿಡ್ ಕಾಲದಲ್ಲಿ ಫುಟ್ಬಾಲ್ ಆಡಲು ಹೋಗಿದ್ದರು,

ಅತಿವೃಷ್ಟಿಯ ಕಾಲದಲ್ಲಿ ದೋಸೆ ತಿನ್ನಲು ಹೋಗಿದ್ದಾರೆ. ಕೆಲಸಕ್ಕೆ ಕರೆಯಬೇಡಿ, ದೋಸೆ ತಿನ್ನೋಕೆ ಕರೆಯೋದು ಮರೆಯಬೇಡಿ ಎಂಬುದು ಇವರ ಮನವಿ.

https://youtu.be/DLw8ZiSPiLI

ಬೆಂಗಳೂರಿನ ಜನರು ಕೊಟ್ಟ ಅಧಿಕಾರವನ್ನು ಅನುಭವಿಸುತ್ತಿರುವ ಆರ್.ಅಶೋಕ್‌ (R Ashok) ಅವರು ಯಾವ ಬಡಾವಣೆ, ಗಲ್ಲಿಗಳಲ್ಲೂ ಕಾಣಿಸಿಕೊಳ್ಳಲಿಲ್ಲ, ಜನತೆಯ ನೆರವಿಗೆ ನಿಂತಿದ್ದು ಕಾಣಲಿಲ್ಲ.

ಜನರಿಗೆ ಕಷ್ಟದ ಸಮಯವೆಂದರೆ ಬಿಜೆಪಿಗೆ (BJP) ವಿಶ್ರಾಂತಿಯ ಸಮಯ, ಮಳೆ ಮುಗಿದ ನಂತರ ಹಿಜಾಬ್, ಹಲಾಲ್ಗಳಿಗೆ ಕ್ರಿಯಾಶೀಲರಾಗ್ತಾರೆ.

ಕಳೆದ ಒಂದು ವಾರದಿಂದ ಮಳೆಯಲ್ಲಿ ಜನತೆ ಮುಳುಗಲು ಶುರುವಾದಾಗಿನಿಂದ ರಾಜ್ಯದ ಗೃಹಸಚಿವರು ನೆರೆ ಪೀಡಿತ ಪ್ರದೇಶದಲ್ಲಾಗಲಿ, ಬೆಂಗಳೂರಿನಲ್ಲಾಗಲಿ, ವಿಧಾನಸೌಧದಲ್ಲಾಗಲಿ ಕಾಣಿಸಲಿಲ್ಲ.

ಸ್ವಕ್ಷೇತ್ರದಲ್ಲಿ ಠಿಕಾಣಿ ಹೂಡಿದ ಆರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿ ಕೆಲಸ ಮಾಡಲು ಆರಂಭಿಸುವುದು ಯಾವಾಗ?

ಬೆಂಗಳೂರಿನ ಮತ್ತೊಬ್ಬ ಸಚಿವರಾದ ಮುನಿರತ್ನ ಅವರು ಮಳೆ ಬಂದಾಗಿನಿಂದ ಮನೆಯಿಂದ ಹೊರಬಂದಂತಿಲ್ಲ. ಮುನಿರತ್ನರವರೇ, ಕಮಿಷನ್ ಇಲ್ಲದೆ ತಾವು ಹೊರಬರುವುದಿಲ್ಲವೇ?

ಜನರನ್ನು ಕಡೆಗಣಿಸಿರುವ ಇವರಿಗೆ “ಮನಿ ಇದ್ದಲ್ಲಿ ಮಾತ್ರ ಮುನಿ” ಮಾತು ಸೂಕ್ತವಾಗುತ್ತದೆ.

ಬೆಂಗಳೂರಿನ ಜನತೆಯ ಮತ ಬಿಕ್ಷೆ ಪಡೆದು ಜನತೆಗೇ ದ್ರೋಹವೆಸಗುವುದು ಸರಿಯೇ ಸಚಿವರೇ? ಬೆಂಗಳೂರಿನ ಜನತೆ ಮಳೆಯಿಂದ ಕಂಗೆಟ್ಟಿರುವಾಗ ‘ನಾನೇ ಸಿಎಂ’ ಎನ್ನುವ ಸಚಿವರು ನಾಪತ್ತೆಯಾಗಿದ್ದಾರೆ.

“ಗಂಡಸ್ಥನವನ್ನು ಕೆಲಸದಲ್ಲಿ ತೋರಿಸಿ” ಎಂದವರೇ ಕೆಲಸ ಮಾಡದಿದ್ದರೆ ಏನೆಂದು ಕರೆಯಬೇಕು ಅಶ್ವಥ್ ಅವರೇ?

ಇದನ್ನೂ ಓದಿ : https://vijayatimes.com/hdk-tweet-towards-poornachandra-tejaswi/

ಒಂದೇ ಒಂದು ಬಾರಿ ಸಿಎಂ ಜೊತೆಯಲ್ಲಿ ನೆಪಮಾತ್ರದ ಸಿಟಿ ರೌಂಡ್ಸ್ ಹೊಡೆದಿದ್ದು ಬಿಟ್ಟರೆ, ಬೆಂಗಳೂರಿನ ಸಚಿವರಾದ ಭೈರತಿ ಬಸವರಾಜ್‌ ಅವರು ಮತ್ತೆ ಎಲ್ಲಿಯೂ ಕಾಣಿಸಿಕೊಳಲಿಲ್ಲ.

ನೀರು ನುಗ್ಗಿದ ಮನೆಗಳಿಗೆ ಪರಿಹಾರವೇನು? ನೀರು ನಿಂತ ರಸ್ತೆಗಳಿಗೆ ಮುಕ್ತಿ ಏನು? ಸಚಿವರು ಜನರ ಕಷ್ಟ ಆಲಿಸಲು ಹೋಗದಿರುವುದೇಕೆ? ಎಂದು ಟೀಕಿಸಿದೆ.

Exit mobile version