• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ದೇಶದಲ್ಲಿ ಮತ್ತೆ ಕೊರೊನಾ ಆತಂಕ: ಮಾಸ್ಕ್ ಕಡ್ಡಾಯಗೊಳಿಸಲು ಪ್ರಧಾನಿ ಸೂಚನೆ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ದೇಶದಲ್ಲಿ ಮತ್ತೆ ಕೊರೊನಾ ಆತಂಕ: ಮಾಸ್ಕ್ ಕಡ್ಡಾಯಗೊಳಿಸಲು ಪ್ರಧಾನಿ ಸೂಚನೆ
0
SHARES
0
VIEWS
Share on FacebookShare on Twitter

ದೆಹಲಿ, ಮಾ. 17: ನಾವು ಕೊರೊನಾ ನಿಯಂತ್ರಣದಲ್ಲಿ ಸಾಧಿಸಿರುವ ಮುನ್ನಡೆಯನ್ನು ಬೇಜವಾಬ್ದಾರಿಯಾಗಿ ಬದಲಾಯಿಸುವುದು ಬೇಡ. ಮಾಸ್ಕ್ ಧರಿಸುವುದು ಮತ್ತು ಅಂತರ ಪಾಲಿಸುವುದನ್ನು ಗಂಭೀರವಾಗಿ ಪರಿಗಣಿಸಬೇಕು. ನಮ್ಮ ಆತ್ಮವಿಶ್ವಾಸವು ಅತಿಯಾಗಿ ಅದು ಅಪಾಯಕಾರಿ ಮಟ್ಟಕ್ಕೆ ಏರುವುದು ಬೇಡ ಎಂದು ಪ್ರಧಾನಿ ನರೇಂದ್ರ ಮೋದಿ ಕಿವಿಮಾತು ಹೇಳಿದರು.

ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಮಂಗಳವಾರ ಸಂವಾದ ನಡೆಸಿದ ನಂತರ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕೊರೊನಾ ಮಾದರಿ ಪರೀಕ್ಷೆಗಳು ಹೆಚ್ಚಾಗಬೇಕು. ಕೆಲ ರಾಜ್ಯಗಳಲ್ಲಿ ದಿಢೀರನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸಣ್ಣ ನಗರಗಳಲ್ಲಿ ಟೆಸ್ಟಿಂಗ್ ಹೆಚ್ಚಿಸಬೇಕು ಎಂದು ಸೂಚಿಸಿದರು.

ಕೊರೊನಾ ನಿಯಂತ್ರಣಕ್ಕೆ ಅತಿಸೂಕ್ಷ್ಮ ವಲಯಗಳನ್ನು (ಮೈಕ್ರೊ ಕಂಟೇನ್ಮೆಂಟ್ ಜೋನ್) ಗುರುತಿಸಿಕೊಂಡು ಯೋಜನೆಗಳನ್ನು ರೂಪಿಸುವುದು ಅತ್ಯಗತ್ಯ. ದೇಶದಲ್ಲಿರುವ ಎಲ್ಲರೂ ಮಾಸ್ಕ್​ ಕಡ್ಡಾಯವಾಗಿ ಧರಿಸಬೇಕು. ಈ ವಿಚಾರದಲ್ಲಿ ಯಾರೊಬ್ಬರೂ ನಿರ್ಲಕ್ಷ್ಯ ಧೋರಣೆ ತೋರಬಾರದು. ಸ್ಥಳೀಯ ಆಡಳಿತಗಳು ಸಹ ಮಾಸ್ಕ್​ ಧಾರಣೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಟೆಸ್ಟ್, ಟ್ರೇಸ್, ಟ್ರ್ಯಾಕ್ ಮಂತ್ರದಿಂದ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ ಎಂದರು.

ಕಳೆದ 70 ವಾರಗಳಲ್ಲಿ ದೇಶದ 70 ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳು ಶೇ 150ರಷ್ಟು ಹೆಚ್ಚಾಗಿದೆ. ಈಗ ನಾವು ಕೊರೊನಾ ಸೋಂಕು ವಿಸ್ತರಣೆಗೆ ಕಡಿವಾಣ ಹಾಕದಿದ್ದರೆ ರಾಷ್ಟ್ರವ್ಯಾಪಿ ಇಂಥದ್ದೇ ಪರಿಸ್ಥಿತಿ ನಿರ್ಮಾಣವಾಗಬಹುದು. ಭಾರತದಲ್ಲಿ ಸೋಂಕಿತರ ಚೇತರಿಕೆ ಪ್ರಮಾಣ ಶೇ 96ರಷ್ಟು ಇರುವುದು ಗಮನಾರ್ಹ ಸಂಗತಿ. ಸೋಂಕಿತರ ಸಾವಿನ ಪ್ರಮಾಣ ಅತ್ಯಂತ ಕಡಿಮೆ ಇರುವ ದೇಶಗಳಲ್ಲಿ ಭಾರತವೂ ಒಂದು ಎಂದು ಮೋದಿ ಹೇಳಿದರು.

ಭಾರತ ಸೇರಿ ವಿಶ್ವದ ಹಲವು ದೇಶಗಳು ಕೊರೊನಾದ ಹಲವು ಅಲೆಗಳನ್ನು ಎದುರಿಸಿವೆ. ದೇಶದಲ್ಲಿ ಕೊರೋನಾ 2ನೇ ಅಲೆ ವಿಸ್ತರಣೆಗೆ ಕಡಿವಾಣ ಹಾಕಬೇಕಿದೆ. ಇದಕ್ಕಾಗಿ ನಾವು ತ್ವರಿತ ಮತ್ತು ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿದೆ. ಇಂಥ ಪ್ರದೇಶಗಳನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳಲು ಗಮನ ನೀಡಬೇಕು. ಸಣ್ಣಸಣ್ಣ ನಗರಗಳಲ್ಲಿಯೂ ಕೊವಿಡ್ ಟೆಸ್ಟ್, ಲಸಿಕೆ ವಿತರಣೆ ಕೇಂದ್ರಗಳ ಸಂಖ್ಯೆ ಹೆಚ್ಚಾಗಬೇಕು. ದೇಶದಲ್ಲಿ ಪ್ರತಿದಿನ 30 ಲಕ್ಷ ಜನರಿಗೆ ಲಸಿಕೆ ನೀಡಬೇಕು. ಸಾಮೂಹಿಕ ಪ್ರಯತ್ನ, ಕಠಿಣ ಕ್ರಮಗಳಿಂದ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ ಎಂದು ನುಡಿದರು.

Related News

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.