ಬೆಂಗಳೂರು, ಮೇ. 13: ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ತಮ್ಮ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧರಿಸಲಾಗಿದ್ದು, ಹೀಗಾಗಿ
ಲಾಕ್ಡೌನ್ನಿಂದಾಗಿ ಸಂಕಷ್ಟ ಅನುಭವಿಸುತ್ತಿರುವ ಜನರಿಗೆ ನೆರವಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕೊರೋನಾದಿಂದಾಗಿ ರಾಜ್ಯದ ಜನತೆ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ನಾನು ನನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದೇನೆ. ಕೊರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಲಾಕ್ಡೌನ್ ಜಾರಿಗೊಳಿಸಿದ್ದು ಅದರ ಮಾರ್ಗಸೂಚಿಗಳನ್ನು ಅನುಸರಿಸುವುದು ನಮ್ಮೆಲ್ಲರ ಜವಾಬ್ದಾರಿ ಹಾಗೂ ಕರ್ತವ್ಯವಾಗಿದೆ.
ಅಂದಿನ ದಿನ ನಾನು ನನ್ನ ಬೆಂಗಳೂರಿನ ನಿವಾಸದ ಬದಲಾಗಿ ಕನಕಪುರ ಕ್ಷೇತ್ರದಲ್ಲಿರುತ್ತೇನೆ. ಆದ್ದರಿಂದ, ದಯವಿಟ್ಟು ಯಾರೂ ಕೂಡಾ ನನ್ನನ್ನು ಭೇಟಿಮಾಡಲು ನನ್ನ ನಿವಾಸಕ್ಕೆ ತೆರಳಬೇಡಿ ಎಂದು ಕೋರುತ್ತೇನೆ. ನಿಮ್ಮ ಸುರಕ್ಷತೆಯೇ ನನಗೆ ಹಾರೈಕೆಯಿದ್ದಂತೆ. ಹೀಗಾಗಿ ಲಾಕ್ಡೌನ್ನಿಂದಾಗಿ ಸಂಕಷ್ಟ ಅನುಭವಿಸುತ್ತಿರುವ ಬಡ ಜನರಿಗೆ ಸಹಾಯ ಮಾಡಿ. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ನೆರವಾಗಿ ಎಂದು ಮನವಿ ಮಾಡುತ್ತೇನೆ. ಇದೇ ನೀವು ನನಗೆ ಮಾಡುವ ಆಶೀರ್ವಾದ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.