ಉತ್ತರ ಪ್ರದೇಶದಲ್ಲಿ ಕೊರೊನಾ ಕೇಕೆ: ಹಾಲಿ ಮತ್ತು ಮಾಜಿ ಸಿಎಂಗೂ ವಕ್ಕರಿಸಿದ ಮಹಾಮಾರಿ

ಬೆಂಗಳೂರು, ಏ. 14: ದೇಶದಾದ್ಯಂತ ಮಹಾಮಾರಿ ಕೊರೊನಾ ಆರ್ಭಟ ಉಲ್ಬಣಗೊಂಡಿದೆ. ಈಗಾಗಲೇ ಹಲವು ಸೆಲೆಬ್ರಿಟಿಗಳ ಹೆಗಲೇರಿರುವ ಕೊರೊನಾ ಸೋಂಕು, ಇದೀಗ ಉತ್ತರ ಪ್ರದೇಶದ ಹಾಲಿ ಹಾಗೂ ಮಾಜಿ ಮುಖ್ಯಮಂತ್ರಿಗಳಿಗೆ ಕೊರೊನಾ ಸೋಂಕು ತಗುಲಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ತಮ್ಮ ಕಚೇರಿಯ ಕೆಲವು ಅಧಿಕಾರಿಗಳಿಗೆ ಕೋವಿಡ್‌ ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರಲ್ಲಿ ಕೆಲವರು ನನ್ನ ಸಂಪರ್ಕಕ್ಕೆ ಬಂದಿದ್ದರು. ಹೀಗಾಗಿ, ಮುಂಜಾಗ್ರತೆ ಕ್ರಮವಾಗಿ ನಾನು ಸ್ವಯಂ ಐಸೊಲೇಷನ್‌ ಆಗಿದ್ದೇನೆʼ ಎಂದು ತಿಳಿಸಿದ್ದಾರೆ.

ಮತ್ತೊಂದೆಡೆ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್‌ ಯಾದವ್‌ಗೆ ಕೋವಿಡ್‌-19 ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ʻನನಗೆ ಕೋವಿಡ್‌ ಸೋಂಕು ತಗುಲಿದ್ದು, ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿʼ ಎಂದು ತಿಳಿಸಿದ್ದಾರೆ.

Exit mobile version