ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ?: ಬಿಜೆಪಿ ಟ್ವೀಟ್

ಬೆಂಗಳೂರು, ಮಾ. 17: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಟ್ವೀಟ್ ವಾರ್ ಮುಂದುವರಿದಿದ್ದು, ಎಸ್​​ಐಟಿ ವಿಚಾರಣೆಗೆ ಒಳಪಟ್ಟಿರುವ ಸಿಡಿ ಜಾಲದ ಕಿಂಗ್​ಪಿನ್​ ನರೇಶ್​ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಜೊತೆಯಾಗಿರುವ ಫೋಟೋವೊಂದನ್ನು ಬಳಸಿ ಟ್ವೀಟ್​ ಮಾಡಿರುವ ಬಿಜೆಪಿ, ಆ ಮೂಲಕ ನೇರವಾಗಿ ಕಾಂಗ್ರೆಸ್​ ನಾಯಕನಿಗೆ ಟಾಂಗ್ ನೀಡಿದೆ.

ಸಿಡಿ ಜಾಲದ ಪ್ರಮುಖ ಕಿಂಗ್​ಪಿನ್ ಎನ್ನಲಾಗಿರುವ ನರೇಶ್​ ಹಾಗೂ ಡಿಕೆ ಶಿವಕುಮಾರ್ ಒಟ್ಟಾಗಿರುವ ಫೋಟೋ ಅಪ್​ಲೋಡ್​ ಮಾಡಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ? ಎಂದು ಪ್ರಶ್ನಿಸಿದೆ. ಅಲ್ಲದೇ ಮಾಸ್ಟರ್​ ಮೈಂಡ್ ಮತ್ತು ರಿಂಗ್ ಮಾಸ್ಟರ್​ ಒಂದೇ ಫ್ರೇಮ್​ನಲ್ಲಿ ಸಿಲುಕಿಕೊಂಡಿರುವುದಕ್ಕೂ ನನ್ನನ್ನು ಸಿಲುಕಿಸುವ ಕುತಂತ್ರ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ? ಎಂದು ಪ್ರಶ್ನಿಸಿದೆ.

ನಿನ್ನೆಯಷ್ಟೇ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ್ದ ಬಿಜೆಪಿ, ಆ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು ಹೇಳದೆ ಟಾಂಗ್ ನೀಡಿತ್ತು.

Exit mobile version