• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

12 ಗಂಟೆ ತನಕ ಮಾತ್ರ ದಿನಸಿ ಅಂಗಡಿ ತೆರೆಯಲು ಅವಕಾಶ : ಕಮಿಷನರ್‌

padma by padma
in ಗುಡ್ ನ್ಯೂಸ್, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
12 ಗಂಟೆ ತನಕ ಮಾತ್ರ ದಿನಸಿ ಅಂಗಡಿ ತೆರೆಯಲು ಅವಕಾಶ : ಕಮಿಷನರ್‌
0
SHARES
0
VIEWS
Share on FacebookShare on Twitter

ಬೆಂಗಳೂರು: ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ 8ರಿಂದ ಲಾಕ್‌ಡೌನ್‌ ಆರಂಭವಾಗಿದ್ದು, ಬೆಳ್ಳಗೆ 5 ಗಂಟೆಯಿಂದ 12 ಗಂಟೆ ತನಕ ಮಾತ್ರ ದಿನಸಿ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ಪೊಲೀಸ್ ಕಮಿಷನರ್, ಸಾರ್ವಜನಿಕರು ಲಾಕ್ ಡೌನ್ ಬಗ್ಗೆ ಜಾಗೃತರಾಗಿರಬೇಕು, ಸರ್ಕಾರದ ಆದೇಶದಂತೆ ಲಾಕ್ಡೌನ್ ಶುರುವಾಗಿದೆ. ಬೆಳ್ಳಗೆ 5 ಗಂಟೆಯಿಂದ 12 ಗಂಟೆ ತನಕ ಮಾತ್ರ ದಿನಸಿ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. 12 ಗಂಟೆಯ ನಂತರ ಯಾವುದೇ ಕಾರಣಕ್ಕೂ ಅಂಗಡಿಗಳು ತೆಗೆಯಲು ಅವಕಾಶವಿಲ್ಲ ಎಂದು ಹೇಳಿದರು.

ಫುಡ್ ಡೆಲಿವರಿಯವರು ರಾತ್ರಿ 8ರ ವರೆಗೂ ತಮ್ಮ ಸೇವೆ ನಡೆಸಬಹುದು, ಮೆಡಿಕಲ್ ಶಾಪ್​ಗಳು ಮಾತ್ರ ರಾತ್ರಿವರೆಗೂ ಅನುಮತಿಯಿದೆ. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ ಹೊಂದಿಕೊಂಡಿರುವ ಜಿಲ್ಲೆಗಳಿಗೆ ನಗರಗಳಿಗೆ ಬಂದು ಹೋಗಲು‌ ವಿನಾಯಿತಿ ನೀಡಲಾಗಿದೆ. ಅಲ್ಪಕಾಲದ ಲಾಕ್ ಡೌನ್ ಇರುವುದರಿಂದ ಯಾವುದೇ ಪಾಸ್ ವ್ಯವಸ್ಥೆ ಇರುವುದಿಲ್ಲ. ನಗರದಿಂದ ಹೊರಗೆ ಹೋಗಬಹುದು. ರಾಜ್ಯದ ಬೇರೆ ಭಾಗದಿಂದ ನಗರಕ್ಕೆ ಬರುವವರು ಸೇವಾ ಸಿಂದುವಿನಲ್ಲಿ ಅನುಮತಿ ಪಡೆದಿರಬೇಕು. ವಿಮಾನ ನಿಲ್ದಾಣದ ರಸ್ತೆಯ ಫ್ಲೈಒವರ್ ಬಿಟ್ಟು ಎಲ್ಲ ಫ್ಲೈ ಒವರ್ ಗಳು ಬಂದ್ ಆಗಲಿವೆ. ಏರ್ಪೋರ್ಟ್ ಮತ್ತು ರೈಲ್ವೆಗೆ ಟ್ಯಾಕ್ಸಿ ಸೇವೆ ಇರುತ್ತೆ ಎಂದು ಆಯುಕ್ತರು ಹೇಳಿದರು.

ಸಾರ್ವಜನಿಕರು ಸೇವೆ ಸಲ್ಲಿಸಿ

ಕಳೆದ ಬಾರಿ ಲಾಕ್‌ಡೌನ್‌ ಸಂದರ್ಭದಲ್ಲಿ ಪೊಲೀಸ್‌ ಸಿಬ್ಬಂದಿಗಳ ಕೊರತೆ ಕಾಡಿತ್ತು, ಅಲ್ಲದೇ ಸಿಬ್ಬಂದಿ ಬಹಳಷ್ಟು ಕೆಲಸ ಮಾಡಿ ಸೋಂಕಿಗೆ ತುತ್ತಾಗಿದ್ದರೂ ಕೂಡಾ. 8 ಮಂದಿ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಈ ಬಾರಿ ಸಾರ್ವಜನಿಕ ಸಹಕಾರ ಮುಖ್ಯ ಎಂದಿರುವ ಆಯುಕ್ತರು, ಬೆಂಗಳೂರು ಮಟ್ಟದಲ್ಲಿ ಸಿವಿಲ್ ಡಿಫೆನ್ಸ್ ಬಳಕೆ ಮಾಡಿಕೊಳ್ಳುವುದಾಗಿ ಹೇಳಿಕೊಂಡಿದ್ದಾರೆ. ಸೇವೆಗೆ ಸೇರಲಿಚ್ಚಿಸುವವರು ಠಾಣೆಯ ಕೆಲಸ, ಚೆಕ್ ಪಾಯಿಂಟ್​ಗಳಲ್ಲಿ ಸಿಬ್ಬಂದಿ ಜೊತೆ ಕೆಲಸ ಮಾಡ್ತಾರೆ. ಸಾರ್ವಜನಿಕರ ಸೇವೆಗೆ ಯಾವುದೇ ಸಂಬಳ ಇರುವುದಿಲ್ಲ. ಸಾರ್ವಜನಿಕ ಸೇವೆಯನ್ನು ವಾರಕ್ಕೆ 10 ಗಂಟೆ ಕಾಲ ಇರುತ್ತೆ. 18 ರಿಂದ 40 ವರ್ಷದ ಜನರನ್ನು ಬಳಸಿಕೊಳ್ಳಲಾಗುವುದು. ಅವರಿಗೆ ಹ್ಯಾಟ್ ಕೊಡಲಾಗುವುದು. ಆ ಸೇವೆ ಮಾಡಬಯಸುವವರು ಆನ್​ಲೈನ್​ನಲ್ಲೇ ಅಪ್ಲಿಕೇಶನ್ ಹಾಕಬಹುದು. ವಾಲೆಂಟಿಯರ್ಸ್ ಸೇವೆಯನ್ನು ನಗರದಲ್ಲಿ ಮೊಟ್ಟಮೊದಲ ಬಾರಿಗೆ ಬಳಸಿಕೊಳ್ಳುತ್ತಿದ್ದೇವೆ. ಇವರಿಗೆ ಯಾವುದೇ ಆಯುಧ ಕೊಡುವುದಿಲ್ಲ ಎಂದು ತಿಳಿಸಿದರು.

Related News

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!
ರಾಜಕೀಯ

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!

March 25, 2023
ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.