ಕೋವಿಡ್-19 ಲಸಿಕೆ: ನಿಲ್ಲದ ಬಿಜೆಪಿ-ಕಾಂಗ್ರೆಸ್ ಜಟಾಪಟಿ: ಲಸಿಕೆ ಕುರಿತು ಬಿಜೆಪಿ ನಾಯಕರಿಂದ ತಪ್ಪುಸಂದೇಶ: ಡಿಕೆಶಿ ಕಿಡಿ

ಬೆಂಗಳೂರು, ಮೇ. 26: ಮಹಾಮಾರಿ ಕೊರೊನಾ ಸೋಂಕಿನ ಲಸಿಕೆ ವಿಷಯಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಆರೋಪ-ಪ್ರತ್ಯಾರೋಪಗಳ ಜಟಾಪಟಿ ಮುಂದುವರಿದಿದೆ.

ಕೋವಿಡ್-19 ಲಸಿಕೆ ಕುರಿತು ಕಾಂಗ್ರೆಸ್ ನಾಯಕರು ಸುಳ್ಳು ಸುದ್ದಿ ಹರಡಿಸುವ ಮೂಲಕ ಜನರ ದಿಕ್ಕು ತಪ್ಪಿಸಿ, ಭಯದ ವಾತಾವರಣ ನಿರ್ಮಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರು, ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದೀಗ, ಈ ಬಗ್ಗೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ನಾಯಕರು ಲಸಿಕೆಯ ಕುರಿತಂತೆ ತಪ್ಪುಸಂದೇಶಗಳನ್ನು ಹರಡುತ್ತಿರುವ ಮಾಹಿತಿಗಳು ಬರುತ್ತಿವೆ.‌ ಇಂತಹ ಅಪಾಯಕಾರಿ ನಡೆಯ ಮೂಲಕ ಲಸಿಕೆ ಪ್ರಕರಣದಲ್ಲಿ ಬಿಜೆಪಿ ವೈಫಲ್ಯವನ್ನು ಜನರು ಪ್ರಶ್ನಿಸದಂತೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಅಲ್ಲದೇ, ಬಿಜೆಪಿಯಿಂದ ಲಸಿಕೆ ನೀಡಲು ಸಾಧ್ಯವಾಗದಿದ್ದರೆ ಅವೈಜ್ಞಾನಿಕ ಮಾಹಿತಿ ನೀಡುವುದನ್ನು ನಿಲ್ಲಿಸಬೇಕು ಎಂದು ಡಿ.ಕೆ.ಶಿವಕುಮಾರ್, ಟ್ವೀಟ್ ಮೂಲಕ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Exit mobile version