ಪತ್ರಕರ್ತರಿಗೆ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ; ಸಿಎಂ ಯಡಿಯೂರಪ್ಪ ಆದೇಶ

ಬೆಂಗಳೂರು, ಮೇ. 06: ಕೋವಿಡ್ ಎರಡನೇ ಅಲೆಯ ಮಧ್ಯೆ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರನ್ನು ಕೋವಿಡ್ ಮುಂಚೂಣಿ ವಾರಿಯರ್ಸ್ ಎಂದು ರಾಜ್ಯ ಸರ್ಕಾರ ಪರಿಗಣಿಸಿ ಈಗಾಗಲೇ ಘೋಷಿಸಿದೆ.

ಕೋವಿಡ್ ಸೋಂಕಿಗೆ ಈಗಾಗಲೇ ದೇಶದ ಅಲ್ಲಲ್ಲಿ ಕೆಲವು ಪತ್ರಕರ್ತರು ನಿಧನರಾಗಿದ್ದಾರೆ, ಇಂತಹ ಸಂದರ್ಭದಲ್ಲಿ ಗಂಭೀರವಾಗಿ ತೆಗೆದುಕೊಂಡ ರಾಜ್ಯ ಸರ್ಕಾರ ಪತ್ರಕರ್ತರು ಮತ್ತು ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ನೀಡಲು ಎಲ್ಲಾ ವ್ಯವಸ್ಥೆಗಳನ್ನು ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ ನೀಡಿದ್ದಾರೆ.

ಕೊರೋನಾ ಸಂಬಂಧಿತ ವರದಿ ಮಾಡುವ ಪತ್ರಕರ್ತರಿಗೆ ಆರಂಭದ ಹಂತದಲ್ಲಿ ಸರ್ಕಾರದಿಂದ ಕೊರೋನಾ ಲಸಿಕೆ ಸಿಗುವ ಸಾಧ್ಯತೆಯಿದೆ.

Exit mobile version