• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಎಸಿ ಬಸ್ಸಿನಲ್ಲಿ ಯಾತ್ರೆ ಮಾಡಿದ್ರೆ ಜನರ ಸಮಸ್ಯೆ ಅರ್ಥವಾಗೋಲ್ಲ: ರಾಗಾ ವಿರುದ್ದ ಮಿತ್ರಪಕ್ಷ ಸಿಪಿಎಂ ಕಿಡಿ!

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ಎಸಿ ಬಸ್ಸಿನಲ್ಲಿ ಯಾತ್ರೆ ಮಾಡಿದ್ರೆ ಜನರ ಸಮಸ್ಯೆ ಅರ್ಥವಾಗೋಲ್ಲ: ರಾಗಾ ವಿರುದ್ದ ಮಿತ್ರಪಕ್ಷ ಸಿಪಿಎಂ ಕಿಡಿ!
0
SHARES
51
VIEWS
Share on FacebookShare on Twitter

Tiruvanthapura: ಕಾಂಗ್ರೆಸ್ ಹಾಗೂ ಎಡಪಕ್ಷ ಸಿಪಿಎಂ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ರಾಹುಲ್ ಗಾಂಧಿ (Rahul Gandhi) ಅವರ ವಿರುದ್ದ ಇದೀಗ ಸಿಪಿಎಂ ನಾಯಕರು ತೀವ್ರ ಟೀಕಾಪ್ರಹಾರ ನಡೆಸಿದ್ದಾರೆ. ಈ ಮಧ್ಯೆ ರಾಹುಲ್ ಗಾಂಧಿ ಅವರ ಡಿಎನ್ಎ ಪ್ರಶ್ನಿಸಿ ಸಿಪಿಎಂ ಬೆಂಬಲಿತ ಪಕ್ಷೇತರ ಶಾಸಕ ಅನ್ವರ್ ವಿವಾದಾತ್ಮಕ ಹೇಳಿಕೆ ನೀಡಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ.

ಕೇರಳದ (Kerala) ಮಲಪ್ಪುರಂನ ಸಿಪಿಎಂ ಪಕ್ಷದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿರುವ ಶಾಸಕ ಅನ್ವರ್, ಕಾಂಗ್ರೆಸ್ ನಾಯಕ ರಾಹುಲ್ ಅವರಿಗೆ ಗಾಂಧಿ ಹೆಸರನ್ನು ಬಳಸುವ ಹಕ್ಕು ಇಲ್ಲ. ಜವಾಹರಲಾಲ್ ನೆಹರೂ ಅವರ ಕುಟುಂಬದಲ್ಲಿ ರಾಹುಲ್ ಗಾಂಧಿ ಜನಿಸಿದ್ದಾರಾ ಎಂಬುದರ ಬಗ್ಗೆ ಅನುಮಾನವಿದೆ. ಹೀಗಾಗಿ ರಾಹುಲ್ ಗಾಂಧಿ ಅವರ ಡಿಎನ್ಎ (DNA) ಪರೀಕ್ಷಿಸಬೇಕು ಎಂದಿದ್ದಾರೆ. ಅನ್ವರ್ ನೀಡಿರುವ ಹೇಳಿಕೆ ಕುರಿತು ಕಿಡಿಕಾರಿರುವ ಕಾಂಗ್ರೆಸ್, ಈ ಹೇಳಿಕೆ ಹಿಂದೆ ಮುಖ್ಯಮಂತ್ರಿ ಪಿಣರಾಯ್ ಅವರ ಪಾತ್ರವಿದೆ ಎಂದು ಆರೋಪಿಸಿದೆ. ಕೂಡಲೇ ಅನ್ವರ್ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಕೋರಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಇನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ವ್ಯಂಗ್ಯವಾಡಿದ ಬಳಿಕ ಈ ಹೇಳಿಕೆ ಬಂದಿದೆ. ಇನ್ನು ಪಿಣರಾಯಿ ವಿಜಯನ್ ಅವರು ಅನ್ವರ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ದೇಶದ ಉದ್ದಗಲಕ್ಕೂ ಯಾತ್ರೆ ನಡೆಸಿ, ನಡೆದಾಡಿದ್ದರಿಂದ ರಾಹುಲ್ ಗಾಂಧಿ ಜ್ಞಾನ ಸಂಪಾದಿಸಿರಬಹುದೆಂದು ನಾನು ಭಾವಿಸಿದ್ದೆ. ಆದರೆ ಕೇರಳದಲ್ಲಿ ನೀಡಿದ ಅವರ ಹೇಳಿಕೆ ರಾಜಕೀಯ ನಾಯಕನಿಗೆ ಶೋಭೆ ತರುವುದಿಲ್ಲ. ಈ ರೀತಿಯ ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ಗಾಂಧಿ ಅವರು ಬಿಜೆಪಿಗೆ ಅವರು ಸಹಾಯ ಮಾಡಬಾರದು ಎಂದು ಟೀಕಿಸಿದ್ದರು.

ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳಾಗಿರುವ ಕಾಂಗ್ರೆಸ್ ಮತ್ತು ಸಿಪಿಐಂ (CPM) ಕೇರಳದಲ್ಲಿ ಪರಸ್ಪರ ವಾಗ್ದಾಳಿ ನಡೆಸುತ್ತಿವೆ. ಕಳೆದ ವಾರ ಕೇರಳದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕೇರಳದ ಮುಖ್ಯಮಂತ್ರಿ ಜೈಲಿಗೆ ಹೋಗಿಲ್ಲ ಅಂದರೆ ಅರ್ಥ ಏನು? ನಾನು ಬಿಜೆಪಿ ಮೇಲೆ 24×7 ದಾಳಿ ಮಾಡುತ್ತಿದ್ದೇನೆ. ಆದರೆ ಕೇರಳದ ಸಿಎಂ ನನ್ನ ಮೇಲೆ 24×7 ದಾಳಿ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದರು.

ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಎಲ್ಡಿಎಫ್ (LDF) ಸಮನ್ವಯಕಾರ ಇಪಿ ಜಯರಾಜನ್, ನಮ್ಮ ನಾಯಕ ಪಿಣರಾಯಿ ವಿಜಯನ್ ಅವರು ಬೆಳ್ಳಿಯ ಚಮಚದೊಂದಿಗೆ ಹುಟ್ಟಿದ ವ್ಯಕ್ತಿಯಲ್ಲ, ವಿದೇಶದಿಂದ ಆಮದು ಮಾಡಿದ ಹಾಲು ಕುಡಿದು ಬೆಳೆದ ವ್ಯಕ್ತಿಯೂ ಅಲ್ಲ. ಎಸಿ ಬಸ್ಸಿನಲ್ಲಿ ಯಾತ್ರೆ ನಡೆಸಿದರೆ ಜನರ ಸಮಸ್ಯೆ ಅರ್ಥವಾಗುವುದಿಲ್ಲ. ಇನ್ನು ನ್ಯಾಷನಲ್ ಹೆರಾಲ್ಡ್ ಕೇಸ್ನಲ್ಲಿ (National Herald Case) ರಾಹುಲ್ ಗಾಂಧಿ ಬಂಧನ ಯಾಕೆ ಆಗಲಿಲ್ಲ? ಎಂದು ಪ್ರಶ್ನಿಸಿ ತಿರುಗೇಟು ನೀಡಿದ್ದರು.

Tags: LDFPinarayi VijayanRahul GandhiThiruvanthapura

Related News

ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಸೂಚನೆ: ಆರೋಗ್ಯ ಸೇವೆ ಬಲಪಡಿಸಲು ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
ಪ್ರಮುಖ ಸುದ್ದಿ

ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಸೂಚನೆ: ಆರೋಗ್ಯ ಸೇವೆ ಬಲಪಡಿಸಲು ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ

July 22, 2026
ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ: ಹೈಕಮಾಂಡ್ ತೀರ್ಮಾನಕ್ಕಾಗಿ ಕಾಯುತ್ತಿರುವ ರಾಜ್ಯ ಕಾಂಗ್ರೆಸ್
ಪ್ರಮುಖ ಸುದ್ದಿ

ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ: ಹೈಕಮಾಂಡ್ ತೀರ್ಮಾನಕ್ಕಾಗಿ ಕಾಯುತ್ತಿರುವ ರಾಜ್ಯ ಕಾಂಗ್ರೆಸ್

July 22, 2026
ಒಮ್ಮೆ ನಿರ್ಧಾರ ಮಾಡಿದರೆ ಜಾರಿ ಖಚಿತ : ಶರಾವತಿ ಯೋಜನೆ ಕುರಿತು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ
ಪ್ರಮುಖ ಸುದ್ದಿ

ಒಮ್ಮೆ ನಿರ್ಧಾರ ಮಾಡಿದರೆ ಜಾರಿ ಖಚಿತ : ಶರಾವತಿ ಯೋಜನೆ ಕುರಿತು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

July 21, 2026
ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ
ದೇಶ-ವಿದೇಶ

ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ

July 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.