ನಾಪತ್ತೆಯಾಗಿದ್ದ ಸಿ.ಪಿ ಯೋಗೇಶ್ವರ್ ಅವರ ಬಾವ ಮಹದೇವಯ್ಯ ಶವವಾಗಿ ಪತ್ತೆ

Chamarajanagar: ಬಿಜೆಪಿ ಎಂಎಲ್​ಸಿ ಸಿಪಿ ಯೋಗೇಶ್ವರ್ (CPYogeshwar – brother-in-law dead) ಅವರ ಬಾವ ಮಹದೇವಯ್ಯನವರು ಚಾಮರಾಜನಗರ (Chamarajanagar)

ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಬಳಿ ನಿರ್ಜನ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೊನ್ನೆಯಷ್ಟೇ ನಾಪತ್ತೆಯಾಗಿದ್ದರು. ಈಗ ಅವರು ಶವವಾಗಿ ಪತ್ತೆಯಾಗಿದ್ದಾರೆ.

ಮಹದೇವಯ್ಯ (Mahadevaiah) ಅವರನ್ನು ಬೆಡ್​​ಶೀಟ್ ಹೊದಿಸಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದ್ದು, ಕೊಲೆಯಾದ ಸ್ಥಳದಿಂದ 6 ಕಿಲೋ ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ.

ಸಿಸಿ ಕ್ಯಾಮರಾ (CC Camera) ದೃಶ್ಯ ಆಧರಿಸಿ ಪೊಲೀಸರು ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಕಳೆದ ನವೆಂಬರ್ 2 ರಂದೇ ಮಹದೇವಯ್ಯ ಅವರ ಕೊಲೆಯಾಗಿದೆ ಅನ್ನೋ ಮಾಹಿತಿ ಪೊಲೀಸರಿಗೆ

ಲಭ್ಯವಾಗಿದ್ದು, ಸಿಸಿ ಕ್ಯಾಮೆರಾ ದೃಶ್ಯಗಳು ಪ್ರಬಲ (CPYogeshwar – brother-in-law dead) ಸಾಕ್ಷ್ಯ ಒದಗಿಸಿದೆ.

ನವೆಂಬರ್ (November) 2 ರಂದು ಬೆಳಗ್ಗೆ 4.05ಕ್ಕೆ ಅಪರಿಚಿತರು ರಾಮಪುರಕ್ಕೆ ಎಂಟ್ರಿಯಾಗಿದ್ದಾರೆ. 4.20ಕ್ಕೆ ರಾಮಪುರದಿಂದ (Ramapura) ಹೋಗಿದ್ದಾರೆ. ಸುಮಾರು 15 ನಿಮಿಷ ಕಾಡಿನ

ದಾರಿಯಲ್ಲಿ ಓಡಾಡಿರುವ ಅಪಹರಣಕಾರರು, ಹನೂರು- ನಾಲ್ ರೋಡ್- ಈರೋಡ್ (Hanur- Nall Road- Erode) ರಸ್ತೆಯಲ್ಲಿ ಸಂಚಾರ ಮಾಡಿದ್ದಾರೆ. ವಾಪಸ್ ಹೋಗುವಾಗ ರಾಮಪುರದಲ್ಲಿ

ಕಾರು ನಿಲ್ಲಿಸಿ ಎಸ್ಕೇಪ್ (Escape) ಆಗಿದ್ದಾರೆ. ಮಹದೇವಯ್ಯ ಅವರನ್ನು ಬೇರೆ ಕಡೆ ಕೊಲೆ ಮಾಡಿ ಮಲೆ ಮಹದೇಶ್ವರ ಬೆಟ್ಟಕ್ಕೆ ತಂದಿರುವ ಸಾಧ್ಯತೆ ಇದೆ. ಅಪರಿಚಿತರ ಚಲನವಲನದ ಆಧಾರದ

ಮೇಲೆ ಪೊಲೀಸರು, ಅರಣ್ಯ ಇಲಾಖೆಯಿಂದ ಕೂಂಬಿಂಗ್ ಕಾರ್ಯಾಚರಣೆ ನಡೆದಿದೆ.

ಏನಿದು ಪ್ರಕರಣ?
ಮಹದೇವಯ್ಯ ಅವರು ಡಿಸೆಂಬರ್ (December) 2 ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಿಂದ ಏಕಾಏಕಿ ನಾಪತ್ತೆಯಾಗಿದ್ದರು. ಇವರ ಹುಡುಕಾಟಕ್ಕೆ

ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿತ್ತು. ಡಿಸೆಂಬರ್ 3 ರಂದು ಮಹದೇವಯ್ಯ ಅವರ ಕಾರು ಹನೂರು ತಾಲೂಕಿನ ರಾಮಾಪುರದಲ್ಲಿ ಪತ್ತೆಯಾಗಿತ್ತು.

ಕಾರು ಪತ್ತೆಯಾದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ರಾಮನಗರ ಪೊಲೀಸರು ತನಿಖಾ ತಂಡಕ್ಕೆ ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದು, ಈ ವೇಳೆ ಕಾರಿನಲ್ಲಿ ರಕ್ತದ ಕಲೆ ಇರುವುದು ಪತ್ತೆಯಾಗಿತ್ತು. ಹೀಗಾಗಿ

ಪೊಲೀಸರು ಶೋಧಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಿದ್ದರು.

ಡಿಸೆಂಬರ್ 1ರ ಮಧ್ಯರಾತ್ರಿ ರಾಮನಗರ ಜಿಲ್ಲೆ ಚನ್ನಪಟ್ಟಣ (Channapattana) ಹೊರವಲಯದಲ್ಲಿರುವ ತೋಟದ ಮನೆಗೆ ನುಗ್ಗಿದ್ದ ಮೂವರು ಅಪರಿಚಿತರು, ಮಹದೇವಯ್ಯ ಅವರಿಂದ ಲಾಕರ್ ತೆಗೆಸಿ ಹಣ,

ದಾಖಲೆ ಕೊಂಡೊಯ್ದಿರುವ ಅನುಮಾನ ವ್ಯಕ್ತವಾಗಿತ್ತು. ಮಹದೇವಯ್ಯ ಕಾರಿನಲ್ಲೇ ಅವರನ್ನು ಕರೆದೊಯ್ದಿರುವ ಅಪರಿಚಿತರು, ಚನ್ನಪಟ್ಟಣದಿಂದ ಚಾಮರಾಜನಗರ ಜಿಲ್ಲೆಗೆ ಕರೆದೊಯ್ದಿದ್ದರು.

ಮಾರ್ಗಮಧ್ಯೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ (Kollegala) ಬಳಿ ಡಾಬಾದಲ್ಲಿ ಪಾರ್ಟಿ ಮಾಡಿರುವ ದುಷ್ಕರ್ಮಿಗಳ ಗುಂಪು, ಅದೇ ಮಾರ್ಗದ ಅಂಗಡಿಯೊಂದರಲ್ಲಿ ನೀರಿನ ಬಾಟಲಿ ಖರೀದಿಸಿತ್ತು.

ನಂತರ ಹನೂರು ತಾಲೂಕಿನ ನಾಲಾರೋಡ್​ ಬಳಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಇದನ್ನು ಓದಿ: ಈಶಾನ್ಯ ರೈಲ್ವೆಯಲ್ಲಿ 1104 ಹುದ್ದೆಗಳಿಗೆ ಅರ್ಜಿ ಆಹ್ವಾನ ; ಇಂದೇ ಅರ್ಜಿ ಸಲ್ಲಿಸಿ

Exit mobile version