ಭಾರತ ತಂಡ ಸೋಲಿಗೆ ಪಟಾಕಿ ಸಿಡಿಸಿ ಸಂಭ್ರಮಿಸಿದವರ ವಿರುದ್ದ ಸೆಹ್ವಾಗ್ ಆಕ್ರೋಶ

ನವದೆಹಲಿ ಅ 25 : ಭಾರತ ತಂಡದ ವಿರುದ್ದ ಪಾಕಿಸ್ತಾನ ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಾಕಿಸ್ತಾನ ಮಾತ್ರವಲ್ಲದೆ ಭಾರತದಲ್ಲೂ ಕೂಡ ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು.

ಈ ಬಗ್ಗೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ಸೆಹ್ವಾಗ್‌ ಹಬ್ಬ ಹರಿದಿನಗಳಲ್ಲಿ ಭಾರತದಲ್ಲಿ ಪಟಾಕಿ ನಿಷೇಧ ನಿಯಮವನ್ನು ಉಲ್ಲಂಘಿಸುವ ಕ್ರಿಕೆಟ್ ಅಭಿಮಾನಿಗಳ ಬೂಟಾಟಿಕೆಯ ವಿರುದ್ಧ ವಾಗ್ದಾಳಿ ನಡೆಸಿದರು. ದೀಪಾವಳಿಯ ಸಮಯದಲ್ಲಿ ಪಟಾಕಿಗಳನ್ನು ನಿಷೇಧಿಸಲಾಗಿದೆ ಆದರೆ ನಿನ್ನೆ ಭಾರತದ ಕೆಲವು ಭಾಗಗಳಲ್ಲಿ ಪಾಕಿಸ್ತಾನದ ವಿಜಯವನ್ನು ಆಚರಿಸಲು ಪಟಾಕಿಗಳನ್ನು ಸಿಡಿಸಲಾಯಿತು. ಕ್ರಿಕೆಟ್ ಗೆಲುವಿನ ಸಂಭ್ರಮಾಚರಣೆ ಒಳ್ಳೆಯದು, ಆದರೆ, ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಏನು ಹಾನಿಯಾಗುತ್ತದೆ .ಇದರ ಹಿಂದೆ ಹಿಪೋಕ್ರಸಿ ಇದೆ ಎಂದು ಸೆಹ್ವಾಗ್ ಟ್ವೀಟ್‌ನಲ್ಲಿ ಹೇಳಿದ್ದಾರೆ. ಸೆಹ್ವಾಗ್ ಅವರ ಟ್ವೀಟ್‌ಗೆ ಸಾಮಾಜಿಕ ಮಾಧ್ಯಮದಲ್ಲಿ ನೆಟಿಜನ್‌ಗಳಿಂದ ಗಮನಾರ್ಹ ಪ್ರತಿಕ್ರಿಯೆಗಳು ಬಂದಿವೆ.  ನಿನ್ನೆ ನಡೆದ ಪಂದ್ಯದಲ್ಲಿ ಪಾಕಿಸ್ತಾನ ತಂಡ 10 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿತ್ತು.

Exit mobile version